ಬೆಂಗಳೂರು : ಮುಂಬರುವ ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಾಗಲಿದ್ದು, ಪ್ರತಿ ಯೂನಿಟ್ಗೆ 12ರಿಂದ 15 ಪೈಸೆ ಹೆಚ್ಚುವರಿ ಶುಲ್ಕ ವಿಧಿಸಲು ಕರ್ನಾಟಕ ವಿದ್ಯುತ್ ಸುಧಾರಣಾ ಆಯೋಗ( ಕೆಇಆರ್ಸಿ) ತೀರ್ಮಾನಿಸಿದೆ.
ಈಗಾಗಲೇ 2025-26, 2026-27 ಮತ್ತು 2027-28ನೇ ಆರ್ಥಿಕ ವರ್ಷಗಳಿಗೆ ದರ ನಿಗದಿ ಮಾಡಲಾಗಿತ್ತು. ಆದರೆ, ಈಗ ಎದುರಾಗಿರುವ ನಷ್ಟವನ್ನು ಸರಿದೂಗಿಸಲು ಹೆಚ್ಚುವರಿ ದರ ಏರಿಕೆಗೆ ಕೆಇಆರ್ಸಿ ಚಿಂತನೆ ನಡೆಸಿದೆ.
ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿದ ನಂತರ 2026ರ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಪರಿಷ್ಕೃತ ವಿದ್ಯುತ್ ದರ ಪ್ರಕಟವಾಗುವ ಸಾಧ್ಯತೆಯಿದೆ. ಇದು ಜಾರಿಯಾದರೆ ಗ್ರಾಹಕರ ಜೇಬಿಗೆ ಕತ್ತರಿ ಬೀಳುವುದು ಖಚಿತ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಮುಂದೆ ಎಸ್ಕಾಂಗಳು ಸಲ್ಲಿಸಿರುವ ಪ್ರಸ್ತಾವನೆಯ ಪ್ರಕಾರ, ಏಪ್ರಿಲ್ 1, 2026ರಿಂದ ವಿದ್ಯುತ್ ದರದಲ್ಲಿ ಏರಿಕೆ ಆಗುವ ಸಾಧ್ಯತೆ ಇದೆ. ಪ್ರತಿ ಯೂನಿಟ್ಗೆ ಸರಾಸರಿ 12 ರಿಂದ 15 ಪೈಸೆ ಏರಿಕೆಯಾಗಬಹುದು.
ರಾಜ್ಯದ ಐದು ಎಸ್ಕಾಂಗಳು ಸಲ್ಲಿಸಿರುವ ಪ್ರಸ್ತಾವನೆಯ ಪ್ರಕಾರ, 2026-27ಗೆ ಸರಾಸರಿ 64 ಪೈಸೆಯಷ್ಟು ದರ ಏರಿಕೆ ಕೇಳಲಾಗಿದೆ. ಆದರೆ ಕೆಲವು ವರ್ಗಗಳಲ್ಲಿ ಇದು 67ರಿಂದ 99 ಪೈಸೆಗಳವರೆಗೆ ಏರಿಕೆಯಾಗಬಹುದು ಎಂದು ಸೂಚನೆಗಳಿವೆ. ದಿನಬಳಕೆ (ಡೊಮೆಸ್ಟಿಕ್) ವಿದ್ಯುತ್ ಬಳಕೆಯಲ್ಲಿ ಸ್ವಲ್ಪ ಏರಿಕೆಯಾಗಬಹುದು. ಕೈಗಾರಿಕಾ ಮತ್ತು ವಾಣಿಜ್ಯ ವಲಯದಲ್ಲಿ ಬಳಸುವ ವಿದ್ಯುತ್ ದರದಲ್ಲೂ ಹೆಚ್ಚಳ ಸಾಧ್ಯತೆ ಇದೆ.ಕೆಲವು ವರ್ಗಗಳಲ್ಲಿ ಇದು ಹೆಚ್ಚು ಆಗಬಹುದು. ಫಿಕ್ಸೆಡ್ ಚಾರ್ಜ್ನಲ್ಲೂ 10 ರಿಂದ 20 ರೂ.ವರೆಗೆ ಏರಿಕೆ ಸಾಧ್ಯತೆ ಇದೆ.
ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳು ಆದಾಯ ಕೊರತೆಯನ್ನು ಎದುರಿಸುತ್ತಿವೆ. ರಾಜ್ಯದ ಎಲ್ಲಾ ಎಸ್ಕಾಂಗಳು ಸೇರಿ ಅಂದಾಜು 4,500 ಕೋಟಿ ರೂ. ನಷ್ಟದಲ್ಲಿವೆ. ಇದರಲ್ಲಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಒಂದರಲ್ಲೆ? 2024-25ನೇ ಸಾಲಿನಲ್ಲಿ ಬರೋಬ್ಬರಿ 2,800 ಕೋಟಿಗೂ ಹೆಚ್ಚು ನಷ್ಟ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕಂಪನಿಗಳು ದರ ಏರಿಕೆಗೆ ಪಟ್ಟು ಹಿಡಿದಿವೆ.
ಎಸ್ಕಾಂಗಳ ಆದಾಯದ ಕೊರತೆಯನ್ನು ಸರಿದೂಗಿಸಲು ಪರ್ಯಾಯ ವ್ಯವಸ್ಥೆಗೆ ಮನವಿ ಮಾಡಲಾಗಿದೆ. 2025 ರ ಮಾರ್ಚ್ನಲ್ಲಿ, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಪ್ರತಿ ಯೂನಿಟ್ಗೆ 36 ಪೈಸೆಯಷ್ಟು ವಿದ್ಯುತ್ ದರವನ್ನು ಹೆಚ್ಚಿಸಿತ್ತು. ವಾಣಿಜ್ಯ ಮತ್ತು ಕೈಗಾರಿಕಾ ಗ್ರಾಹಕರಿಗೆ ವಿದ್ಯುತ್ ದರವನ್ನು ಹೆಚ್ಚಿಸುವ ಮೂಲಕ ತಮ 4,620 ಕೋಟಿ ರೂಪಾಯಿಗಳ ಆದಾಯದ ಅಂತರವನ್ನು ಸರಿದೂಗಿಸಲು ವಿದ್ಯುತ್ ಸರಬರಾಜು ನಿಗಮ ನಿಯಮಿತ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವನ್ನು ಕೋರಿದೆ ಎಂದು ತಿಳಿದುಬಂದಿದೆ.
ಕಳೆದ ವರ್ಷ ಮಾರ್ಚ್ನಲ್ಲಿ ದರ ಪರಿಷ್ಕರಣೆ ಮಾಡಿದಾಗ ಕೆಇಆರ್ಸಿ ಅಂದಾಜು ಮಾಡಿದ್ದ ಲೆಕ್ಕಾಚಾರದಲ್ಲಿ ವೆಚ್ಚ ಹೆಚ್ಚಾಗಿದ್ದರೆ, ಆದಾಯದಲ್ಲಿ ಖೋತಾ ಆಗಿದೆ. ಇದರ ನಡುವೆ ಸಮತೋಲನ ಕಾಪಾಡಲು ದರ ಪರಿಷ್ಕರಣೆ ಮಾಡುವ ಅಗತ್ಯವಿದೆ ಎಂದು ಎಸ್ಕಾಂಗಳು ಕೆಇಆರ್ಸಿಗೆ ಸಲ್ಲಿಸಿರುವ ವರದಿಯಲ್ಲಿ ಉಲ್ಲೇಖಿಸಿವೆ. ಒಟ್ಟಾರೆ ಪ್ರಸ್ತುತ ಹಾಗೂ ಮುಂದಿನ ಎರಡೂ ಆರ್ಥಿಕ ವರ್ಷಗಳಿಗೆ ವಿದ್ಯುತ್ ದರ ನಿಗದಿ ಮಾಡಲಾಗಿದ್ದರೂ, ಈ ಹಿಂದಿನ ವರ್ಷದ ನಷ್ಟ ಸರಿದೂಗಿಸಲು ಹೆಚ್ಚುವರಿ ವಿದ್ಯುತ್ ದರ ಏರಿಕೆಯೇ ಕೆಇಆರ್ಸಿಗೆ ಇರುವ ಮಾರ್ಗ ಎನ್ನಲಾಗುತ್ತಿದೆ.
