ಬೆಂಗಳೂರು : ರಾಜ್ಯದಲ್ಲಿ ಹಾಲಿನ ಬೆಲೆಯನ್ನು ಹೆಚ್ಚು ಮಾಡಿಲ್ಲ . ಅದರ ಪೊಟ್ಟಣದಲ್ಲಿ ಹೆಚ್ಚಿನ ಪ್ರಮಾಣದ ಹಾಲಿಗೆ ಗ್ರಾಹಕರು ಹಣ ನೀಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾಗರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಹಾಲಿನ ಪೊಟ್ಟಣಗಳಲ್ಲಿ ಒದಗಿಸುತ್ತಿರುವ ಹೆಚ್ಚುವರಿ ಹಾಲಿಗೆ ಗ್ರಾಹಕರಿಂದ ಹಣ ಪಡೆಯಲಾಗುತ್ತಿದೆ. ಮತ್ತು ಆ ಹಣ ನೇರವಾಗಿ ರೈತರಿಗೆ ಹೋಗುತ್ತದೆ ಎಂದರು.
ಅಲ್ಲದೆ ಹಾಲು ಉತ್ಪಾದಕರಿಗೆ ೨ ರೂ ಇದ್ದ ಸಬ್ಸಿಡಿ ಯನ್ನ ೫ ರೂ ಗೆ ಹೆಚ್ಚಿಸಿದ್ದು ನಾನು, ಆರ್ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮಾಹಿತಿ ಇಲ್ಲದೆ ಹೇಳಿಕೆಗಳನ್ನು ನೀಡುತ್ತಾರೆ. ನಮ್ಮ ಸರ್ಕಾರ ರೈತರಿಗೆ ಪ್ರತಿದಿನ ರೂ 5 ಕೋಟಿ ಪ್ರೋತ್ಸಾ ಹ ಧನ ನೀಡುತ್ತಿದೆ ಅದು ತಿಂಗಳಿಗೆ ₹ 150 ಕೋಟಿ ಮತ್ತು ವರ್ಷಕ್ಕೆ ₹ 1800 ಕೋಟಿ ಆಗುತ್ತದೆ ಎಂದು ಹೇಳಿದರು. ಇದೇ ವೇಳೆ ಮಾಧ್ಯಮದವರು ಸರ್ಕಾರ ರೈತರ ಸಬ್ಸಿಡಿ ಬಾಕಿ ಉಳಿಸಿಕೊಂಡಿದೆಯಲ್ಲಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಅದು ನಾವು ಉಳಿಸಿಕೊಂಡಿರೋದು ಅಲ್ಲ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ₹700 ಕೋಟಿ ಬಾಕಿಯುಳಿಸಿಕೊಂಡಿತ್ತು ಅದನ್ನು ನಮ್ಮ ಸರ್ಕಾರ ಚುಕ್ತಾ ಮಾಡುತ್ತಿದೆ ಎಂದು ಹೇಳಿದರು
ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ಅವರ ಕಾರು ಚಾಲಕನ…
ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…
ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…
ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…
ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್ಡಿಎ…