ರಾಜ್ಯ

ತಾಯ್ನಾಡಿಗೆ ಮರಳಿದ ಶಿಲ್ಪಿ ಅರುಣ್‌ ಯೋಗಿರಾಜ್‌ಗೆ ಅದ್ದೂರಿ ಸ್ವಾಗತ

ಅಯೋಧ್ಯೆ ರಾಮಮಂದಿರದ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಕನ್ನಡಿಗ, ಮೈಸೂರಿನ ಅರುಣ್‌ ಯೋಗಿರಾಜ್‌ ಕೆತ್ತಿದ್ದ ರಾಮಲಲ್ಲಾ ವಿಗ್ರಹವನ್ನು ಪ್ರಾಣಪ್ರತಿಷ್ಠೆಯ ದಿನ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದೆ.

ರಾಮಮಂದಿರದಲ್ಲಿ ಸ್ಥಾಪಿಸಲು ರಾಮಲಲ್ಲಾ ವಿಗ್ರಹವನ್ನು ಕೆತ್ತುವ ಜವಾಬ್ದಾರಿಯನ್ನು ದೇಶದ ವಿವಿಧ ಶಿಲ್ಪಿಗಳಿಗೆ ವಹಿಸಲಾಗಿತ್ತು. ಈ ಪೈಕಿ ಪ್ರಾಣಪ್ರತಿಷ್ಠಾಪನೆಗೆ ಮೈಸೂರಿನ ಅರುಣ್‌ ಯೋಗಿರಾಜ್‌ ಕೆತ್ತಿದ ರಾಮಲಲ್ಲಾ ಮೂರ್ತಿ ಆಯ್ಕೆಯಾಯಿತು.

ಅರುಣ್‌ ಕೆತ್ತಿದ್ದ ರಾಮಲಲ್ಲಾ ಮೂರ್ತಿ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ಪ್ರಾಣಪ್ರತಿಷ್ಠೆಗೂ ಮುನ್ನ ಇದರ ಚಿತ್ರ ಸೋರಿಕೆಯಾದಾಗ ಇಂಟರ್‌ನೆಟ್‌ನಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿ ಮೆಚ್ಚುಗೆ ಪಡೆದುಕೊಂಡಿತ್ತು. ಹೀಗೆ ತನ್ನ ಅದ್ಭುತ ಕೆತ್ತನೆ ಕಲೆ ಮೂಲಕ ದೇಶವ್ಯಾಪಿ ಜನಪ್ರಿಯತೆ ಗಳಿಸಿದ ಅರುಣ್‌ ಯೋಗಿರಾಜ್‌ ಅಯೋಧ್ಯೆಯಿಂದ ಸದ್ಯ ತಾಯ್ನಾಡಿಗೆ ಮರಳಿದ್ದಾರೆ.

ಅರುಣ್‌ ಯೋಗಿರಾಜ್‌ ವಿಮಾನದ ಮೂಲಕ ಬೆಂಗಳೂರಿನ ದೇವನಹಳ್ಳಿ ಸಮೀಪದಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಅರುಣ್‌ ಯೋಗಿರಾಜ್‌ ವಿಮಾನ ನಿಲ್ದಾಣದಿಂದ ನಿರ್ಗಮಿಸುತ್ತಿದ್ದಂತೆ ಹಾರ ಹಾಕಿ, ಜೈ ಶ್ರೀರಾಮ್‌ ಘೋಷಣೆ ಕೂಗುವ ಮೂಲಕ ಬರ ಮಾಡಿಕೊಳ್ಳಲಾಗಿದೆ. ಬಿಜೆಪಿ ಮಾಜಿ ಶಾಸಕ ನಂದೀಶ್‌ ರೆಡ್ಡಿ ಹಾಗೂ ಅನೇಕ ಬಿಜೆಪಿ ಕಾರ್ಯಕರ್ತರು ಕೇಸರಿ ಶಾಲು ಹೊದಿಸಿ ಬರಮಾಡಿಕೊಂಡಿದ್ದಾರೆ.  ಈ ಸಮಯದಲ್ಲಿ ಬಿಗಿ ಪೊಲೀಸ್‌ ಭದ್ರತೆಯನ್ನೂ ಸಹ ಅರುಣ್‌ ಯೋಗಿರಾಜ್‌ ಅವರಿಗೆ ನೀಡಲಾಗಿದೆ. 

