ಬೆಂಗಳೂರು: ಪರಿಸರ, ಪ್ರಕೃತಿ ಮತ್ತು ಅರಣ್ಯ ಸಂರಕ್ಷಣೆಗೆ ಕರ್ನಾಟಕದ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗಿರುವ ಒಲವು ಪ್ರೀತಿ ಮತ್ತು ಬದ್ಧತೆಗೆ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಅರಣ್ಯ ಸಚಿವರು ಹಾಗೂ ಅರಣ್ಯಾಧಿಕಾರಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಈಶ್ವರ ಖಂಡ್ರೆ ಅವರ ಮನದ ಭಾವನೆಗಳಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.
ತೆಲುಗು ಮತ್ತು ಕನ್ನಡ ಭಾಷೆಯ ಲಿಪಿಯಲ್ಲಿ ಸಾಮ್ಯತೆ ಇದೆ ಎಂದ ಅವರು ರಾಷ್ಟ್ರಕವಿ ಕುವೆಂಪು ಅವರ “ಅರಣ್ಯಕ್ಕೆ ಹಾಡು ಹಾಡುವ ಮುನ್ನ ನಾನು ನನ್ನ ಮನದ ಮುಂದೆ ನಿಲ್ಲುತ್ತೇನೆ” ಎಂಬ ಸಾಲುಗಳನ್ನು ಉಲ್ಲೇಖಿಸಿ ತಮಗೆ ಈ ಸಭೆಯಿಂದ ಕನ್ನಡ ಕಲಿಯುವ ಪ್ರೇರಣೆ ಲಭಿಸಿದೆ ಎಂದರು.
ಚಿತ್ರನಟರು ಆದ ಅವರು ಕನ್ನಡದ ಮೇರು ನಟ ಡಾ. ರಾಜಕುಮಾರ್ ಅವರ ಗಂಧದಗುಡಿ ಚಿತ್ರದ ಉಲ್ಲೇಖ ಮಾಡಿ ಅರಣ್ಯ ಸಂರಕ್ಷಣೆ ಸಂದೇಶ ಸಾರಿದ ಚಿತ್ರ ಎಂದರು.
ಶ್ರೀಶೈಲ ಮತ್ತು ತಿರುಪತಿಯಲ್ಲಿ ಕರ್ನಾಟಕದ ಭಕ್ತಾದಿಗಳಿಗೆ ಅನುಕೂಲತೆ ಕಲ್ಪಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದರು.
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…
ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…
ಕೆ.ಎಸ್. ಚಂದ್ರಶೇಖರ ಮೂರ್ತಿ ಮೈಸೂರು: ಸ್ವಾತಂತ್ರ್ಯವೆಂದರೆ ಕೇವಲ ಧ್ವಜಾರೋಹಣ, ದೇಶಭಕ್ತಿ ಗೀತೆಗಳು ಮತ್ತು ಸಿಹಿ ಹಂಚಿಕೆಯ ಸಂಭ್ರಮವಲ್ಲ. ಅದು ಸ್ವಾತಂತ್ರ್ಯದ…
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…