ರಾಜ್ಯ

ಭಾರತ್‌ ಜೋಡೋ ಯಾತ್ರೆ ಮಾಡುವವರೆ ಇಂದು ಭಾರತ್‌ ತೋಡೋ ಎನ್ನುತ್ತಿದ್ದಾರೆ : ಹೆಚ್‌ಡಿಕೆ ಆರೋಪ

ರಾಮನಗರ : ಭಾರತ ಒಂದಾಗಿರಬೇಕು ಎಂದು ಭಾರತ್ ಜೋಡೋ ಯಾತ್ರೆ ಮಾಡಿದವರೇ ಇವತ್ತು ಭಾರತ್ ತೋಡೋ ಎನ್ನುತ್ತಾರೆ ದೇಶ ಇಬ್ಭಾಗ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಬಿಡದಿಯ ತೋಟದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರತ್ಯೇಕ ರಾಷ್ಟ್ರದ ಬಗ್ಗೆ ಸಂಸದ ಡಿ.ಕೆ‌‌.ಸುರೇಶ್ ಅವರು ನೀಡಿರುವ ಹೇಳಿಕೆ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದರು.

ಇಲ್ಲಿ ಕಲ್ಲು ಹೊಡೆಕೊಂಡು ಲೂಟಿ ಮಾಡಿಕೊಂಡು ಇದ್ದೋರನ್ನು ಲೋಕಸಭೆಗೆ ಕಳುಹಿಸಿದರೆ ಇನ್ನೇನಾಗುತ್ತದೆ. ಇಲ್ಲಿ ಬಡ ಜನರನ್ನು ಲೂಟಿ ಮಾಡಿಕೊಂಡು ಸಾಕ್ಷಿಗುಡ್ಡೆ ಮಾಡಿದ್ದಾರೆ.

ಅಂತವರನ್ನು ತೆಗೆದುಕೊಂಡು ಹೋಗಿ ದೇಶ ಕಟ್ಟು ಅಂತ ಕಳುಹಿಸಿದರೆ ಕಟ್ಟುತ್ತಾರೆಯೇ? ಅವರ ಸಾಮ್ರಾಜ್ಯ ಕಟ್ಟುಕೊಳ್ತಾರೆ ಅಷ್ಟೇ. ಇವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ? ಎಂದು ಅವರು ಟಾಂಗ್ ನೀಡಿದರು.

ಕೇಂದ್ರ ಸರ್ಕಾರದ ಮುಂದೆ ನಮ್ಮ ಬೇಡಿಕೆಗಳನ್ನು ಸಂಘರ್ಷದಿಂದ ಈಡೇರಿಸಿಕೊಳ್ಳಲು ಸಾಧ್ಯವಿಲ್ಲ. ವಾಸ್ತವವನ್ನು ಅವರಿಗೆ ಮನವರಿಕೆ ಮಾಡಬೇಕು.

ಅವರನ್ನು ಒಪ್ಪಿಸಿ, ಮನವರಿಕೆ ಮಾಡಿಕೊಟ್ಟು ಹಣ ಪಡೆಯಬೇಕು‌. ಅದನ್ನು ಬಿಟ್ಟು ಇವರ ಬಾಲಿಷ ಹೇಳಿಕೆಗಳಿಂದ ಸಮಸ್ಯೆ ಬಗೆಹರಿಯಲ್ಲ ಎಂದು ಸಂಸದ ಸುರೇಶ್ ಅವರಿಗೆ ತರಾಟೆಗೆ ತೆಗೆದುಕೊಂಡರು ಮಾಜಿ ಮುಖ್ಯಮಂತ್ರಿಗಳು.

ಶೋಷಿತರ ಹೆಸರಿನಲ್ಲಿ ಸಿಎಂ ಮಜಾ : ಶೋಷಿತ ವರ್ಗಗಳ ಜನರ ಬಗ್ಗೆ ಕಾಂಗ್ರೆಸ್ ಅನುಕಂಪದ ಲೇವಡಿ ಮಾಡಿದ ಕುಮಾರಸ್ವಾಮಿ ಅವರು; ಶೋಷಿತ ವರ್ಗಗಳ ಹೆಸರಿನಲ್ಲಿ ಇವರು ಮಜಾ ಮಾಡ್ತಾ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

ಶೋಷಿತ ವರ್ಗಗಳ ಜನ ಬೀದಿಯಲ್ಲಿ ಇದ್ದಾರೆ. ಎಷ್ಟು ಜನರನ್ನು ಇವರು ಮೀಸಲಾತಿ ವ್ಯವಸ್ಥೆಯಲ್ಲಿ ಉಳಿಸಿಕೊಂಡಿದ್ದಾರೆ. ಎಷ್ಟು ಜನರಿಗೆ ಅನುಕೂಲ ಆಗಿದೆ? ಮೀಸಲಾತಿ ಪಡೆದುಕೊಂಡವರೇ ಮತ್ತೆ ಮತ್ತೆ ಮೀಸಲು ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ.

ಅದಕ್ಕೆ ಏನು ಹೇಳುತ್ತಾರೆ ಇವರು? ಮೀಸಲು ಸೌಲಭ್ಯ ಪಡೆದವರೇ ಎಷ್ಟು ವರ್ಷ ಪಡೆಯುತ್ತಾರೆ? ಅದನ್ನು ಜನರಿಗೆ ತಿಳಿಸಿ. ಶೋಷಿತ ವರ್ಗಗಳ ಬದುಕು ಕಾಂಗ್ರೆಸಿಗರಿಗೆ ಬೇಕಿಲ್ಲ.

ಸ್ವಾತಂತ್ರ್ಯ ಬಂದು 75 ವರ್ಷದಿಂದ ಇನ್ನೂ ಅವರ ಹೆಸರು ಹೇಳಿಕೊಂಡೇ ಜೀವನ ಮಾಡುತ್ತಿದ್ದೀರಿ ಎಂದು ಕಾಂಗ್ರೆಸ್ ವಿರುದ್ದ ಹೆಚ್ ಡಿಕೆ ವಾಗ್ಧಾಳಿ ನಡೆಸಿದರು.

ಕಾಂತರಾಜು ವರದಿ ಬಗ್ಗೆ ಬೀದಿ ಬೀದಿಯಲ್ಲಿ ಮಾತನಾಡಿದ್ದಾರೆ. ನಿಮ್ಮನ್ನು ವರದಿ ಸ್ವೀಕರಿಸಬೇಡಿ ಅಂತ ಹಿಡಿದುಕೊಂಡಿರುವವರು ಯಾರು? ನಾನು ಸಿಎಂ ಆಗಿದ್ದಾಗ ವರದಿ ತೆಗೆದುಕೊಂಡಿಲ್ಲ ಅಂದಿದ್ದಾರೆ.

ಆ ವರದಿಯಲ್ಲಿ ಮೆಂಬರ್ ಸೆಕ್ರೆಟರಿ ಸಹಿ ಇತ್ತಾ? ಇವತ್ತಿನ ವರೆಗೂ ಆ ವರದಿಗೆ ಸಹಿ ಹಾಕಿಲ್ಲ. ಸಹಿ ಹಾಕದ ವರದಿಯನ್ನ ನಾನು ಹೇಗೆ ಸ್ವೀಕರಿಸಲಿ? ಸುಮ್ಮನೆ ನನ್ನ ಮೇಲೆ ಆರೋಪ ಮಾಡ್ತಾರೆ ಎಂದು ಅವರು ಕಿಡಿಕಾರಿದರು.

andolanait

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

50 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

1 hour ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

1 hour ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

1 hour ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

11 hours ago