ಅಯೋಧ್ಯೆ ರಾಮಮಂದಿರದ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಕನ್ನಡಿಗ, ಮೈಸೂರಿನ ಅರುಣ್ ಯೋಗಿರಾಜ್ ಕೆತ್ತಿದ್ದ ರಾಮಲಲ್ಲಾ ವಿಗ್ರಹವನ್ನು ಪ್ರಾಣಪ್ರತಿಷ್ಠೆಯ ದಿನ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದೆ.
ರಾಮಮಂದಿರದಲ್ಲಿ ಸ್ಥಾಪಿಸಲು ರಾಮಲಲ್ಲಾ ವಿಗ್ರಹವನ್ನು ಕೆತ್ತುವ ಜವಾಬ್ದಾರಿಯನ್ನು ದೇಶದ ವಿವಿಧ ಶಿಲ್ಪಿಗಳಿಗೆ ವಹಿಸಲಾಗಿತ್ತು. ಈ ಪೈಕಿ ಪ್ರಾಣಪ್ರತಿಷ್ಠಾಪನೆಗೆ ಮೈಸೂರಿನ ಅರುಣ್ ಯೋಗಿರಾಜ್ ಕೆತ್ತಿದ ರಾಮಲಲ್ಲಾ ಮೂರ್ತಿ ಆಯ್ಕೆಯಾಯಿತು.
ಅರುಣ್ ಕೆತ್ತಿದ್ದ ರಾಮಲಲ್ಲಾ ಮೂರ್ತಿ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ಪ್ರಾಣಪ್ರತಿಷ್ಠೆಗೂ ಮುನ್ನ ಇದರ ಚಿತ್ರ ಸೋರಿಕೆಯಾದಾಗ ಇಂಟರ್ನೆಟ್ನಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿ ಮೆಚ್ಚುಗೆ ಪಡೆದುಕೊಂಡಿತ್ತು. ಹೀಗೆ ತನ್ನ ಅದ್ಭುತ ಕೆತ್ತನೆ ಕಲೆ ಮೂಲಕ ದೇಶವ್ಯಾಪಿ ಜನಪ್ರಿಯತೆ ಗಳಿಸಿದ ಅರುಣ್ ಯೋಗಿರಾಜ್ ಅಯೋಧ್ಯೆಯಿಂದ ಸದ್ಯ ತಾಯ್ನಾಡಿಗೆ ಮರಳಿದ್ದಾರೆ.
ಅರುಣ್ ಯೋಗಿರಾಜ್ ವಿಮಾನದ ಮೂಲಕ ಬೆಂಗಳೂರಿನ ದೇವನಹಳ್ಳಿ ಸಮೀಪದಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಅರುಣ್ ಯೋಗಿರಾಜ್ ವಿಮಾನ ನಿಲ್ದಾಣದಿಂದ ನಿರ್ಗಮಿಸುತ್ತಿದ್ದಂತೆ ಹಾರ ಹಾಕಿ, ಜೈ ಶ್ರೀರಾಮ್ ಘೋಷಣೆ ಕೂಗುವ ಮೂಲಕ ಬರ ಮಾಡಿಕೊಳ್ಳಲಾಗಿದೆ. ಬಿಜೆಪಿ ಮಾಜಿ ಶಾಸಕ ನಂದೀಶ್ ರೆಡ್ಡಿ ಹಾಗೂ ಅನೇಕ ಬಿಜೆಪಿ ಕಾರ್ಯಕರ್ತರು ಕೇಸರಿ ಶಾಲು ಹೊದಿಸಿ ಬರಮಾಡಿಕೊಂಡಿದ್ದಾರೆ. ಈ ಸಮಯದಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನೂ ಸಹ ಅರುಣ್ ಯೋಗಿರಾಜ್ ಅವರಿಗೆ ನೀಡಲಾಗಿದೆ.
ಈ ವೇಳೆ ಮಾತನಾಡಿದ ಅರುಣ್ ಯೋಗಿರಾಜ್ ರಾಮಮಂದಿರಕ್ಕೆ 200 ಕೆಜಿ ಚಿನ್ನ ಕೊಡಲು ಜನರು ತಯಾರಾಗಿದ್ದಾರೆ, ಆದರೆ ಮೈಸೂರಿನ ರೈತನ ಜಮೀನಿನಲ್ಲಿ ಸಿಕ್ಕ ಶಿಲೆ ಕೋಟಿ ಕೋಟಿ ಭಕ್ತರ ಆರಾಧ್ಯದೈವ ರಾಮನ ಮೂರ್ತಿಗೆ ಆಯ್ಕೆಯಾಗಿದೆ. ಇದು ರಾಜ್ಯದ ಜನರಿಗೆ ಹೆಮ್ಮೆಯ ವಿಷಯ ಎಂದಿದ್ದಾರೆ. ಕಳೆದ ಏಳು ತಿಂಗಳಿನಿಂದ ಪರಿಶ್ರಮಪಟ್ಟು ವಿಗ್ರಹ ಕೆತ್ತಿದ್ದೇನೆ, ಶ್ರೀರಾಮನೇ ಕೆತ್ತನೆ ಮಾಡಿಸಿಕೊಂಡಿದ್ದಾರೆ. ರಾಮನ ವಿಗ್ರಹ ಕೆತ್ತನೆ ಅವಕಾಶ ಸಿಕ್ಕಿದ್ದು ನನ್ನ ಪೂರ್ವ ಜನ್ಮದ ಪುಣ್ಯ, ಸಣ್ಣ ಹಳ್ಳಿಯಿಂದ ಬಂದ ನನಗೆ ಈ ಅವಕಾಶ ಸಿಕ್ಕಿದ್ದು ಖುಷಿಯಿದೆ. ನನ್ನ ಕೆಲಸಕ್ಕೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಒಬ್ಬ ಶಿಲ್ಪಿಗೆ ಇದಕ್ಕಿಂತ ಖುಷಿ ಇನ್ನೇನಿದೆ ಎಂದು ಹೇಳಿಕೆ ನೀಡಿದ್ದಾರೆ.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…