ರಾಯಚೂರು: ಕೆಪಿಎಸ್ಸಿ ವಿರುದ್ಧ ಒಂದಲ್ಲ ಒಂದು ಆರೋಪಗಳು ಕೇಳಿ ಬರುತ್ತಲೇ ಇವೆ. ಸರಿಯಾಗಿ ಪ್ರಶ್ನೆ ಪತ್ರಿಕೆ ತಯಾರಿಸುತ್ತಿಲ್ಲ. ಪದೇ ಪದೇ ಮರುಕಳಿಸುವ ತಪ್ಪು ಭಾಷಾಂತರಗಳು ಎನ್ನುವ ಆರೋಪಗಳು ಕೇಳಿಬರುತ್ತಿದೆ. ಈ ಮಧ್ಯ ಇದೀಗ ಪಿಡಿಒ ಪರೀಕ್ಷೆಯಲ್ಲೂ ಸಹ ಕೆಪಿಎಸ್ಸಿ ಪರೀಕ್ಷಾ ಮಂಡಳಿ ಎಡವಟ್ಟು ಮಾಡಿಕೊಂಡಿದ್ದು, ಪರೀಕ್ಷೆ ಬರೆಯಲು ಬಂದಿರುವ ಅಭ್ಯರ್ಥಿಗಳಿಗೆ ಪ್ರಶ್ನೆ ಪತ್ರಿಕೆ ತಲುಪಿಸದೆ ಎಡವಟ್ಟು ಮಾಡಿದೆ.
ರಾಯಚೂರಿನ ಸಿಂಧನೂರು ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ನಡೆಯಬೇಕಿದ್ದ ಪಿಡಿಒ ಪರೀಕ್ಷೆಗೆ ಹಾಜರಾಗಿದ್ದ 830 ಅಭ್ಯರ್ಥಿಗಳ ಪೈಕಿ 818 ವಿದ್ಯಾರ್ಥಿಗಳಿಗೆ ಪರೀಕ್ಷಾ ಕೊಠಡಿಯಲ್ಲಿ ಪ್ರಶ್ನೆ ಪತ್ರಿಕೆಯನ್ನೇ ಕೊಡದ ಕಾರಣ ಪರೀಕ್ಷಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.
ಪರೀಕ್ಷಾರ್ಥಿಗಳು ಕೆಪಿಎಸ್ಸಿ ಪರೀಕ್ಷಾ ಮಂಡಳಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಪಿಎಸ್ಸಿಯು ಪ್ರತಿ ಬಾರಿ ಒಂದಿಲ್ಲೊಂದು ಎಡವಟ್ಟು ಮಾಡುತ್ತಿದೆ. ಒಂದು ಪರೀಕ್ಷಾ ಕೊಠಡಿಯಲ್ಲಿ 12 ಅಭ್ಯರ್ಥಿಗಳಿಗೆ ಮಾತ್ರ ಪ್ರಶ್ನೆ ಪತ್ರಿಕೆ ಕೊಡಲಾಗಿತ್ತು. ಇದರಿಂದ ಉಳಿದವರು ಆಕ್ರೋಶ ವ್ಯಕ್ತಪಡಿಸಿ, ಪ್ರಶ್ನೆ ಪತ್ರಿಕೆ ಸಿಗುವವರಿಗೂ ಪರೀಕ್ಷೆ ಬರೆಯದಂತೆ ತಾಕೀತು ಮಾಡಿದ್ದಾರೆ. ಉಳಿದವರಿಗೆ 45 ನಿಮಿಷ ಆದರೂ ಪ್ರಶ್ನೆ ಪತ್ರಿಕೆ ಕೊಡದಿದ್ದಾಗ ಅಭ್ಯರ್ಥಿಗಳು ಘೋಷಣೆಗಳನ್ನು ಕೂಗತ್ತ ಕೊಠಡಿಯಿಂದ ಹೊರ ನಡೆದರು.
ಬಳಿಕ ರಾಯಚೂರು-ಕಷ್ಠರಿ ಹೆದ್ದಾರಿ ರಸ್ತೆಯ ಮೇಲೆ ಕುಳಿತು ರಸ್ತೆ ತಡೆ ನಡೆಸಿದರು. ಕೂಡಲೇ ಸ್ಥಳಕ್ಕೆ ಬಂದ ಪೊಲೀಸ್ ಹಾಗೂ ತಹಶೀಲ್ದಾರ್ ಅರುಣ್ ಕುಮಾರ್ ಅಭ್ಯರ್ಥಿಗಳ ಮನವೊಲಿಸುವ ಪ್ರಯತ್ನ ಮಾಡಿದರು. ಗೊಂದಲ ನಿವಾರಣೆಗೆ ಪ್ರಯತ್ನ ಮಾಡಿದರೂ ಅಭ್ಯರ್ಥಿಗಳು ಕೆಪಿಎಸ್ಸಿ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…