ರಾಜ್ಯ

ಭಾರತ್‌ ಜೋಡೋ ಯಾತ್ರೆ ಮಾಡುವವರೆ ಇಂದು ಭಾರತ್‌ ತೋಡೋ ಎನ್ನುತ್ತಿದ್ದಾರೆ : ಹೆಚ್‌ಡಿಕೆ ಆರೋಪ

ರಾಮನಗರ : ಭಾರತ ಒಂದಾಗಿರಬೇಕು ಎಂದು ಭಾರತ್ ಜೋಡೋ ಯಾತ್ರೆ ಮಾಡಿದವರೇ ಇವತ್ತು ಭಾರತ್ ತೋಡೋ ಎನ್ನುತ್ತಾರೆ ದೇಶ ಇಬ್ಭಾಗ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಬಿಡದಿಯ ತೋಟದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರತ್ಯೇಕ ರಾಷ್ಟ್ರದ ಬಗ್ಗೆ ಸಂಸದ ಡಿ.ಕೆ‌‌.ಸುರೇಶ್ ಅವರು ನೀಡಿರುವ ಹೇಳಿಕೆ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದರು.

ಇಲ್ಲಿ ಕಲ್ಲು ಹೊಡೆಕೊಂಡು ಲೂಟಿ ಮಾಡಿಕೊಂಡು ಇದ್ದೋರನ್ನು ಲೋಕಸಭೆಗೆ ಕಳುಹಿಸಿದರೆ ಇನ್ನೇನಾಗುತ್ತದೆ. ಇಲ್ಲಿ ಬಡ ಜನರನ್ನು ಲೂಟಿ ಮಾಡಿಕೊಂಡು ಸಾಕ್ಷಿಗುಡ್ಡೆ ಮಾಡಿದ್ದಾರೆ.

ಅಂತವರನ್ನು ತೆಗೆದುಕೊಂಡು ಹೋಗಿ ದೇಶ ಕಟ್ಟು ಅಂತ ಕಳುಹಿಸಿದರೆ ಕಟ್ಟುತ್ತಾರೆಯೇ? ಅವರ ಸಾಮ್ರಾಜ್ಯ ಕಟ್ಟುಕೊಳ್ತಾರೆ ಅಷ್ಟೇ. ಇವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ? ಎಂದು ಅವರು ಟಾಂಗ್ ನೀಡಿದರು.

ಕೇಂದ್ರ ಸರ್ಕಾರದ ಮುಂದೆ ನಮ್ಮ ಬೇಡಿಕೆಗಳನ್ನು ಸಂಘರ್ಷದಿಂದ ಈಡೇರಿಸಿಕೊಳ್ಳಲು ಸಾಧ್ಯವಿಲ್ಲ. ವಾಸ್ತವವನ್ನು ಅವರಿಗೆ ಮನವರಿಕೆ ಮಾಡಬೇಕು.

ಅವರನ್ನು ಒಪ್ಪಿಸಿ, ಮನವರಿಕೆ ಮಾಡಿಕೊಟ್ಟು ಹಣ ಪಡೆಯಬೇಕು‌. ಅದನ್ನು ಬಿಟ್ಟು ಇವರ ಬಾಲಿಷ ಹೇಳಿಕೆಗಳಿಂದ ಸಮಸ್ಯೆ ಬಗೆಹರಿಯಲ್ಲ ಎಂದು ಸಂಸದ ಸುರೇಶ್ ಅವರಿಗೆ ತರಾಟೆಗೆ ತೆಗೆದುಕೊಂಡರು ಮಾಜಿ ಮುಖ್ಯಮಂತ್ರಿಗಳು.

