ಬೆಂಗಳೂರು: ಪಂಚೆ ತೊಟ್ಟಿದ್ದಕ್ಕೆ ಬೆಂಗಳೂರಿನ ಜಿ.ಟಿ.ಮಾಲ್ನಲ್ಲಿ ರೈತನಿಗೆ ಎಂಟ್ರಿ ನಿರಾಕರಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಜಿ.ಟಿ.ಮಾಲ್ ಜನತೆ ಬಳಿ ಕ್ಷಮೆ ಕೇಳಿದೆ.
ಮಾಲ್ಗೆ ಸಿನಿಮಾ ನೋಡಲು ಯುವಕನೊಬ್ಬ ತನ್ನ ತಂದೆ ಜೊತೆಗೆ ಬಂದಿದ್ದ. ಆದರೆ ಪಂಚೆ ಹಾಕಿದ ಕಾರಣಕ್ಕಾಗಿ ರೈತ ಮಾಲ್ ಒಳಗೆ ಹೋಗಲು ನಿರಾಕರಣೆ ಮಾಡಲಾಗಿತ್ತು.
ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಸಾರ್ವಜನಿಕ ವಲಯಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಎಲ್ಲಾ ಬೆಳವಣಿಗೆಗಳ ಬಳಿಕ ಎಚ್ಚೆತ್ತ ಜಿ.ಟಿ.ಮಾಲ್, ಜನತೆಯ ಬಳಿ ಕ್ಷಮೆ ಕೇಳಿದೆ.
ಈ ಘಟನೆಗೆ ನಮ್ಮ ಸಿಬ್ಬಂದಿಯ ತಪ್ಪು ತಿಳುವಳಿಕೆ ಕಾರಣವಾಗಿರುತ್ತದೆ. ಇದರಿಂದ ಅವಮಾನ ಆದ ವ್ಯಕ್ತಿಗೆ ನಾವು ಕ್ಷಮೆಯಾಚಿಸುತ್ತೇವೆ. ಈ ರೀತಿಯ ಘಟನೆಗಳು ಮತ್ತೆ ಸಂಭವಿಸದಂತೆ ಜವಾಬ್ದಾರಿ ವಹಿಸುತ್ತೇವೆ. ನಮ್ಮ ಮಾಲ್ಗೆ ಎಲ್ಲರಿಗೂ ಸುಸ್ವಾಗತ ಎಂದು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…
ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…
ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…
ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…