ಈ ವೇಳೆ ಮಾತನಾಡಿದ ಅರುಣ್‌ ಯೋಗಿರಾಜ್‌ ರಾಮಮಂದಿರಕ್ಕೆ 200 ಕೆಜಿ ಚಿನ್ನ ಕೊಡಲು ಜನರು ತಯಾರಾಗಿದ್ದಾರೆ, ಆದರೆ ಮೈಸೂರಿನ ರೈತನ ಜಮೀನಿನಲ್ಲಿ ಸಿಕ್ಕ ಶಿಲೆ ಕೋಟಿ ಕೋಟಿ ಭಕ್ತರ ಆರಾಧ್ಯದೈವ ರಾಮನ ಮೂರ್ತಿಗೆ ಆಯ್ಕೆಯಾಗಿದೆ. ಇದು ರಾಜ್ಯದ ಜನರಿಗೆ ಹೆಮ್ಮೆಯ ವಿಷಯ ಎಂದಿದ್ದಾರೆ. ಕಳೆದ ಏಳು ತಿಂಗಳಿನಿಂದ ಪರಿಶ್ರಮಪಟ್ಟು ವಿಗ್ರಹ ಕೆತ್ತಿದ್ದೇನೆ, ಶ್ರೀರಾಮನೇ ಕೆತ್ತನೆ ಮಾಡಿಸಿಕೊಂಡಿದ್ದಾರೆ. ರಾಮನ ವಿಗ್ರಹ ಕೆತ್ತನೆ ಅವಕಾಶ ಸಿಕ್ಕಿದ್ದು ನನ್ನ ಪೂರ್ವ ಜನ್ಮದ ಪುಣ್ಯ, ಸಣ್ಣ ಹಳ್ಳಿಯಿಂದ ಬಂದ ನನಗೆ ಈ ಅವಕಾಶ ಸಿಕ್ಕಿದ್ದು ಖುಷಿಯಿದೆ. ನನ್ನ ಕೆಲಸಕ್ಕೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಒಬ್ಬ ಶಿಲ್ಪಿಗೆ ಇದಕ್ಕಿಂತ ಖುಷಿ ಇನ್ನೇನಿದೆ ಎಂದು ಹೇಳಿಕೆ ನೀಡಿದ್ದಾರೆ.

andolana

Recent Posts

ಗುಂಡ್ಲುಪೇಟೆ | ವಿದ್ಯುತ್ ಸ್ಪರ್ಶಿಸಿ ಹುಲಿ ಸಾವು

ಗುಂಡ್ಲುಪೇಟೆ : ತಾಲೂಕಿನ ಪಡಗೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಅಡವಿ ಮಠದ ಸಮೀಪವಿರುವ…

6 mins ago

ಓದುಗರ ಪತ್ರ | ಪ್ರಾಣಿ, ಪಕ್ಷಿಗಳಿಗೆ ನೀರು ಕೊಡಿ

ಬೇಸಿಗೆ ಆರಂಭವಾಗುವುದೇ ತಡ ಪ್ರತಿಯೊಬ್ಬರಿಗೂ ಬಾಯಾರಿಕೆ ಹೆಚ್ಚಾಗಿ, ಜಾಸ್ತಿ ನೀರು ಕುಡಿಯಬೇಕಾಗುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಎಂತಹವರಿಗೂ ವಿವಿಧ ರೀತಿಯ…

36 mins ago

ಓದುಗರ ಪತ್ರ | ಸರ್ಕಾರಿ ಶಾಲೆಗಳಿಗೆ ಲ್ಯಾಪ್ ಟಾಪ್, ವೈಫೈ ಸೌಲಭ್ಯ ಕಲ್ಪಿಸಿ

ಈಗ ಶಾಲೆಯಲ್ಲಿ ಶಿಕ್ಷಕರು ಕೇವಲ ಪಠ್ಯ ಬೋಧಕರಾಗಿ ಮಾತ್ರ ಉಳಿದಿಲ್ಲ. ಬೋಧನೆಯ ಜೊತೆ ಜೊತೆಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳುವುದು, ಮಧ್ಯಾಹ್ನದ…

1 hour ago

ಆಂದೋಲನ ವಿಶೇಷ ; ಸೋನಂ ವಾಂಗ್ಚುಕ್ ದಿಢೀರ್ ಬಿಡುಗಡೆ ‌

• ಆರೋಪ ಸಾಬೀತು ಮಾಡಲು ಕೇಂದ್ರ ವಿಫಲ • ಸುಪ್ರೀಂ ಮುಜುಗರದಿಂದ ಪಾರು? ಪರಿಸರ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಮಾಡಿದ…

3 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆಗೆ ಸಕಲ ಸಿದ್ಧತೆ

ಮಹಾದೇಶ್‌ ಎಂ.ಗೌಡ ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರದಿಂದ ಪ್ರಾರಂಭವಾಗಿರುವ ಯುಗಾದಿ ಜಾತ್ರಾ ಮಹೋತ್ಸವ ಮಾರ್ಚ್ 19ರವರೆಗೆ…

3 hours ago

ಮತ್ತೆ ಚಿಗುರೊಡೆದ ಎಂಡಿಎ ಹೊಸ ಬಡಾವಣೆಯ ಕನಸು

ಅಧಿಕಾರಿಗಳ ಮನವೊಲಿಕೆಗೆ ಸಮ್ಮತಿಸುತ್ತಿರುವ ಭೂ ಮಾಲೀಕರು ಕೆ.ಬಿ.ರಮೇಶನಾಯಕ ಮೈಸೂರು : ದಶಕಗಳಿಂದಲೂ ಬಡ-ಮಧ್ಯಮ ವರ್ಗದ ಜನರಿಗೆ ನಿವೇಶನ ಹಂಚಿಕೆ ಮಾಡಲು,…

4 hours ago