ಅಯೋಧ್ಯೆ ರಾಮಮಂದಿರದ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಕನ್ನಡಿಗ, ಮೈಸೂರಿನ ಅರುಣ್ ಯೋಗಿರಾಜ್ ಕೆತ್ತಿದ್ದ ರಾಮಲಲ್ಲಾ ವಿಗ್ರಹವನ್ನು ಪ್ರಾಣಪ್ರತಿಷ್ಠೆಯ ದಿನ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದೆ.
ರಾಮಮಂದಿರದಲ್ಲಿ ಸ್ಥಾಪಿಸಲು ರಾಮಲಲ್ಲಾ ವಿಗ್ರಹವನ್ನು ಕೆತ್ತುವ ಜವಾಬ್ದಾರಿಯನ್ನು ದೇಶದ ವಿವಿಧ ಶಿಲ್ಪಿಗಳಿಗೆ ವಹಿಸಲಾಗಿತ್ತು. ಈ ಪೈಕಿ ಪ್ರಾಣಪ್ರತಿಷ್ಠಾಪನೆಗೆ ಮೈಸೂರಿನ ಅರುಣ್ ಯೋಗಿರಾಜ್ ಕೆತ್ತಿದ ರಾಮಲಲ್ಲಾ ಮೂರ್ತಿ ಆಯ್ಕೆಯಾಯಿತು.
ಅರುಣ್ ಕೆತ್ತಿದ್ದ ರಾಮಲಲ್ಲಾ ಮೂರ್ತಿ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ಪ್ರಾಣಪ್ರತಿಷ್ಠೆಗೂ ಮುನ್ನ ಇದರ ಚಿತ್ರ ಸೋರಿಕೆಯಾದಾಗ ಇಂಟರ್ನೆಟ್ನಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿ ಮೆಚ್ಚುಗೆ ಪಡೆದುಕೊಂಡಿತ್ತು. ಹೀಗೆ ತನ್ನ ಅದ್ಭುತ ಕೆತ್ತನೆ ಕಲೆ ಮೂಲಕ ದೇಶವ್ಯಾಪಿ ಜನಪ್ರಿಯತೆ ಗಳಿಸಿದ ಅರುಣ್ ಯೋಗಿರಾಜ್ ಅಯೋಧ್ಯೆಯಿಂದ ಸದ್ಯ ತಾಯ್ನಾಡಿಗೆ ಮರಳಿದ್ದಾರೆ.
ಅರುಣ್ ಯೋಗಿರಾಜ್ ವಿಮಾನದ ಮೂಲಕ ಬೆಂಗಳೂರಿನ ದೇವನಹಳ್ಳಿ ಸಮೀಪದಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಅರುಣ್ ಯೋಗಿರಾಜ್ ವಿಮಾನ ನಿಲ್ದಾಣದಿಂದ ನಿರ್ಗಮಿಸುತ್ತಿದ್ದಂತೆ ಹಾರ ಹಾಕಿ, ಜೈ ಶ್ರೀರಾಮ್ ಘೋಷಣೆ ಕೂಗುವ ಮೂಲಕ ಬರ ಮಾಡಿಕೊಳ್ಳಲಾಗಿದೆ. ಬಿಜೆಪಿ ಮಾಜಿ ಶಾಸಕ ನಂದೀಶ್ ರೆಡ್ಡಿ ಹಾಗೂ ಅನೇಕ ಬಿಜೆಪಿ ಕಾರ್ಯಕರ್ತರು ಕೇಸರಿ ಶಾಲು ಹೊದಿಸಿ ಬರಮಾಡಿಕೊಂಡಿದ್ದಾರೆ. ಈ ಸಮಯದಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನೂ ಸಹ ಅರುಣ್ ಯೋಗಿರಾಜ್ ಅವರಿಗೆ ನೀಡಲಾಗಿದೆ.
ಈ ವೇಳೆ ಮಾತನಾಡಿದ ಅರುಣ್ ಯೋಗಿರಾಜ್ ರಾಮಮಂದಿರಕ್ಕೆ 200 ಕೆಜಿ ಚಿನ್ನ ಕೊಡಲು ಜನರು ತಯಾರಾಗಿದ್ದಾರೆ, ಆದರೆ ಮೈಸೂರಿನ ರೈತನ ಜಮೀನಿನಲ್ಲಿ ಸಿಕ್ಕ ಶಿಲೆ ಕೋಟಿ ಕೋಟಿ ಭಕ್ತರ ಆರಾಧ್ಯದೈವ ರಾಮನ ಮೂರ್ತಿಗೆ ಆಯ್ಕೆಯಾಗಿದೆ. ಇದು ರಾಜ್ಯದ ಜನರಿಗೆ ಹೆಮ್ಮೆಯ ವಿಷಯ ಎಂದಿದ್ದಾರೆ. ಕಳೆದ ಏಳು ತಿಂಗಳಿನಿಂದ ಪರಿಶ್ರಮಪಟ್ಟು ವಿಗ್ರಹ ಕೆತ್ತಿದ್ದೇನೆ, ಶ್ರೀರಾಮನೇ ಕೆತ್ತನೆ ಮಾಡಿಸಿಕೊಂಡಿದ್ದಾರೆ. ರಾಮನ ವಿಗ್ರಹ ಕೆತ್ತನೆ ಅವಕಾಶ ಸಿಕ್ಕಿದ್ದು ನನ್ನ ಪೂರ್ವ ಜನ್ಮದ ಪುಣ್ಯ, ಸಣ್ಣ ಹಳ್ಳಿಯಿಂದ ಬಂದ ನನಗೆ ಈ ಅವಕಾಶ ಸಿಕ್ಕಿದ್ದು ಖುಷಿಯಿದೆ. ನನ್ನ ಕೆಲಸಕ್ಕೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಒಬ್ಬ ಶಿಲ್ಪಿಗೆ ಇದಕ್ಕಿಂತ ಖುಷಿ ಇನ್ನೇನಿದೆ ಎಂದು ಹೇಳಿಕೆ ನೀಡಿದ್ದಾರೆ.
ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…