ಬೆಂಗಳೂರು: ಪಿ.ಡಿ.ಒ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ತಡವಾಗಿ ಬಂತೆಂದು ಪ್ರತಿಭಟಿಸಿದ ಪರೀಕ್ಷಾರ್ಥಿಗಳ ಮೇಲೆ ಕಾಂಗ್ರೆಸ್ ಸರ್ಕಾರ ಎಫ್.ಐ.ಆರ್ ಹಾಕಿದೆ. ಅದನ್ನು ಹಿಂಪಡೆಯಬೇಕು ಇಲ್ಲವಾದರೆ ಲೋಕ ಸೇವಾ ಆಯೋಗದ ಕಚೇರಿಯ ಮುಂದೆ ಪರೀಕ್ಷಾರ್ಥಿಗಳ ಜೊತೆ ಪ್ರತಿಭಟಿಸುತ್ತೇನೆ ಎಂದು ಶಾಸಕ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಸರ್ಕಾರ ಅಧಿಕಾರಿಗಳ ಹಾಗೂ ಲೋಕ ಸೇವಾ ಆಯೋಗದ ತಪ್ಪಿನಿಂದ ಆದ ಪ್ರಮಾದವನ್ನು ಒಪ್ಪಿಕೊಂಡು ಕೇಸ್ ವಾಪಾಸ್ ಪಡೆಯಬೇಕು. ನ್ಯಾಯಯುತವಾಗಿ ಪ್ರತಿಭಟನೆ ಮಾಡಿದ ಪರೀಕ್ಷಾರ್ಥಿಗಳು ಕೇಸ್ ಹಾಕಿಸಿಕೊಂಡು ಪರದಾಡುತ್ತಿದ್ದಾರೆ. ಆದರೆ, ಲೋಕಸೇವಾ ಆಯೋಗದ ಸಮನ್ವಯದ ಕೊರತೆ ಹಾಗೂ ಬೇಜವಾಬ್ದಾರಿಯಿಂದ ಪ್ರಶ್ನೆ ಪತ್ರಿಕೆ 45 ನಿಮಿಷ ತಡವಾಗಿ ಬಂದದ್ದನ್ನು ಕರ್ತವ್ಯನಿರತ ಸಿಬ್ಬಂದಿಗಳೇ ಒಪ್ಪಿಕೊಂಡಿದ್ದಾರೆ. ಅಲ್ಲದೇ ಒಂದು ಪೇಪರ್ ಸೀಲ್ ಮೊದಲೇ ತೆರೆದಿದ್ದು, ಒಂದು ಕವರ್ ನಲ್ಲಿ 24 ಪ್ರಶ್ನೆ ಪತ್ರಿಕೆ ಇರಬೇಕಾದದ್ದು ಕೇವಲ 12 ಇದ್ದದ್ದನ್ನು ಪ್ರತ್ಯಕ್ಷ ಸಾಕ್ಷಿಗಳು ನೋಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನು ಕರ್ನಾಟಕ ಲೋಕಸೇವಾ ಆಯೋಗ (KPSC) ಒಂದರ ಮೇಲೊಂದು ಲೋಪಗಳನ್ನು ಎಸಗುತ್ತಾ ಪರೀಕ್ಷಾರ್ಥಿಗಳ ಭವಿಷ್ಯವನ್ನು ಹಾಳು ಮಾಡುವುದಲ್ಲದೆ ಅವರ ಮೇಲೆ ಸುಳ್ಳು ಕೇಸು ದಾಖಲಿಸಿ ಕೋರ್ಟು ಕಚೇರಿ ಅಲೆಯುವಂತೆ ಮಾಡುತ್ತಿರುವುದು ಇವರ ಬೇಜವಾಬ್ದಾರಿ, ಅಸಮರ್ಥತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಕಿಡಿಕಾರಿದ್ದಾರೆ.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…