ರಾಜ್ಯ

ಭಾರತ್‌ ಜೋಡೋ ಯಾತ್ರೆ ಮಾಡುವವರೆ ಇಂದು ಭಾರತ್‌ ತೋಡೋ ಎನ್ನುತ್ತಿದ್ದಾರೆ : ಹೆಚ್‌ಡಿಕೆ ಆರೋಪ

ರಾಮನಗರ : ಭಾರತ ಒಂದಾಗಿರಬೇಕು ಎಂದು ಭಾರತ್ ಜೋಡೋ ಯಾತ್ರೆ ಮಾಡಿದವರೇ ಇವತ್ತು ಭಾರತ್ ತೋಡೋ ಎನ್ನುತ್ತಾರೆ ದೇಶ ಇಬ್ಭಾಗ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಬಿಡದಿಯ ತೋಟದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರತ್ಯೇಕ ರಾಷ್ಟ್ರದ ಬಗ್ಗೆ ಸಂಸದ ಡಿ.ಕೆ‌‌.ಸುರೇಶ್ ಅವರು ನೀಡಿರುವ ಹೇಳಿಕೆ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದರು.

ಇಲ್ಲಿ ಕಲ್ಲು ಹೊಡೆಕೊಂಡು ಲೂಟಿ ಮಾಡಿಕೊಂಡು ಇದ್ದೋರನ್ನು ಲೋಕಸಭೆಗೆ ಕಳುಹಿಸಿದರೆ ಇನ್ನೇನಾಗುತ್ತದೆ. ಇಲ್ಲಿ ಬಡ ಜನರನ್ನು ಲೂಟಿ ಮಾಡಿಕೊಂಡು ಸಾಕ್ಷಿಗುಡ್ಡೆ ಮಾಡಿದ್ದಾರೆ.

ಅಂತವರನ್ನು ತೆಗೆದುಕೊಂಡು ಹೋಗಿ ದೇಶ ಕಟ್ಟು ಅಂತ ಕಳುಹಿಸಿದರೆ ಕಟ್ಟುತ್ತಾರೆಯೇ? ಅವರ ಸಾಮ್ರಾಜ್ಯ ಕಟ್ಟುಕೊಳ್ತಾರೆ ಅಷ್ಟೇ. ಇವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ? ಎಂದು ಅವರು ಟಾಂಗ್ ನೀಡಿದರು.

ಕೇಂದ್ರ ಸರ್ಕಾರದ ಮುಂದೆ ನಮ್ಮ ಬೇಡಿಕೆಗಳನ್ನು ಸಂಘರ್ಷದಿಂದ ಈಡೇರಿಸಿಕೊಳ್ಳಲು ಸಾಧ್ಯವಿಲ್ಲ. ವಾಸ್ತವವನ್ನು ಅವರಿಗೆ ಮನವರಿಕೆ ಮಾಡಬೇಕು.

ಅವರನ್ನು ಒಪ್ಪಿಸಿ, ಮನವರಿಕೆ ಮಾಡಿಕೊಟ್ಟು ಹಣ ಪಡೆಯಬೇಕು‌. ಅದನ್ನು ಬಿಟ್ಟು ಇವರ ಬಾಲಿಷ ಹೇಳಿಕೆಗಳಿಂದ ಸಮಸ್ಯೆ ಬಗೆಹರಿಯಲ್ಲ ಎಂದು ಸಂಸದ ಸುರೇಶ್ ಅವರಿಗೆ ತರಾಟೆಗೆ ತೆಗೆದುಕೊಂಡರು ಮಾಜಿ ಮುಖ್ಯಮಂತ್ರಿಗಳು.

ಶೋಷಿತರ ಹೆಸರಿನಲ್ಲಿ ಸಿಎಂ ಮಜಾ : ಶೋಷಿತ ವರ್ಗಗಳ ಜನರ ಬಗ್ಗೆ ಕಾಂಗ್ರೆಸ್ ಅನುಕಂಪದ ಲೇವಡಿ ಮಾಡಿದ ಕುಮಾರಸ್ವಾಮಿ ಅವರು; ಶೋಷಿತ ವರ್ಗಗಳ ಹೆಸರಿನಲ್ಲಿ ಇವರು ಮಜಾ ಮಾಡ್ತಾ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

ಶೋಷಿತ ವರ್ಗಗಳ ಜನ ಬೀದಿಯಲ್ಲಿ ಇದ್ದಾರೆ. ಎಷ್ಟು ಜನರನ್ನು ಇವರು ಮೀಸಲಾತಿ ವ್ಯವಸ್ಥೆಯಲ್ಲಿ ಉಳಿಸಿಕೊಂಡಿದ್ದಾರೆ. ಎಷ್ಟು ಜನರಿಗೆ ಅನುಕೂಲ ಆಗಿದೆ? ಮೀಸಲಾತಿ ಪಡೆದುಕೊಂಡವರೇ ಮತ್ತೆ ಮತ್ತೆ ಮೀಸಲು ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ.

ಅದಕ್ಕೆ ಏನು ಹೇಳುತ್ತಾರೆ ಇವರು? ಮೀಸಲು ಸೌಲಭ್ಯ ಪಡೆದವರೇ ಎಷ್ಟು ವರ್ಷ ಪಡೆಯುತ್ತಾರೆ? ಅದನ್ನು ಜನರಿಗೆ ತಿಳಿಸಿ. ಶೋಷಿತ ವರ್ಗಗಳ ಬದುಕು ಕಾಂಗ್ರೆಸಿಗರಿಗೆ ಬೇಕಿಲ್ಲ.

ಸ್ವಾತಂತ್ರ್ಯ ಬಂದು 75 ವರ್ಷದಿಂದ ಇನ್ನೂ ಅವರ ಹೆಸರು ಹೇಳಿಕೊಂಡೇ ಜೀವನ ಮಾಡುತ್ತಿದ್ದೀರಿ ಎಂದು ಕಾಂಗ್ರೆಸ್ ವಿರುದ್ದ ಹೆಚ್ ಡಿಕೆ ವಾಗ್ಧಾಳಿ ನಡೆಸಿದರು.

ಕಾಂತರಾಜು ವರದಿ ಬಗ್ಗೆ ಬೀದಿ ಬೀದಿಯಲ್ಲಿ ಮಾತನಾಡಿದ್ದಾರೆ. ನಿಮ್ಮನ್ನು ವರದಿ ಸ್ವೀಕರಿಸಬೇಡಿ ಅಂತ ಹಿಡಿದುಕೊಂಡಿರುವವರು ಯಾರು? ನಾನು ಸಿಎಂ ಆಗಿದ್ದಾಗ ವರದಿ ತೆಗೆದುಕೊಂಡಿಲ್ಲ ಅಂದಿದ್ದಾರೆ.

ಆ ವರದಿಯಲ್ಲಿ ಮೆಂಬರ್ ಸೆಕ್ರೆಟರಿ ಸಹಿ ಇತ್ತಾ? ಇವತ್ತಿನ ವರೆಗೂ ಆ ವರದಿಗೆ ಸಹಿ ಹಾಕಿಲ್ಲ. ಸಹಿ ಹಾಕದ ವರದಿಯನ್ನ ನಾನು ಹೇಗೆ ಸ್ವೀಕರಿಸಲಿ? ಸುಮ್ಮನೆ ನನ್ನ ಮೇಲೆ ಆರೋಪ ಮಾಡ್ತಾರೆ ಎಂದು ಅವರು ಕಿಡಿಕಾರಿದರು.

andolanait

Recent Posts

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

21 mins ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

10 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

10 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

10 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

10 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

10 hours ago