ರಾಯಚೂರು: ರಾಯಚೂರಿನ ಸಿಂಧನೂರು ನಗರದ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಪಿಡಿಓ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ.
ಕರ್ನಾಟಕ ಲೋಕಸೇವಾ ಆಯೋಗದಿಂದ ಇಂದು ಹೈದರಾಬಾದ್-ಕರ್ನಾಟಕ ವೃಂದದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಪರೀಕ್ಷೆಯನ್ನು ನಿಗದಿಗೊಳಿಸಲಾಗಿತ್ತು. ಆದರೆ, ಪರೀಕ್ಷೆಗೂ ಮುನ್ನವೇ ರಾಯಚೂರಿನ ಸಿಂಧನೂರು ನಗರದ ಪದವಿ ಪೂರ್ವ ಕಾಲೇಜಿನ ಪ್ರಶ್ನೆ ಪತ್ರಿಕೆ ಬಂಡಲಿನಲ್ಲಿ 24 ಪ್ರಶ್ನೆ ಪತ್ರಿಕೆಗಳ ಬದಲಾಗಿ ಕೇವಲ 12 ಪ್ರಶ್ನೆ ಪತ್ರಿಕೆಗಳು ಮಾತ್ರ ಇದ್ದವು.
ಈ ಒಂದು ಘಟನೆಯಿಂದ ಆಯೋಗ ಯಾವ ರೀತಿ ಪರೀಕ್ಷೆಗೆ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂಬುದಕ್ಕೆ ಒಂದು ಸಣ್ಣ ನಿದರ್ಶನವಾಗಿದೆ. ಈ ಕೂಡಲೇ ಆಯೋಗವು ತನ್ನ ತಪ್ಪನ್ನು ಒಪ್ಪಿಕೊಂಡು ತಕ್ಷಣ ಪತ್ರಿಕಾ ಪ್ರಕಟಣೆ ಹೊರಡಿಸುವುದರ ಮೂಲಕ ಮರು ಪರೀಕ್ಷೆ ನಡೆಸಬೇಕು.
ಕೂಡಲೇ ಮರು ಪರೀಕ್ಷೆಗೆ ಸರ್ಕಾರ ಆದೇಶ ನೀಡಬೇಕೆಂದು ಲಕ್ಷಾಂತರ ಉದ್ಯೋಗ ಆಕಾಂಕ್ಷಿಗಳು ಆಗ್ರಹಿಸಿದ್ದು, ಕೆಪಿಎಸ್ಸಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…