ಹಾಸನ/ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಪ್ರಿನ್ಸಿಪಲ್ ಸಿ.ಜೆ, ಜೆಎಂಎಫ್ಸಿ ನ್ಯಾಯಾಧೀಶರಾದ ಎಸ್. ಸಿದ್ದರಾಮ ಅವರು ಹೊಳೆ ನರಸೀಪುರದ ತಮ್ಮ ನಿವಾಸದಲ್ಲಿ ವಿಚಾರಣೆ ನಡೆಸಿ ಈ ಆದೇಶ ಹೊರಡಿಸಿದ್ದಾರೆ.
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಹಿರಿಯೂರು ಬಳಿ ದೇವರಾಜೇಗೌಡನನ್ನು ಬಂಧಿಸಲಾಗಿತ್ತು. ದೇವರಾಜೇಗೌಡ ಮತ್ತೆರೆಡು ಆಡಿಯೋ ರಿಲೀಸ್ ಮಾಡಿದ ಎಂಟೇ ನಿಮಿಷದಲ್ಲಿ ಮೊಬೈಲ್ ಲೊಕೇಷನ್ ಮೂಲಕ ಆತನನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ. ನಿನ್ನೆ ರಾತ್ರಿ ಬಂಧಿಸಿ, ಇಂದು ಹೊಳೆನರಸೀಪುರಕ್ಕೆ ಕರೆತರಲಾಗಿದೆ.
ದೇವರಾಜೇಗೌಡರನ್ನು ವಶಕ್ಕೆ ಪಡೆದ ಪೊಲೀಸರು ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸಿದ ನಂತರ ಜಡ್ಜ್ ಮುಂದೆ ಹಾಜರುಪಡಿಸಿದ್ದಾರೆ. ಬಳಿಕ ವಿಚಾರಣೆ ನಡೆಸಿದ ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದ್ದಾರೆ.
ಇನ್ನು ಇವರ ಬಂಧನಕ್ಕೆ ಬಿಜೆಪಿ ಹಲವು ಮುಂಖಡರು ಆಕೋಶ ಹೊರಹಾಕಿದ್ದಾರೆ. ಬಂಧಿಸದೇ ಇದ್ದಲ್ಲಿ ಸರ್ಕಾರದ ವಿರುದ್ಧ ಹಲವು ವಿಚಾರಗಳು ಹೊರ ಬರುವುದನ್ನು ತಡೆಯಲು ಬಂಧಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.
ನವದೆಹಲಿ: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಂದು ಪ್ರಧಾನಿ…
ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಇಲ್ಲಿನ ಸಫ್ದರ್ಜಂಗ್…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…