ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ-ದಿನೇ ರಾಜ್ಯ ರಾಜಕೀಯದಲ್ಲಿ ಹೊಸ-ಹೊಸ ವಿಷಯಗಳು ಹೊರಬುರುತ್ತಲೇ ಇವೆ.
ಇದೇ ಪ್ರಕರಣದಲ್ಲಿ ಬಂಧಿಯಾಗಿರುವ ವಕೀಲ ದೇವರಾಜೇಗೌಡರು ಡಿಸಿಎಂ ಡಿಕೆ ಶಿವಕುಮಾರ್ ಮೇಲೆ 100 ಕೋಟಿ ರೂ. ಆರೋಪ ಮಾಡಿದ ಬೆನ್ನಲ್ಲೇ ಜಾ.ದಳ ತಮ್ಮ ಟ್ವಿಟ್ಟರ್ನಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಕೆಂಡಕಾರಿದ್ದಾರೆ.
ದೇವರಾಜೇಗೌಡರ ಹೇಳಿಕೆ ಬೆನ್ನಲ್ಲೇ ಉಳಿದ ನಾಲ್ಕು ಜನರ ಹೆಸರನ್ನು ಜಾ.ದಳ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಬಹಿರಂಗಗೊಳಿಸಿದೆ. ಇದೊಂದು ಸಿಡಿ ಶಿವಕುಮಾರ್ ಪೆನ್ಡ್ರೈವ್ ಗ್ಯಾಂಗ್ ಆಗಿದ್ದು, ೧. ಡಿಸಿಎಂ ಡಿಕೆ ಶಿವಕುಮಾರ್, ೨. ಕೃಷಿ ಸಚಿವ ಚೆಲುವರಾಯಸ್ವಾಮಿ, ೩. ಕಂದಾಯ ಸಚಿವ ಕೃಷ್ಣಭೈರೇಗೌಡ, ೪. ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, + ಇನ್ನೂ ಒಬ್ಬ ಸಚಿವ, ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಎಂದು ಆರೋಪ ಮಾಡಿದ್ದಾರೆ.
ಮುಂದುವರೆದು ಇವರೆಲ್ಲರೂ ಹೊರಡಿಸಿರುವ ಸಂಚು ಏ ಗೊತ್ತಾ? ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರಿಗೆ ಕೆಟ್ಟ ಹೆಸರು ತರುವುದು. ಸಂಚು ಸಾಕಾರಗೊಳಿಸಲು ಸಿಡಿ ಶಿವಕುಮಾರ್ ಸಾಹೇಬ್ರು ವಕೀಲರಾ ದೇವರಾಜೇಗೌಡರಿಗೆ ನೀಡಿದ ಆಫ್ರ್ ಬರೋಬ್ಬರಿ 100 ಕೋಟಿ ಎಂದು ಬರೆದುಕೊಂಡು ಆಕ್ರೋಶ ಹೊರಹಾಕಿದ್ದಾರೆ.
https://x.com/JanataDal_S/status/1791476656143814874
ದೇವರಾಜೇಗೌಡ ಆರೋಪವೇನು?
ಪೆನ್ಡ್ರೈವ್ ತಯಾರಿಸಿದ್ದು, ಡಿಕೆ ಶಿವಕುಮಾರ್ ಅವರು, ಇದನ್ನು ಹ್ಯಾಂಡಲ್ ಮಾಡಲು ನಾಲ್ಕು ಸಚಿವರ ಸಮಿತಿಯನ್ನು ರಚಿಸಿದರು. ಅಲ್ಲದೇ ಡಿಕಿ ಶಿವಕುಮಾರ್ ಪೆನ್ಡ್ರೈವ್ ಹಂಚಲು ಹೇಳಿದ್ದು ಎಚ್ಡಿ ಕುಮಾರಸ್ವಾಮಿ ಎಂದು ಹೇಳಲು ನನಗೆ 100ಕೋಟಿ ರೂ ಆಫರ್ ಮಾಡಲಾಗಿತ್ತು ಎಂದು ದೂರಿನಲ್ಲಿ ತಿಳಿಸಿದ್ದರು.
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…
ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ರಾಜ್ಯ ಸರ್ಕಾರ ರಿಲೀಫ್ ನೀಡಿದೆ. ವಾಟಾಳ್ ನಾಗರಾಜ್ ಮೇಲಿನ ಕೇಸ್ಗಳನ್ನು ಸರ್ಕಾರ ಹಿಂಪಡೆಯಲು…
ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…
ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…
ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…