Categories: ರಾಜ್ಯ

PDO ಪರೀಕ್ಷೆ| ಅಭ್ಯರ್ಥಿಗಳಿಗೆ ತಲುಪದ ಪೂರ್ಣ ಪ್ರಶ್ನೆ ಪ್ರತ್ರಿಕೆ; ಪ್ರತಿಭಟನೆ

ರಾಯಚೂರು: ಕೆಪಿಎಸ್‌ಸಿ ವಿರುದ್ಧ ಒಂದಲ್ಲ ಒಂದು ಆರೋಪಗಳು ಕೇಳಿ ಬರುತ್ತಲೇ ಇವೆ. ಸರಿಯಾಗಿ ಪ್ರಶ್ನೆ ಪತ್ರಿಕೆ ತಯಾರಿಸುತ್ತಿಲ್ಲ. ಪದೇ ಪದೇ ಮರುಕಳಿಸುವ ತಪ್ಪು ಭಾಷಾಂತರಗಳು ಎನ್ನುವ ಆರೋಪಗಳು ಕೇಳಿಬರುತ್ತಿದೆ. ಈ ಮಧ್ಯ ಇದೀಗ  ಪಿಡಿಒ ಪರೀಕ್ಷೆಯಲ್ಲೂ ಸಹ ಕೆಪಿಎಸ್‌ಸಿ ಪರೀಕ್ಷಾ ಮಂಡಳಿ ಎಡವಟ್ಟು ಮಾಡಿಕೊಂಡಿದ್ದು, ಪರೀಕ್ಷೆ ಬರೆಯಲು ಬಂದಿರುವ ಅಭ್ಯರ್ಥಿಗಳಿಗೆ ಪ್ರಶ್ನೆ ಪತ್ರಿಕೆ ತಲುಪಿಸದೆ ಎಡವಟ್ಟು ಮಾಡಿದೆ.

ರಾಯಚೂರಿನ ಸಿಂಧನೂರು ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ನಡೆಯಬೇಕಿದ್ದ ಪಿಡಿಒ ಪರೀಕ್ಷೆಗೆ ಹಾಜರಾಗಿದ್ದ 830 ಅಭ್ಯರ್ಥಿಗಳ ಪೈಕಿ 818 ವಿದ್ಯಾರ್ಥಿಗಳಿಗೆ ಪರೀಕ್ಷಾ ಕೊಠಡಿಯಲ್ಲಿ ಪ್ರಶ್ನೆ ಪತ್ರಿಕೆಯನ್ನೇ ಕೊಡದ ಕಾರಣ ಪರೀಕ್ಷಾರ್ಥಿಗಳು ದಿಢೀರ್‌ ಪ್ರತಿಭಟನೆ ನಡೆಸಿದ್ದಾರೆ.

ಪರೀಕ್ಷಾರ್ಥಿಗಳು ಕೆಪಿಎಸ್‌ಸಿ ಪರೀಕ್ಷಾ ಮಂಡಳಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಪಿಎಸ್‌ಸಿಯು ಪ್ರತಿ ಬಾರಿ ಒಂದಿಲ್ಲೊಂದು ಎಡವಟ್ಟು ಮಾಡುತ್ತಿದೆ. ಒಂದು ಪರೀಕ್ಷಾ ಕೊಠಡಿಯಲ್ಲಿ 12 ಅಭ್ಯರ್ಥಿಗಳಿಗೆ ಮಾತ್ರ ಪ್ರಶ್ನೆ ಪತ್ರಿಕೆ ಕೊಡಲಾಗಿತ್ತು. ಇದರಿಂದ ಉಳಿದವರು ಆಕ್ರೋಶ ವ್ಯಕ್ತಪಡಿಸಿ, ಪ್ರಶ್ನೆ ಪತ್ರಿಕೆ ಸಿಗುವವರಿಗೂ ಪರೀಕ್ಷೆ ಬರೆಯದಂತೆ ತಾಕೀತು ಮಾಡಿದ್ದಾರೆ. ಉಳಿದವರಿಗೆ 45 ನಿಮಿಷ ಆದರೂ ಪ್ರಶ್ನೆ ಪತ್ರಿಕೆ ಕೊಡದಿದ್ದಾಗ ಅಭ್ಯರ್ಥಿಗಳು ಘೋಷಣೆಗಳನ್ನು ಕೂಗತ್ತ ಕೊಠಡಿಯಿಂದ ಹೊರ ನಡೆದರು.

ಬಳಿಕ ರಾಯಚೂರು-ಕಷ್ಠರಿ ಹೆದ್ದಾರಿ ರಸ್ತೆಯ ಮೇಲೆ ಕುಳಿತು ರಸ್ತೆ ತಡೆ ನಡೆಸಿದರು. ಕೂಡಲೇ ಸ್ಥಳಕ್ಕೆ ಬಂದ ಪೊಲೀಸ್ ಹಾಗೂ ತಹಶೀಲ್ದಾರ್ ಅರುಣ್ ಕುಮಾರ್​ ಅಭ್ಯರ್ಥಿಗಳ ಮನವೊಲಿಸುವ ಪ್ರಯತ್ನ ಮಾಡಿದರು. ಗೊಂದಲ ನಿವಾರಣೆಗೆ ಪ್ರಯತ್ನ ಮಾಡಿದರೂ ಅಭ್ಯರ್ಥಿಗಳು ಕೆಪಿಎಸ್‌ಸಿ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

2 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

3 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

5 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

8 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

8 hours ago

ಜಿಬಿಎ ಚುನಾವಣೆಗೆ ಕಾಲಾವಕಾಶ ನೀಡಿದ ಸುಪ್ರೀಂಕೋರ್ಟ್‌

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆ ನಡೆಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ರಿಲೀಫ್‌ ನೀಡಿದೆ. ಜಿಬಿಎ ಚುನಾವಣೆಗೆ…

10 hours ago