ಬೆಂಗಳೂರು : ರಾಜ್ಯದಲ್ಲಿ ಹಾಲಿನ ಬೆಲೆಯನ್ನು ಹೆಚ್ಚು ಮಾಡಿಲ್ಲ . ಅದರ ಪೊಟ್ಟಣದಲ್ಲಿ ಹೆಚ್ಚಿನ ಪ್ರಮಾಣದ ಹಾಲಿಗೆ ಗ್ರಾಹಕರು ಹಣ ನೀಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾಗರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಹಾಲಿನ ಪೊಟ್ಟಣಗಳಲ್ಲಿ ಒದಗಿಸುತ್ತಿರುವ ಹೆಚ್ಚುವರಿ ಹಾಲಿಗೆ ಗ್ರಾಹಕರಿಂದ ಹಣ ಪಡೆಯಲಾಗುತ್ತಿದೆ. ಮತ್ತು ಆ ಹಣ ನೇರವಾಗಿ ರೈತರಿಗೆ ಹೋಗುತ್ತದೆ ಎಂದರು.
ಅಲ್ಲದೆ ಹಾಲು ಉತ್ಪಾದಕರಿಗೆ ೨ ರೂ ಇದ್ದ ಸಬ್ಸಿಡಿ ಯನ್ನ ೫ ರೂ ಗೆ ಹೆಚ್ಚಿಸಿದ್ದು ನಾನು, ಆರ್ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮಾಹಿತಿ ಇಲ್ಲದೆ ಹೇಳಿಕೆಗಳನ್ನು ನೀಡುತ್ತಾರೆ. ನಮ್ಮ ಸರ್ಕಾರ ರೈತರಿಗೆ ಪ್ರತಿದಿನ ರೂ 5 ಕೋಟಿ ಪ್ರೋತ್ಸಾ ಹ ಧನ ನೀಡುತ್ತಿದೆ ಅದು ತಿಂಗಳಿಗೆ ₹ 150 ಕೋಟಿ ಮತ್ತು ವರ್ಷಕ್ಕೆ ₹ 1800 ಕೋಟಿ ಆಗುತ್ತದೆ ಎಂದು ಹೇಳಿದರು. ಇದೇ ವೇಳೆ ಮಾಧ್ಯಮದವರು ಸರ್ಕಾರ ರೈತರ ಸಬ್ಸಿಡಿ ಬಾಕಿ ಉಳಿಸಿಕೊಂಡಿದೆಯಲ್ಲಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಅದು ನಾವು ಉಳಿಸಿಕೊಂಡಿರೋದು ಅಲ್ಲ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ₹700 ಕೋಟಿ ಬಾಕಿಯುಳಿಸಿಕೊಂಡಿತ್ತು ಅದನ್ನು ನಮ್ಮ ಸರ್ಕಾರ ಚುಕ್ತಾ ಮಾಡುತ್ತಿದೆ ಎಂದು ಹೇಳಿದರು
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…