ರಾಜ್ಯ

ಸೂರ್ಯನ ಶಾಖದಿಂದ ತತ್ತರಿಸಿದ ರಾಜ್ಯದ ಜನತೆ: ಹೆಚ್ಚಿದ ಎಳನೀರು ಬೆಲೆ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ಧಗೆ ಹೆಚ್ಚಾಗುತ್ತಿದ್ದು, ಸೂರ್ಯನ ಶಾಖಕ್ಕೆ ಜನರು ತತ್ತರಿಸಿ ಹೋಗಿದ್ದಾರೆ.

ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸೂರ್ಯನ ಶಾಖ ಹೆಚ್ಚಾಗಿದ್ದು, ದಾಹ ತಣಿಸಿ ಕೊಳ್ಳಲು ಜನರು ತಂಪು ಪಾನಿಯಗಳತ್ತ ಮುಖ ಮಾಡಿದ್ದಾರೆ. ನೈಸರ್ಗಿಕ ಪಾನೀಯ ಎಳನೀರಿನ ಬೆಲೆ 60 ರೂ ತಲುಪಿದೆ. ಶಿವರಾತ್ರಿ ಕಳೆಯುತ್ತಿದ್ದಂತೆ ಬಿಸಿಲಿನ ತಾಪ ಏರುತ್ತಿದ್ದು, ಜನರು ಪ್ರಾರಂಭದ ಬಿಸಿಲಿಗೆ ಬಸವಳಿಯುತ್ತಿದ್ದಾರೆ. ಇನ್ನೂ ಎರಡು ತಿಂಗಳು ಬಿಸಿಲು ಇರಲಿದ್ದು ದಿನ ಕಳೆಯುವುದು ಹೇಗೆ ಎಂದು ಜನತೆ ಚಿಂತೆಗೀಡಾಗಿದ್ದಾರೆ.

ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧೆಡೆ ಜನರು ದಾಹ ತಣಿಸಿಕೊಳ್ಳಲು ತಂಪು ಪಾನೀಯಗಳತ್ತ ಮುಖ ಮಾಡಿದ್ದು ಬೇಡಿಕೆ ಹೆಚ್ಚಾದ ಹಿನ್ನಲೆಯಲ್ಲಿ ಬಿಸಿಲಿನಂತೆ ಬೆಲೆಯೂ ಸಹ ಅಷ್ಟೆ ಹೆಚ್ಚಾಗಿದೆ. ಕಳೆದ ಒಂದು ತಿಂಗಳ ಹಿಂದೆ ಬೆಂಗಳೂರಿನಲ್ಲಿ 30 ರೂಗೆ ಸಿಗುತ್ತಿದ್ದ ಎಳನೀರು ಈಗ ಬರೋಬ್ಬರಿ 60 ರೂ ತಲುಪಿದೆ. ಮಂಡ್ಯ, ಮದ್ದೂರು, ತುಮಕೂರು, ರಾಮನಗರ, ಮಾಗಡಿ ಸೇರಿದಂತೆ ಮತ್ತಿತರ ಕಡೆಯಿಂದ ಎಳನೀರು ಬರುತ್ತಿದೆ. ಆದರೆ ಬೇಡಿಕೆ ಹೆಚ್ಚಾಗಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ಸಿಗುತ್ತಿಲ್ಲ.

ಇತ್ತೀಚೆಗೆ ಜನರಲ್ಲಿ ಆರೋಗ್ಯ ಕಾಳಜಿ ಹೆಚ್ಚಾಗುತ್ತಿದ್ದು, ಕೃತಕ ಪಾನೀಯಗಳಿಗಿಂತ ರಾಸಾಯನಿಕ ಮುಕ್ತ ಹಾಗೂ ಯಾವುದೇ ಕಲಬೆರಿಕೆ ಮಾಡಲು ಸಾಧ್ಯವಾಗದ ಉತ್ತಮ ಔಷಧಿ ಗುಣಗಳನ್ನು ಹೊಂದಿರುವ ದೇಹವನ್ನು ತಂಪಾಗಿರಿಸುವ ನೈಸರ್ಗಿಕ ಪಾನೀಯವಾದ ಎಳನೀರು ಸೇವನೆ ಮಾಡುತ್ತಿದ್ದಾರೆ.

ಮಾರುಕಟ್ಟೆಯಲ್ಲಿ ಒಂದು ಎಳನೀರು 30 ರೂ.ಗೆ ಸಿಕ್ಕರೂ ಸಹ ಸಾಗಾಟ, ಕೊಯ್ದು ಮಾಡುವುದು, ಕೂಲಿ ಎಲ್ಲಾ ಸೇರಿ ಬೆಂಗಳೂರಿಗೆ ಬರುವಷ್ಟರಲ್ಲಿ 60 ರೂ ಆಗುತ್ತಿದ್ದು ಇದರಲ್ಲಿ ರೈತರಿಗೆ ಸಿಗುವ ಲಾಭ ಅಷ್ಟಕ್ಕಷ್ಟೆ. ಇಲ್ಲಿ ವ್ಯಾಪಾರಿಗಳು ಹೆಚ್ಚಿನ ಲಾಭ ಪಡೆದುಕೊಳ್ಳುತ್ತಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬೀಳುವಂತಾಗಿದೆ.

ಇನ್ನು ಮೇ ಅಂತ್ಯದವರೆಗೂ ರಾಜ್ಯದಲ್ಲಿ ಗರಿಷ್ಟ ಹಾಗೂ ಕನಿಷ್ಟ ತಾಪಮಾನವು ವಾಡಿಕೆಗಿಂತ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದು, ಜನರು ಆರೋಗ್ಯದತ್ತ ಗಮನ ಹರಿಸುವುದು ಸೂಕ್ತ ಎಂದು ಸಲಹೆ ನೀಡಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

8 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

12 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

16 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

18 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

19 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

20 hours ago