ರಾಜ್ಯ

ಪಿಡಿಒ ಪರೀಕ್ಷಾರ್ಥಿಗಳ ಬಗ್ಗೆ ಎಫ್‌ಐಆರ್‌ ಪ್ರಕರಣ: ಶಾಸಕ ಯತ್ನಾಳ್‌ ಆಕ್ರೋಶ

ಬೆಂಗಳೂರು: ಪಿ.ಡಿ.ಒ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ತಡವಾಗಿ ಬಂತೆಂದು ಪ್ರತಿಭಟಿಸಿದ ಪರೀಕ್ಷಾರ್ಥಿಗಳ ಮೇಲೆ ಕಾಂಗ್ರೆಸ್ ಸರ್ಕಾರ ಎಫ್.ಐ.ಆರ್ ಹಾಕಿದೆ. ಅದನ್ನು ಹಿಂಪಡೆಯಬೇಕು ಇಲ್ಲವಾದರೆ ಲೋಕ ಸೇವಾ ಆಯೋಗದ ಕಚೇರಿಯ ಮುಂದೆ ಪರೀಕ್ಷಾರ್ಥಿಗಳ ಜೊತೆ ಪ್ರತಿಭಟಿಸುತ್ತೇನೆ ಎಂದು ಶಾಸಕ ಯತ್ನಾಳ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಸರ್ಕಾರ ಅಧಿಕಾರಿಗಳ ಹಾಗೂ ಲೋಕ ಸೇವಾ ಆಯೋಗದ ತಪ್ಪಿನಿಂದ ಆದ ಪ್ರಮಾದವನ್ನು ಒಪ್ಪಿಕೊಂಡು ಕೇಸ್ ವಾಪಾಸ್ ಪಡೆಯಬೇಕು. ನ್ಯಾಯಯುತವಾಗಿ ಪ್ರತಿಭಟನೆ ಮಾಡಿದ ಪರೀಕ್ಷಾರ್ಥಿಗಳು ಕೇಸ್ ಹಾಕಿಸಿಕೊಂಡು ಪರದಾಡುತ್ತಿದ್ದಾರೆ. ಆದರೆ, ಲೋಕಸೇವಾ ಆಯೋಗದ ಸಮನ್ವಯದ ಕೊರತೆ ಹಾಗೂ ಬೇಜವಾಬ್ದಾರಿಯಿಂದ ಪ್ರಶ್ನೆ ಪತ್ರಿಕೆ 45 ನಿಮಿಷ ತಡವಾಗಿ ಬಂದದ್ದನ್ನು ಕರ್ತವ್ಯನಿರತ ಸಿಬ್ಬಂದಿಗಳೇ ಒಪ್ಪಿಕೊಂಡಿದ್ದಾರೆ. ಅಲ್ಲದೇ ಒಂದು ಪೇಪರ್ ಸೀಲ್ ಮೊದಲೇ ತೆರೆದಿದ್ದು, ಒಂದು ಕವರ್ ನಲ್ಲಿ 24 ಪ್ರಶ್ನೆ ಪತ್ರಿಕೆ ಇರಬೇಕಾದದ್ದು ಕೇವಲ 12 ಇದ್ದದ್ದನ್ನು ಪ್ರತ್ಯಕ್ಷ ಸಾಕ್ಷಿಗಳು ನೋಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನು ಕರ್ನಾಟಕ ಲೋಕಸೇವಾ ಆಯೋಗ (KPSC) ಒಂದರ ಮೇಲೊಂದು ಲೋಪಗಳನ್ನು ಎಸಗುತ್ತಾ ಪರೀಕ್ಷಾರ್ಥಿಗಳ ಭವಿಷ್ಯವನ್ನು ಹಾಳು ಮಾಡುವುದಲ್ಲದೆ ಅವರ ಮೇಲೆ ಸುಳ್ಳು ಕೇಸು ದಾಖಲಿಸಿ ಕೋರ್ಟು ಕಚೇರಿ ಅಲೆಯುವಂತೆ ಮಾಡುತ್ತಿರುವುದು ಇವರ ಬೇಜವಾಬ್ದಾರಿ, ಅಸಮರ್ಥತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಕಿಡಿಕಾರಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ನಟ ಮಯೂರ್‌ ಪಟೇಲ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಕುಡಿದು ವಾಹನ ಚಾಲನೆ ಮಾಡಿ ಕಾರ್‌ಗಳಿಗೆ ಸರಣಿ ಅಪಘಾತ ಉಂಟು ಮಾಡಿದ ನಟ ಮಯೂರ್‌ ಪಟೇಲ್‌ ವಿರುದ್ಧ ಎಫ್‌ಐಆರ್‌…

16 mins ago

ಮೈಸೂರಿನಲ್ಲಿ ಮುಂದುವರೆದ ಕಾಡು ಪ್ರಾಣಿಗಳ ಹಾವಳಿ

ಮೈಸೂರು: ಜಿಲ್ಲೆಯಲ್ಲಿ ಕಾದು ಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಕಣಿಯನಹುಂಡಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಗ್ರಾಮದ ಕೃಷ್ಣ ಎಂಬುವವರ ಜಮೀನಿನಲ್ಲಿ ಚಿರತೆ…

29 mins ago

ನಂಜನಗೂಡು: ಗುಜರಿಗೆ ಆಕಸ್ಮಿಕ ಬೆಂಕಿ: ಲಕ್ಷಾಂತರ ಮೌಲ್ಯದ ಪದಾರ್ಥಗಳು ಸುಟ್ಟು ಕರಕಲು

ನಂಜನಗೂಡು: ಗುಜರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ಮೌಲ್ಯದ ಪದಾರ್ಥಗಳು ಸುಟ್ಟು ಕರಕಲಾಗಿರುವ ಘಟನೆ ನಂಜನಗೂಡಿನ ಶಂಕರಪುರ ಬಡಾವಣೆಯಲ್ಲಿ…

42 mins ago

ಮೈಸೂರಿನಲ್ಲಿ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ: ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಸ್ಪಷ್ಟನೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎನ್‌ಸಿಬಿ ದಾಳಿ ವೇಳೆ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ ಎಂದು ಪೊಲೀಸ್‌ ಕಮಿಷನರ್‌ ಸೀಮಾ…

1 hour ago

ಮೈಸೂರು: ಕೆಮಿಕಲ್‌ ಘಟಕದ ಮೇಲೆ ದೆಹಲಿ ಪೊಲೀಸರ ದಾಳಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್‌ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್‌ಗಳನ್ನು…

2 hours ago

ಓದುಗರ ಪತ್ರ: ಜಗಕೆ ಮಾದರಿ!

ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…

5 hours ago