ಹಾಸನ/ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಪ್ರಿನ್ಸಿಪಲ್ ಸಿ.ಜೆ, ಜೆಎಂಎಫ್ಸಿ ನ್ಯಾಯಾಧೀಶರಾದ ಎಸ್. ಸಿದ್ದರಾಮ ಅವರು ಹೊಳೆ ನರಸೀಪುರದ ತಮ್ಮ ನಿವಾಸದಲ್ಲಿ ವಿಚಾರಣೆ ನಡೆಸಿ ಈ ಆದೇಶ ಹೊರಡಿಸಿದ್ದಾರೆ.
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಹಿರಿಯೂರು ಬಳಿ ದೇವರಾಜೇಗೌಡನನ್ನು ಬಂಧಿಸಲಾಗಿತ್ತು. ದೇವರಾಜೇಗೌಡ ಮತ್ತೆರೆಡು ಆಡಿಯೋ ರಿಲೀಸ್ ಮಾಡಿದ ಎಂಟೇ ನಿಮಿಷದಲ್ಲಿ ಮೊಬೈಲ್ ಲೊಕೇಷನ್ ಮೂಲಕ ಆತನನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ. ನಿನ್ನೆ ರಾತ್ರಿ ಬಂಧಿಸಿ, ಇಂದು ಹೊಳೆನರಸೀಪುರಕ್ಕೆ ಕರೆತರಲಾಗಿದೆ.
ದೇವರಾಜೇಗೌಡರನ್ನು ವಶಕ್ಕೆ ಪಡೆದ ಪೊಲೀಸರು ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸಿದ ನಂತರ ಜಡ್ಜ್ ಮುಂದೆ ಹಾಜರುಪಡಿಸಿದ್ದಾರೆ. ಬಳಿಕ ವಿಚಾರಣೆ ನಡೆಸಿದ ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದ್ದಾರೆ.
ಇನ್ನು ಇವರ ಬಂಧನಕ್ಕೆ ಬಿಜೆಪಿ ಹಲವು ಮುಂಖಡರು ಆಕೋಶ ಹೊರಹಾಕಿದ್ದಾರೆ. ಬಂಧಿಸದೇ ಇದ್ದಲ್ಲಿ ಸರ್ಕಾರದ ವಿರುದ್ಧ ಹಲವು ವಿಚಾರಗಳು ಹೊರ ಬರುವುದನ್ನು ತಡೆಯಲು ಬಂಧಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.
ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…
ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…
ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ…
ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ…
ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ…