ಬೆಂಗಳೂರು: ಅರ್ಹತೆ ಇಲ್ಲದೇ ಬಿಪಿಎಲ್ ಕಾರ್ಡ್ ಬಳಕೆ ಮಾಡುತ್ತಿರುವವರು ದಂಡಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಆಹಾರ ಸಚಿವ ಮುನಿಯಪ್ಪ ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅರ್ಹತೆ ಇಲ್ಲದವರು ಸಾಕಷ್ಟು ಜನ ಬಿಪಿಎಲ್ ಕಾರ್ಡ್ ಬಳಕೆ ಮಾಡುತ್ತಿದ್ದಾರೆ. ಕಾರ್ಡ್ ವಾಪಸ್ ಮಾಡಲು ಇನ್ನೊಂದು ವಾರದಲ್ಲಿ ಜಾಹಿರಾತು ಹೊರಡಿಸುತ್ತೇವೆ. ಮನವಿಯ ನಂತರವೂ ಕಾರ್ಡ್ ಬಳಕೆ ಮುಂದುವರಿದರೆ, ಕಾನೂನಿನಲ್ಲಿ ಅವಕಾಶವಿರುವ ದಂಡ ಪ್ರಯೋಗ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಡ್ ಪರಿಶೀಲನೆ ಮಾಡಲಾಗುತ್ತದೆ. ಈ ವೇಳೆ ಸಿಕ್ಕಿ ಹಾಕಿಕೊಂಡರೆ ದಂಡ ನೀಡಬೇಕಾಗುತ್ತದೆ ಎಂದಿದ್ದಾರೆ.
ಇದೇ ವೇಳೆ ಬಿಪಿಎಲ್ ಕಾರ್ಡ್ ಮಾನದಂಡಗಳನ್ನು ಪರಿಷ್ಕರಣೆ ಮಾಡೋ ಬಗ್ಗೆ ವಿಚಾರ ಮಾಡಿ ಕ್ಯಾಬಿನೆಟ್ನಲ್ಲಿ ಈ ಬಗ್ಗೆ ನಿರ್ಧಾರ ಮಾಡೋದಾಗಿ ತಿಳಿಸಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…