ರಾಜ್ಯ

ತಾಯ್ನಾಡಿಗೆ ಮರಳಿದ ಶಿಲ್ಪಿ ಅರುಣ್‌ ಯೋಗಿರಾಜ್‌ಗೆ ಅದ್ದೂರಿ ಸ್ವಾಗತ

ಅಯೋಧ್ಯೆ ರಾಮಮಂದಿರದ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಕನ್ನಡಿಗ, ಮೈಸೂರಿನ ಅರುಣ್‌ ಯೋಗಿರಾಜ್‌ ಕೆತ್ತಿದ್ದ ರಾಮಲಲ್ಲಾ ವಿಗ್ರಹವನ್ನು ಪ್ರಾಣಪ್ರತಿಷ್ಠೆಯ ದಿನ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದೆ.

ರಾಮಮಂದಿರದಲ್ಲಿ ಸ್ಥಾಪಿಸಲು ರಾಮಲಲ್ಲಾ ವಿಗ್ರಹವನ್ನು ಕೆತ್ತುವ ಜವಾಬ್ದಾರಿಯನ್ನು ದೇಶದ ವಿವಿಧ ಶಿಲ್ಪಿಗಳಿಗೆ ವಹಿಸಲಾಗಿತ್ತು. ಈ ಪೈಕಿ ಪ್ರಾಣಪ್ರತಿಷ್ಠಾಪನೆಗೆ ಮೈಸೂರಿನ ಅರುಣ್‌ ಯೋಗಿರಾಜ್‌ ಕೆತ್ತಿದ ರಾಮಲಲ್ಲಾ ಮೂರ್ತಿ ಆಯ್ಕೆಯಾಯಿತು.

ಅರುಣ್‌ ಕೆತ್ತಿದ್ದ ರಾಮಲಲ್ಲಾ ಮೂರ್ತಿ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ಪ್ರಾಣಪ್ರತಿಷ್ಠೆಗೂ ಮುನ್ನ ಇದರ ಚಿತ್ರ ಸೋರಿಕೆಯಾದಾಗ ಇಂಟರ್‌ನೆಟ್‌ನಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿ ಮೆಚ್ಚುಗೆ ಪಡೆದುಕೊಂಡಿತ್ತು. ಹೀಗೆ ತನ್ನ ಅದ್ಭುತ ಕೆತ್ತನೆ ಕಲೆ ಮೂಲಕ ದೇಶವ್ಯಾಪಿ ಜನಪ್ರಿಯತೆ ಗಳಿಸಿದ ಅರುಣ್‌ ಯೋಗಿರಾಜ್‌ ಅಯೋಧ್ಯೆಯಿಂದ ಸದ್ಯ ತಾಯ್ನಾಡಿಗೆ ಮರಳಿದ್ದಾರೆ.

ಅರುಣ್‌ ಯೋಗಿರಾಜ್‌ ವಿಮಾನದ ಮೂಲಕ ಬೆಂಗಳೂರಿನ ದೇವನಹಳ್ಳಿ ಸಮೀಪದಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಅರುಣ್‌ ಯೋಗಿರಾಜ್‌ ವಿಮಾನ ನಿಲ್ದಾಣದಿಂದ ನಿರ್ಗಮಿಸುತ್ತಿದ್ದಂತೆ ಹಾರ ಹಾಕಿ, ಜೈ ಶ್ರೀರಾಮ್‌ ಘೋಷಣೆ ಕೂಗುವ ಮೂಲಕ ಬರ ಮಾಡಿಕೊಳ್ಳಲಾಗಿದೆ. ಬಿಜೆಪಿ ಮಾಜಿ ಶಾಸಕ ನಂದೀಶ್‌ ರೆಡ್ಡಿ ಹಾಗೂ ಅನೇಕ ಬಿಜೆಪಿ ಕಾರ್ಯಕರ್ತರು ಕೇಸರಿ ಶಾಲು ಹೊದಿಸಿ ಬರಮಾಡಿಕೊಂಡಿದ್ದಾರೆ.  ಈ ಸಮಯದಲ್ಲಿ ಬಿಗಿ ಪೊಲೀಸ್‌ ಭದ್ರತೆಯನ್ನೂ ಸಹ ಅರುಣ್‌ ಯೋಗಿರಾಜ್‌ ಅವರಿಗೆ ನೀಡಲಾಗಿದೆ. 

ಈ ವೇಳೆ ಮಾತನಾಡಿದ ಅರುಣ್‌ ಯೋಗಿರಾಜ್‌ ರಾಮಮಂದಿರಕ್ಕೆ 200 ಕೆಜಿ ಚಿನ್ನ ಕೊಡಲು ಜನರು ತಯಾರಾಗಿದ್ದಾರೆ, ಆದರೆ ಮೈಸೂರಿನ ರೈತನ ಜಮೀನಿನಲ್ಲಿ ಸಿಕ್ಕ ಶಿಲೆ ಕೋಟಿ ಕೋಟಿ ಭಕ್ತರ ಆರಾಧ್ಯದೈವ ರಾಮನ ಮೂರ್ತಿಗೆ ಆಯ್ಕೆಯಾಗಿದೆ. ಇದು ರಾಜ್ಯದ ಜನರಿಗೆ ಹೆಮ್ಮೆಯ ವಿಷಯ ಎಂದಿದ್ದಾರೆ. ಕಳೆದ ಏಳು ತಿಂಗಳಿನಿಂದ ಪರಿಶ್ರಮಪಟ್ಟು ವಿಗ್ರಹ ಕೆತ್ತಿದ್ದೇನೆ, ಶ್ರೀರಾಮನೇ ಕೆತ್ತನೆ ಮಾಡಿಸಿಕೊಂಡಿದ್ದಾರೆ. ರಾಮನ ವಿಗ್ರಹ ಕೆತ್ತನೆ ಅವಕಾಶ ಸಿಕ್ಕಿದ್ದು ನನ್ನ ಪೂರ್ವ ಜನ್ಮದ ಪುಣ್ಯ, ಸಣ್ಣ ಹಳ್ಳಿಯಿಂದ ಬಂದ ನನಗೆ ಈ ಅವಕಾಶ ಸಿಕ್ಕಿದ್ದು ಖುಷಿಯಿದೆ. ನನ್ನ ಕೆಲಸಕ್ಕೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಒಬ್ಬ ಶಿಲ್ಪಿಗೆ ಇದಕ್ಕಿಂತ ಖುಷಿ ಇನ್ನೇನಿದೆ ಎಂದು ಹೇಳಿಕೆ ನೀಡಿದ್ದಾರೆ.

andolana

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

13 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

13 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

13 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

13 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

13 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

14 hours ago