ಶೋಷಿತರ ಹೆಸರಿನಲ್ಲಿ ಸಿಎಂ ಮಜಾ : ಶೋಷಿತ ವರ್ಗಗಳ ಜನರ ಬಗ್ಗೆ ಕಾಂಗ್ರೆಸ್ ಅನುಕಂಪದ ಲೇವಡಿ ಮಾಡಿದ ಕುಮಾರಸ್ವಾಮಿ ಅವರು; ಶೋಷಿತ ವರ್ಗಗಳ ಹೆಸರಿನಲ್ಲಿ ಇವರು ಮಜಾ ಮಾಡ್ತಾ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

ಶೋಷಿತ ವರ್ಗಗಳ ಜನ ಬೀದಿಯಲ್ಲಿ ಇದ್ದಾರೆ. ಎಷ್ಟು ಜನರನ್ನು ಇವರು ಮೀಸಲಾತಿ ವ್ಯವಸ್ಥೆಯಲ್ಲಿ ಉಳಿಸಿಕೊಂಡಿದ್ದಾರೆ. ಎಷ್ಟು ಜನರಿಗೆ ಅನುಕೂಲ ಆಗಿದೆ? ಮೀಸಲಾತಿ ಪಡೆದುಕೊಂಡವರೇ ಮತ್ತೆ ಮತ್ತೆ ಮೀಸಲು ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ.

ಅದಕ್ಕೆ ಏನು ಹೇಳುತ್ತಾರೆ ಇವರು? ಮೀಸಲು ಸೌಲಭ್ಯ ಪಡೆದವರೇ ಎಷ್ಟು ವರ್ಷ ಪಡೆಯುತ್ತಾರೆ? ಅದನ್ನು ಜನರಿಗೆ ತಿಳಿಸಿ. ಶೋಷಿತ ವರ್ಗಗಳ ಬದುಕು ಕಾಂಗ್ರೆಸಿಗರಿಗೆ ಬೇಕಿಲ್ಲ.

ಸ್ವಾತಂತ್ರ್ಯ ಬಂದು 75 ವರ್ಷದಿಂದ ಇನ್ನೂ ಅವರ ಹೆಸರು ಹೇಳಿಕೊಂಡೇ ಜೀವನ ಮಾಡುತ್ತಿದ್ದೀರಿ ಎಂದು ಕಾಂಗ್ರೆಸ್ ವಿರುದ್ದ ಹೆಚ್ ಡಿಕೆ ವಾಗ್ಧಾಳಿ ನಡೆಸಿದರು.

ಕಾಂತರಾಜು ವರದಿ ಬಗ್ಗೆ ಬೀದಿ ಬೀದಿಯಲ್ಲಿ ಮಾತನಾಡಿದ್ದಾರೆ. ನಿಮ್ಮನ್ನು ವರದಿ ಸ್ವೀಕರಿಸಬೇಡಿ ಅಂತ ಹಿಡಿದುಕೊಂಡಿರುವವರು ಯಾರು? ನಾನು ಸಿಎಂ ಆಗಿದ್ದಾಗ ವರದಿ ತೆಗೆದುಕೊಂಡಿಲ್ಲ ಅಂದಿದ್ದಾರೆ.

ಆ ವರದಿಯಲ್ಲಿ ಮೆಂಬರ್ ಸೆಕ್ರೆಟರಿ ಸಹಿ ಇತ್ತಾ? ಇವತ್ತಿನ ವರೆಗೂ ಆ ವರದಿಗೆ ಸಹಿ ಹಾಕಿಲ್ಲ. ಸಹಿ ಹಾಕದ ವರದಿಯನ್ನ ನಾನು ಹೇಗೆ ಸ್ವೀಕರಿಸಲಿ? ಸುಮ್ಮನೆ ನನ್ನ ಮೇಲೆ ಆರೋಪ ಮಾಡ್ತಾರೆ ಎಂದು ಅವರು ಕಿಡಿಕಾರಿದರು.

andolanait

Recent Posts

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

1 hour ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

2 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

2 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

2 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

2 hours ago

ಇನ್ನೆರಡು ತಿಂಗಳಲ್ಲಿ ದರ್ಶನ್‌ ಹೊರಬರುತ್ತಾರೆ: ನಟ ರವಿಚಂದ್ರನ್‌ ವಿಶ್ವಾಸ

ಬೆಂಗಳೂರು: ನಿಮಗೆಲ್ಲಾ ಡಿಬಾಸ್‌, ಆ ಡಿಬಾಸ್‌ ನನಗೆ ಮಗ ನೆನಪಿಟ್ಟುಕೊಳ್ಳಿ. ಇನ್ನೆರಡು ತಿಂಗಳಲ್ಲಿ ದರ್ಶನ್‌ ಹೊರಬರುತ್ತಾರೆ ಎಂದು ನಟ ರವಿಚಂದ್ರನ್‌…

2 hours ago