ರಾಜ್ಯ

ಪಿಡಿಒ ಪರೀಕ್ಷಾರ್ಥಿಗಳ ಬಗ್ಗೆ ಎಫ್‌ಐಆರ್‌ ಪ್ರಕರಣ: ಶಾಸಕ ಯತ್ನಾಳ್‌ ಆಕ್ರೋಶ

ಬೆಂಗಳೂರು: ಪಿ.ಡಿ.ಒ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ತಡವಾಗಿ ಬಂತೆಂದು ಪ್ರತಿಭಟಿಸಿದ ಪರೀಕ್ಷಾರ್ಥಿಗಳ ಮೇಲೆ ಕಾಂಗ್ರೆಸ್ ಸರ್ಕಾರ ಎಫ್.ಐ.ಆರ್ ಹಾಕಿದೆ. ಅದನ್ನು ಹಿಂಪಡೆಯಬೇಕು ಇಲ್ಲವಾದರೆ ಲೋಕ ಸೇವಾ ಆಯೋಗದ ಕಚೇರಿಯ ಮುಂದೆ ಪರೀಕ್ಷಾರ್ಥಿಗಳ ಜೊತೆ ಪ್ರತಿಭಟಿಸುತ್ತೇನೆ ಎಂದು ಶಾಸಕ ಯತ್ನಾಳ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಸರ್ಕಾರ ಅಧಿಕಾರಿಗಳ ಹಾಗೂ ಲೋಕ ಸೇವಾ ಆಯೋಗದ ತಪ್ಪಿನಿಂದ ಆದ ಪ್ರಮಾದವನ್ನು ಒಪ್ಪಿಕೊಂಡು ಕೇಸ್ ವಾಪಾಸ್ ಪಡೆಯಬೇಕು. ನ್ಯಾಯಯುತವಾಗಿ ಪ್ರತಿಭಟನೆ ಮಾಡಿದ ಪರೀಕ್ಷಾರ್ಥಿಗಳು ಕೇಸ್ ಹಾಕಿಸಿಕೊಂಡು ಪರದಾಡುತ್ತಿದ್ದಾರೆ. ಆದರೆ, ಲೋಕಸೇವಾ ಆಯೋಗದ ಸಮನ್ವಯದ ಕೊರತೆ ಹಾಗೂ ಬೇಜವಾಬ್ದಾರಿಯಿಂದ ಪ್ರಶ್ನೆ ಪತ್ರಿಕೆ 45 ನಿಮಿಷ ತಡವಾಗಿ ಬಂದದ್ದನ್ನು ಕರ್ತವ್ಯನಿರತ ಸಿಬ್ಬಂದಿಗಳೇ ಒಪ್ಪಿಕೊಂಡಿದ್ದಾರೆ. ಅಲ್ಲದೇ ಒಂದು ಪೇಪರ್ ಸೀಲ್ ಮೊದಲೇ ತೆರೆದಿದ್ದು, ಒಂದು ಕವರ್ ನಲ್ಲಿ 24 ಪ್ರಶ್ನೆ ಪತ್ರಿಕೆ ಇರಬೇಕಾದದ್ದು ಕೇವಲ 12 ಇದ್ದದ್ದನ್ನು ಪ್ರತ್ಯಕ್ಷ ಸಾಕ್ಷಿಗಳು ನೋಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನು ಕರ್ನಾಟಕ ಲೋಕಸೇವಾ ಆಯೋಗ (KPSC) ಒಂದರ ಮೇಲೊಂದು ಲೋಪಗಳನ್ನು ಎಸಗುತ್ತಾ ಪರೀಕ್ಷಾರ್ಥಿಗಳ ಭವಿಷ್ಯವನ್ನು ಹಾಳು ಮಾಡುವುದಲ್ಲದೆ ಅವರ ಮೇಲೆ ಸುಳ್ಳು ಕೇಸು ದಾಖಲಿಸಿ ಕೋರ್ಟು ಕಚೇರಿ ಅಲೆಯುವಂತೆ ಮಾಡುತ್ತಿರುವುದು ಇವರ ಬೇಜವಾಬ್ದಾರಿ, ಅಸಮರ್ಥತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಕಿಡಿಕಾರಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಬಂಡೀಪುರ ಅರಣ್ಯದಲ್ಲಿ ನೀರಿನ ಸಮಸ್ಯೆಗೆ ಬ್ರೇಕ್: ಸೋಲಾರ್‌ ಬೋರ್‌ವೆಲ್‌ ಮೂಲಕ ನೀರು ತುಂಬಿಸಲು ಪ್ಲಾನ್‌

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್‌ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…

20 mins ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.…

45 mins ago

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

1 hour ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

1 hour ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

2 hours ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

5 hours ago