ಸಾರ್ವಜನಿಕರ ಆಕ್ಷೇಪಣೆಗೆ ಆಹ್ವಾನ
ಬೆಸ್ಕಾಂ ಸೇರಿದಂತೆ ರಾಜ್ಯದ ವಿವಿಧ ಎಸ್ಕಾಂಗಳು 2024-25ನೇ ಸಾಲಿನ ತಮ್ಮ ಕಾರ್ಯನಿರ್ವಹಣಾ ವರದಿಯನ್ನು ಮತ್ತು ದರ ಏರಿಕೆಯ ಪ್ರಸ್ತಾವನೆಯನ್ನು ಕೆಇಆರ್ಸಿಗೆ ಸಲ್ಲಿಸಿವೆ. ವರದಿ ಸಲ್ಲಿಕೆಯ ಬೆನ್ನಲ್ಲೆ? ಆಯೋಗವು ಸಾರ್ವಜನಿಕರ ಅಹವಾಲು ಮತ್ತು ಆಕ್ಷೇಪಣೆಗಳನ್ನು ಆಲಿಸಲು ಮುಂದಾಗಿದೆ. ಈಗಾಗಲೇ ಫೆಬ್ರವರಿ 16 ರಿಂದ ಫೆಬ್ರವರಿ 27ರವರೆಗೆ ರಾಜ್ಯದ ನಾನಾ ಭಾಗಗಳಲ್ಲಿ ಕೆಇಆರ್ಸಿ ಸಾರ್ವಜನಿಕ ವಿಚಾರಣಾ ಸಭೆಗಳನ್ನು ನಡೆಸಲಿದೆ. ಈ ಸಭೆಗಳಲ್ಲಿ ಗ್ರಾಹಕರು ತಮ್ಮ ಅಭಿಪ್ರಾಯಗಳನ್ನು ತಿಳಿಸಬಹುದಾಗಿದೆ.
ಹನೂರು : ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ ನೀರು ತುಂಬಿಸಲು 491 ಕೋಟಿ ವೆಚ್ಚದ…
ಸಿದ್ದಾಪುರ : ಕಾಡುಕೋಣ ಡಿಕ್ಕಿ ಹೊಡೆದ ಪರಿಣಾಮ ವಾಹನ ಪಲ್ಟಿಯಾದ ಘಟನೆ ಸಮೀಪದ ಕರಡಿಗೋಡು ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.…
ಬೆಂಗಳೂರು : ಇಂದಿನ ಯುವ ಜನಾಂಗದಲ್ಲಿ ಹೆಚ್ಚುತ್ತಿರುವ ರೀಲ್ಸ್ ಹುಚ್ಚನ್ನು ಎನ್ಕ್ಯಾಶ್ ಮಾಡಿಕೊಳ್ಳುವ ಹೊಸ ಐಡಿಯಾವನ್ನು ಮುಜರಾಯಿ ಇಲಾಖೆ ಕಂಡುಕೊಂಡಿದೆ.…
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದ ಪ್ರಮುಖ ದೂರುದಾರ ಮತ್ತು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು…
ಮೈಸೂರು : ಸಂಘ ಸಂಸ್ಥೆ, ಸಂಘಟನೆಗಳು, ಸಾರ್ವಜನಿಕರು ಹಾಗೂ ಇತರರು ಸಾರ್ವಜನಿಕ ಪ್ರದೇಶದಲ್ಲಿ ಪ್ಲೇಕ್ಸ್ ಮತ್ತು ಬ್ಯಾನರ್ ಗಳನ್ನು ಅಳವಡಿಸಬೇಕಾದ್ದಲ್ಲಿ…
ಬೆಂಗಳೂರು : ಬಾಗಲಕೋಟೆಯ ಹಳೆಯ ನಗರದಲ್ಲಿ ಚತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಅಂಗವಾಗಿ ನಡೆದ ಭಾವಚಿತ್ರ ಮೆರವಣಿಗೆಯ ವೇಳೆ ನಡೆದ…