ಬೆಂಗಳೂರು: ಪಿ.ಡಿ.ಒ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ತಡವಾಗಿ ಬಂತೆಂದು ಪ್ರತಿಭಟಿಸಿದ ಪರೀಕ್ಷಾರ್ಥಿಗಳ ಮೇಲೆ ಕಾಂಗ್ರೆಸ್ ಸರ್ಕಾರ ಎಫ್.ಐ.ಆರ್ ಹಾಕಿದೆ. ಅದನ್ನು ಹಿಂಪಡೆಯಬೇಕು ಇಲ್ಲವಾದರೆ ಲೋಕ ಸೇವಾ ಆಯೋಗದ ಕಚೇರಿಯ ಮುಂದೆ ಪರೀಕ್ಷಾರ್ಥಿಗಳ ಜೊತೆ ಪ್ರತಿಭಟಿಸುತ್ತೇನೆ ಎಂದು ಶಾಸಕ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಸರ್ಕಾರ ಅಧಿಕಾರಿಗಳ ಹಾಗೂ ಲೋಕ ಸೇವಾ ಆಯೋಗದ ತಪ್ಪಿನಿಂದ ಆದ ಪ್ರಮಾದವನ್ನು ಒಪ್ಪಿಕೊಂಡು ಕೇಸ್ ವಾಪಾಸ್ ಪಡೆಯಬೇಕು. ನ್ಯಾಯಯುತವಾಗಿ ಪ್ರತಿಭಟನೆ ಮಾಡಿದ ಪರೀಕ್ಷಾರ್ಥಿಗಳು ಕೇಸ್ ಹಾಕಿಸಿಕೊಂಡು ಪರದಾಡುತ್ತಿದ್ದಾರೆ. ಆದರೆ, ಲೋಕಸೇವಾ ಆಯೋಗದ ಸಮನ್ವಯದ ಕೊರತೆ ಹಾಗೂ ಬೇಜವಾಬ್ದಾರಿಯಿಂದ ಪ್ರಶ್ನೆ ಪತ್ರಿಕೆ 45 ನಿಮಿಷ ತಡವಾಗಿ ಬಂದದ್ದನ್ನು ಕರ್ತವ್ಯನಿರತ ಸಿಬ್ಬಂದಿಗಳೇ ಒಪ್ಪಿಕೊಂಡಿದ್ದಾರೆ. ಅಲ್ಲದೇ ಒಂದು ಪೇಪರ್ ಸೀಲ್ ಮೊದಲೇ ತೆರೆದಿದ್ದು, ಒಂದು ಕವರ್ ನಲ್ಲಿ 24 ಪ್ರಶ್ನೆ ಪತ್ರಿಕೆ ಇರಬೇಕಾದದ್ದು ಕೇವಲ 12 ಇದ್ದದ್ದನ್ನು ಪ್ರತ್ಯಕ್ಷ ಸಾಕ್ಷಿಗಳು ನೋಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನು ಕರ್ನಾಟಕ ಲೋಕಸೇವಾ ಆಯೋಗ (KPSC) ಒಂದರ ಮೇಲೊಂದು ಲೋಪಗಳನ್ನು ಎಸಗುತ್ತಾ ಪರೀಕ್ಷಾರ್ಥಿಗಳ ಭವಿಷ್ಯವನ್ನು ಹಾಳು ಮಾಡುವುದಲ್ಲದೆ ಅವರ ಮೇಲೆ ಸುಳ್ಳು ಕೇಸು ದಾಖಲಿಸಿ ಕೋರ್ಟು ಕಚೇರಿ ಅಲೆಯುವಂತೆ ಮಾಡುತ್ತಿರುವುದು ಇವರ ಬೇಜವಾಬ್ದಾರಿ, ಅಸಮರ್ಥತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಕಿಡಿಕಾರಿದ್ದಾರೆ.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…