ಹಾಸನ/ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಪ್ರಿನ್ಸಿಪಲ್ ಸಿ.ಜೆ, ಜೆಎಂಎಫ್ಸಿ ನ್ಯಾಯಾಧೀಶರಾದ ಎಸ್. ಸಿದ್ದರಾಮ ಅವರು ಹೊಳೆ ನರಸೀಪುರದ ತಮ್ಮ ನಿವಾಸದಲ್ಲಿ ವಿಚಾರಣೆ ನಡೆಸಿ ಈ ಆದೇಶ ಹೊರಡಿಸಿದ್ದಾರೆ.
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಹಿರಿಯೂರು ಬಳಿ ದೇವರಾಜೇಗೌಡನನ್ನು ಬಂಧಿಸಲಾಗಿತ್ತು. ದೇವರಾಜೇಗೌಡ ಮತ್ತೆರೆಡು ಆಡಿಯೋ ರಿಲೀಸ್ ಮಾಡಿದ ಎಂಟೇ ನಿಮಿಷದಲ್ಲಿ ಮೊಬೈಲ್ ಲೊಕೇಷನ್ ಮೂಲಕ ಆತನನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ. ನಿನ್ನೆ ರಾತ್ರಿ ಬಂಧಿಸಿ, ಇಂದು ಹೊಳೆನರಸೀಪುರಕ್ಕೆ ಕರೆತರಲಾಗಿದೆ.
ದೇವರಾಜೇಗೌಡರನ್ನು ವಶಕ್ಕೆ ಪಡೆದ ಪೊಲೀಸರು ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸಿದ ನಂತರ ಜಡ್ಜ್ ಮುಂದೆ ಹಾಜರುಪಡಿಸಿದ್ದಾರೆ. ಬಳಿಕ ವಿಚಾರಣೆ ನಡೆಸಿದ ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದ್ದಾರೆ.
ಇನ್ನು ಇವರ ಬಂಧನಕ್ಕೆ ಬಿಜೆಪಿ ಹಲವು ಮುಂಖಡರು ಆಕೋಶ ಹೊರಹಾಕಿದ್ದಾರೆ. ಬಂಧಿಸದೇ ಇದ್ದಲ್ಲಿ ಸರ್ಕಾರದ ವಿರುದ್ಧ ಹಲವು ವಿಚಾರಗಳು ಹೊರ ಬರುವುದನ್ನು ತಡೆಯಲು ಬಂಧಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.
ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…
ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…
ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…
19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…
ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…
ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…