ರಾಯಚೂರು: ರಾಯಚೂರಿನ ಸಿಂಧನೂರು ನಗರದ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಪಿಡಿಓ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ.
ಕರ್ನಾಟಕ ಲೋಕಸೇವಾ ಆಯೋಗದಿಂದ ಇಂದು ಹೈದರಾಬಾದ್-ಕರ್ನಾಟಕ ವೃಂದದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಪರೀಕ್ಷೆಯನ್ನು ನಿಗದಿಗೊಳಿಸಲಾಗಿತ್ತು. ಆದರೆ, ಪರೀಕ್ಷೆಗೂ ಮುನ್ನವೇ ರಾಯಚೂರಿನ ಸಿಂಧನೂರು ನಗರದ ಪದವಿ ಪೂರ್ವ ಕಾಲೇಜಿನ ಪ್ರಶ್ನೆ ಪತ್ರಿಕೆ ಬಂಡಲಿನಲ್ಲಿ 24 ಪ್ರಶ್ನೆ ಪತ್ರಿಕೆಗಳ ಬದಲಾಗಿ ಕೇವಲ 12 ಪ್ರಶ್ನೆ ಪತ್ರಿಕೆಗಳು ಮಾತ್ರ ಇದ್ದವು.
ಈ ಒಂದು ಘಟನೆಯಿಂದ ಆಯೋಗ ಯಾವ ರೀತಿ ಪರೀಕ್ಷೆಗೆ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂಬುದಕ್ಕೆ ಒಂದು ಸಣ್ಣ ನಿದರ್ಶನವಾಗಿದೆ. ಈ ಕೂಡಲೇ ಆಯೋಗವು ತನ್ನ ತಪ್ಪನ್ನು ಒಪ್ಪಿಕೊಂಡು ತಕ್ಷಣ ಪತ್ರಿಕಾ ಪ್ರಕಟಣೆ ಹೊರಡಿಸುವುದರ ಮೂಲಕ ಮರು ಪರೀಕ್ಷೆ ನಡೆಸಬೇಕು.
ಕೂಡಲೇ ಮರು ಪರೀಕ್ಷೆಗೆ ಸರ್ಕಾರ ಆದೇಶ ನೀಡಬೇಕೆಂದು ಲಕ್ಷಾಂತರ ಉದ್ಯೋಗ ಆಕಾಂಕ್ಷಿಗಳು ಆಗ್ರಹಿಸಿದ್ದು, ಕೆಪಿಎಸ್ಸಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.