ರಾಜ್ಯ

ಭಾರತ್‌ ಜೋಡೋ ಯಾತ್ರೆ ಮಾಡುವವರೆ ಇಂದು ಭಾರತ್‌ ತೋಡೋ ಎನ್ನುತ್ತಿದ್ದಾರೆ : ಹೆಚ್‌ಡಿಕೆ ಆರೋಪ

ರಾಮನಗರ : ಭಾರತ ಒಂದಾಗಿರಬೇಕು ಎಂದು ಭಾರತ್ ಜೋಡೋ ಯಾತ್ರೆ ಮಾಡಿದವರೇ ಇವತ್ತು ಭಾರತ್ ತೋಡೋ ಎನ್ನುತ್ತಾರೆ ದೇಶ ಇಬ್ಭಾಗ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಬಿಡದಿಯ ತೋಟದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರತ್ಯೇಕ ರಾಷ್ಟ್ರದ ಬಗ್ಗೆ ಸಂಸದ ಡಿ.ಕೆ‌‌.ಸುರೇಶ್ ಅವರು ನೀಡಿರುವ ಹೇಳಿಕೆ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದರು.

ಇಲ್ಲಿ ಕಲ್ಲು ಹೊಡೆಕೊಂಡು ಲೂಟಿ ಮಾಡಿಕೊಂಡು ಇದ್ದೋರನ್ನು ಲೋಕಸಭೆಗೆ ಕಳುಹಿಸಿದರೆ ಇನ್ನೇನಾಗುತ್ತದೆ. ಇಲ್ಲಿ ಬಡ ಜನರನ್ನು ಲೂಟಿ ಮಾಡಿಕೊಂಡು ಸಾಕ್ಷಿಗುಡ್ಡೆ ಮಾಡಿದ್ದಾರೆ.

ಅಂತವರನ್ನು ತೆಗೆದುಕೊಂಡು ಹೋಗಿ ದೇಶ ಕಟ್ಟು ಅಂತ ಕಳುಹಿಸಿದರೆ ಕಟ್ಟುತ್ತಾರೆಯೇ? ಅವರ ಸಾಮ್ರಾಜ್ಯ ಕಟ್ಟುಕೊಳ್ತಾರೆ ಅಷ್ಟೇ. ಇವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ? ಎಂದು ಅವರು ಟಾಂಗ್ ನೀಡಿದರು.

ಕೇಂದ್ರ ಸರ್ಕಾರದ ಮುಂದೆ ನಮ್ಮ ಬೇಡಿಕೆಗಳನ್ನು ಸಂಘರ್ಷದಿಂದ ಈಡೇರಿಸಿಕೊಳ್ಳಲು ಸಾಧ್ಯವಿಲ್ಲ. ವಾಸ್ತವವನ್ನು ಅವರಿಗೆ ಮನವರಿಕೆ ಮಾಡಬೇಕು.

ಅವರನ್ನು ಒಪ್ಪಿಸಿ, ಮನವರಿಕೆ ಮಾಡಿಕೊಟ್ಟು ಹಣ ಪಡೆಯಬೇಕು‌. ಅದನ್ನು ಬಿಟ್ಟು ಇವರ ಬಾಲಿಷ ಹೇಳಿಕೆಗಳಿಂದ ಸಮಸ್ಯೆ ಬಗೆಹರಿಯಲ್ಲ ಎಂದು ಸಂಸದ ಸುರೇಶ್ ಅವರಿಗೆ ತರಾಟೆಗೆ ತೆಗೆದುಕೊಂಡರು ಮಾಜಿ ಮುಖ್ಯಮಂತ್ರಿಗಳು.

ಶೋಷಿತರ ಹೆಸರಿನಲ್ಲಿ ಸಿಎಂ ಮಜಾ : ಶೋಷಿತ ವರ್ಗಗಳ ಜನರ ಬಗ್ಗೆ ಕಾಂಗ್ರೆಸ್ ಅನುಕಂಪದ ಲೇವಡಿ ಮಾಡಿದ ಕುಮಾರಸ್ವಾಮಿ ಅವರು; ಶೋಷಿತ ವರ್ಗಗಳ ಹೆಸರಿನಲ್ಲಿ ಇವರು ಮಜಾ ಮಾಡ್ತಾ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

ಶೋಷಿತ ವರ್ಗಗಳ ಜನ ಬೀದಿಯಲ್ಲಿ ಇದ್ದಾರೆ. ಎಷ್ಟು ಜನರನ್ನು ಇವರು ಮೀಸಲಾತಿ ವ್ಯವಸ್ಥೆಯಲ್ಲಿ ಉಳಿಸಿಕೊಂಡಿದ್ದಾರೆ. ಎಷ್ಟು ಜನರಿಗೆ ಅನುಕೂಲ ಆಗಿದೆ? ಮೀಸಲಾತಿ ಪಡೆದುಕೊಂಡವರೇ ಮತ್ತೆ ಮತ್ತೆ ಮೀಸಲು ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ.

ಅದಕ್ಕೆ ಏನು ಹೇಳುತ್ತಾರೆ ಇವರು? ಮೀಸಲು ಸೌಲಭ್ಯ ಪಡೆದವರೇ ಎಷ್ಟು ವರ್ಷ ಪಡೆಯುತ್ತಾರೆ? ಅದನ್ನು ಜನರಿಗೆ ತಿಳಿಸಿ. ಶೋಷಿತ ವರ್ಗಗಳ ಬದುಕು ಕಾಂಗ್ರೆಸಿಗರಿಗೆ ಬೇಕಿಲ್ಲ.

ಸ್ವಾತಂತ್ರ್ಯ ಬಂದು 75 ವರ್ಷದಿಂದ ಇನ್ನೂ ಅವರ ಹೆಸರು ಹೇಳಿಕೊಂಡೇ ಜೀವನ ಮಾಡುತ್ತಿದ್ದೀರಿ ಎಂದು ಕಾಂಗ್ರೆಸ್ ವಿರುದ್ದ ಹೆಚ್ ಡಿಕೆ ವಾಗ್ಧಾಳಿ ನಡೆಸಿದರು.

ಕಾಂತರಾಜು ವರದಿ ಬಗ್ಗೆ ಬೀದಿ ಬೀದಿಯಲ್ಲಿ ಮಾತನಾಡಿದ್ದಾರೆ. ನಿಮ್ಮನ್ನು ವರದಿ ಸ್ವೀಕರಿಸಬೇಡಿ ಅಂತ ಹಿಡಿದುಕೊಂಡಿರುವವರು ಯಾರು? ನಾನು ಸಿಎಂ ಆಗಿದ್ದಾಗ ವರದಿ ತೆಗೆದುಕೊಂಡಿಲ್ಲ ಅಂದಿದ್ದಾರೆ.

ಆ ವರದಿಯಲ್ಲಿ ಮೆಂಬರ್ ಸೆಕ್ರೆಟರಿ ಸಹಿ ಇತ್ತಾ? ಇವತ್ತಿನ ವರೆಗೂ ಆ ವರದಿಗೆ ಸಹಿ ಹಾಕಿಲ್ಲ. ಸಹಿ ಹಾಕದ ವರದಿಯನ್ನ ನಾನು ಹೇಗೆ ಸ್ವೀಕರಿಸಲಿ? ಸುಮ್ಮನೆ ನನ್ನ ಮೇಲೆ ಆರೋಪ ಮಾಡ್ತಾರೆ ಎಂದು ಅವರು ಕಿಡಿಕಾರಿದರು.

andolanait

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

5 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

5 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

5 hours ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

5 hours ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

7 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

8 hours ago