ರಾಜ್ಯ

ಹೃದಯಾಘಾತ ಬಗ್ಗೆ ಜನರು ಆತಂಕ ಪಡಬೇಕಾದ ಅಗತ್ಯವಿಲ್ಲ : ವೈದ್ಯಕೀಯ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು : ರಾಜ್ಯದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಬಗ್ಗೆ ಜನರು ಆತಂಕ ಪಡಬೇಕಾದ ಅಗತ್ಯವಿಲ್ಲ. ಸರ್ಕಾರ ಈ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್‌ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದ ಮುಂದೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜನರಿಗೆ ಅಭಯ ನೀಡಿದರು.

ಹೃದಯಾಘಾತ ಬಗ್ಗೆ ಜನರು ಆತಂಕ ಪಡಬೇಡಿ. ಮಾಧ್ಯಮದಲ್ಲಿ ಇದರ ಬಗ್ಗೆ ಹೆಚ್ಚು ವೈಭವೀಕರಿಸಲಾಗುತ್ತಿದೆ. ಜನರಿಗೆ ಭೀತಿ ಉಂಟಾಗುವುದು ಸಹಜ. ಆದರೆ ವೈದ್ಯರು ಹಾಗೂ ಇಲಾಖೆಯ ಅಧಿಕಾರಿಗಳು ನೀಡುವ ಸಲಹೆಗಳನ್ನು ಪಾಲಿಸಿ ಎಂದು ಸಚಿವರು ತಿಳಿಸಿದರು.

ಸಾರ್ವಜನಿಕರು ನಿಯಮಿತ ಆಹಾರ, ಪೌಷ್ಟಿಕಯುಕ್ತ ಆಹಾರ, ವ್ಯಾಯಾಮ ಹಾಗೂ ಯೋಗ ಹಾಗೂ ಇತರೆ ಒಳ್ಳೆಯ ಹವ್ಯಾಸಗಳನ್ನು ರೂಢಿಸಿಕೊಳ್ಳಿ. ಜೀವನ ಶೈಲಿಯನ್ನು ಆದಷ್ಟು ಬಳಸಿಕೊಳ್ಳಿ. ನಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ನಮ್ಮ ಕೈಯಲ್ಲಿಯೇ ಇದೆ ಎಂದು ಮಾಹಿತಿ ನೀಡಿದರು.

ಆದಷ್ಟು ಜಂಕ್‌ ಫುಡ್‌, ದುರಭ್ಯಾಸಗಳನ್ನು ಮಾಡಬಾರದು. ಕರಿದ ಪದಾರ್ಥಗಳ ಸೇವನೆ ನಿಯಂತ್ರಣ ಮಾಡಿಕೊಳ್ಳುವ ಮೂಲಕ ಆರೋಗ್ಯ ಸಂರಕ್ಷಿಸಕೊಳ್ಳಬಹುದು. ಜನರು ಎಚ್ಚರದಿಂದಿರಿ, ಸುರಕ್ಷಿತವಾಗಿರಿ, ಆತಂಕದಿಂದ ದೂರವಿರಿ ಎಂದು ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ಸಲಹೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

3 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

4 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

8 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

9 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago