Categories: ರಾಜ್ಯ

PDO ಪರೀಕ್ಷೆ| ಅಭ್ಯರ್ಥಿಗಳಿಗೆ ತಲುಪದ ಪೂರ್ಣ ಪ್ರಶ್ನೆ ಪ್ರತ್ರಿಕೆ; ಪ್ರತಿಭಟನೆ

ರಾಯಚೂರು: ಕೆಪಿಎಸ್‌ಸಿ ವಿರುದ್ಧ ಒಂದಲ್ಲ ಒಂದು ಆರೋಪಗಳು ಕೇಳಿ ಬರುತ್ತಲೇ ಇವೆ. ಸರಿಯಾಗಿ ಪ್ರಶ್ನೆ ಪತ್ರಿಕೆ ತಯಾರಿಸುತ್ತಿಲ್ಲ. ಪದೇ ಪದೇ ಮರುಕಳಿಸುವ ತಪ್ಪು ಭಾಷಾಂತರಗಳು ಎನ್ನುವ ಆರೋಪಗಳು ಕೇಳಿಬರುತ್ತಿದೆ. ಈ ಮಧ್ಯ ಇದೀಗ  ಪಿಡಿಒ ಪರೀಕ್ಷೆಯಲ್ಲೂ ಸಹ ಕೆಪಿಎಸ್‌ಸಿ ಪರೀಕ್ಷಾ ಮಂಡಳಿ ಎಡವಟ್ಟು ಮಾಡಿಕೊಂಡಿದ್ದು, ಪರೀಕ್ಷೆ ಬರೆಯಲು ಬಂದಿರುವ ಅಭ್ಯರ್ಥಿಗಳಿಗೆ ಪ್ರಶ್ನೆ ಪತ್ರಿಕೆ ತಲುಪಿಸದೆ ಎಡವಟ್ಟು ಮಾಡಿದೆ.

ರಾಯಚೂರಿನ ಸಿಂಧನೂರು ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ನಡೆಯಬೇಕಿದ್ದ ಪಿಡಿಒ ಪರೀಕ್ಷೆಗೆ ಹಾಜರಾಗಿದ್ದ 830 ಅಭ್ಯರ್ಥಿಗಳ ಪೈಕಿ 818 ವಿದ್ಯಾರ್ಥಿಗಳಿಗೆ ಪರೀಕ್ಷಾ ಕೊಠಡಿಯಲ್ಲಿ ಪ್ರಶ್ನೆ ಪತ್ರಿಕೆಯನ್ನೇ ಕೊಡದ ಕಾರಣ ಪರೀಕ್ಷಾರ್ಥಿಗಳು ದಿಢೀರ್‌ ಪ್ರತಿಭಟನೆ ನಡೆಸಿದ್ದಾರೆ.

ಪರೀಕ್ಷಾರ್ಥಿಗಳು ಕೆಪಿಎಸ್‌ಸಿ ಪರೀಕ್ಷಾ ಮಂಡಳಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಪಿಎಸ್‌ಸಿಯು ಪ್ರತಿ ಬಾರಿ ಒಂದಿಲ್ಲೊಂದು ಎಡವಟ್ಟು ಮಾಡುತ್ತಿದೆ. ಒಂದು ಪರೀಕ್ಷಾ ಕೊಠಡಿಯಲ್ಲಿ 12 ಅಭ್ಯರ್ಥಿಗಳಿಗೆ ಮಾತ್ರ ಪ್ರಶ್ನೆ ಪತ್ರಿಕೆ ಕೊಡಲಾಗಿತ್ತು. ಇದರಿಂದ ಉಳಿದವರು ಆಕ್ರೋಶ ವ್ಯಕ್ತಪಡಿಸಿ, ಪ್ರಶ್ನೆ ಪತ್ರಿಕೆ ಸಿಗುವವರಿಗೂ ಪರೀಕ್ಷೆ ಬರೆಯದಂತೆ ತಾಕೀತು ಮಾಡಿದ್ದಾರೆ. ಉಳಿದವರಿಗೆ 45 ನಿಮಿಷ ಆದರೂ ಪ್ರಶ್ನೆ ಪತ್ರಿಕೆ ಕೊಡದಿದ್ದಾಗ ಅಭ್ಯರ್ಥಿಗಳು ಘೋಷಣೆಗಳನ್ನು ಕೂಗತ್ತ ಕೊಠಡಿಯಿಂದ ಹೊರ ನಡೆದರು.

ಬಳಿಕ ರಾಯಚೂರು-ಕಷ್ಠರಿ ಹೆದ್ದಾರಿ ರಸ್ತೆಯ ಮೇಲೆ ಕುಳಿತು ರಸ್ತೆ ತಡೆ ನಡೆಸಿದರು. ಕೂಡಲೇ ಸ್ಥಳಕ್ಕೆ ಬಂದ ಪೊಲೀಸ್ ಹಾಗೂ ತಹಶೀಲ್ದಾರ್ ಅರುಣ್ ಕುಮಾರ್​ ಅಭ್ಯರ್ಥಿಗಳ ಮನವೊಲಿಸುವ ಪ್ರಯತ್ನ ಮಾಡಿದರು. ಗೊಂದಲ ನಿವಾರಣೆಗೆ ಪ್ರಯತ್ನ ಮಾಡಿದರೂ ಅಭ್ಯರ್ಥಿಗಳು ಕೆಪಿಎಸ್‌ಸಿ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

59 mins ago

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

13 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

14 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

16 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

16 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

20 hours ago