ರಾಜ್ಯ

ತಾಯ್ನಾಡಿಗೆ ಮರಳಿದ ಶಿಲ್ಪಿ ಅರುಣ್‌ ಯೋಗಿರಾಜ್‌ಗೆ ಅದ್ದೂರಿ ಸ್ವಾಗತ

ಅಯೋಧ್ಯೆ ರಾಮಮಂದಿರದ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಕನ್ನಡಿಗ, ಮೈಸೂರಿನ ಅರುಣ್‌ ಯೋಗಿರಾಜ್‌ ಕೆತ್ತಿದ್ದ ರಾಮಲಲ್ಲಾ ವಿಗ್ರಹವನ್ನು ಪ್ರಾಣಪ್ರತಿಷ್ಠೆಯ ದಿನ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದೆ.

ರಾಮಮಂದಿರದಲ್ಲಿ ಸ್ಥಾಪಿಸಲು ರಾಮಲಲ್ಲಾ ವಿಗ್ರಹವನ್ನು ಕೆತ್ತುವ ಜವಾಬ್ದಾರಿಯನ್ನು ದೇಶದ ವಿವಿಧ ಶಿಲ್ಪಿಗಳಿಗೆ ವಹಿಸಲಾಗಿತ್ತು. ಈ ಪೈಕಿ ಪ್ರಾಣಪ್ರತಿಷ್ಠಾಪನೆಗೆ ಮೈಸೂರಿನ ಅರುಣ್‌ ಯೋಗಿರಾಜ್‌ ಕೆತ್ತಿದ ರಾಮಲಲ್ಲಾ ಮೂರ್ತಿ ಆಯ್ಕೆಯಾಯಿತು.

ಅರುಣ್‌ ಕೆತ್ತಿದ್ದ ರಾಮಲಲ್ಲಾ ಮೂರ್ತಿ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ಪ್ರಾಣಪ್ರತಿಷ್ಠೆಗೂ ಮುನ್ನ ಇದರ ಚಿತ್ರ ಸೋರಿಕೆಯಾದಾಗ ಇಂಟರ್‌ನೆಟ್‌ನಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿ ಮೆಚ್ಚುಗೆ ಪಡೆದುಕೊಂಡಿತ್ತು. ಹೀಗೆ ತನ್ನ ಅದ್ಭುತ ಕೆತ್ತನೆ ಕಲೆ ಮೂಲಕ ದೇಶವ್ಯಾಪಿ ಜನಪ್ರಿಯತೆ ಗಳಿಸಿದ ಅರುಣ್‌ ಯೋಗಿರಾಜ್‌ ಅಯೋಧ್ಯೆಯಿಂದ ಸದ್ಯ ತಾಯ್ನಾಡಿಗೆ ಮರಳಿದ್ದಾರೆ.

ಅರುಣ್‌ ಯೋಗಿರಾಜ್‌ ವಿಮಾನದ ಮೂಲಕ ಬೆಂಗಳೂರಿನ ದೇವನಹಳ್ಳಿ ಸಮೀಪದಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಅರುಣ್‌ ಯೋಗಿರಾಜ್‌ ವಿಮಾನ ನಿಲ್ದಾಣದಿಂದ ನಿರ್ಗಮಿಸುತ್ತಿದ್ದಂತೆ ಹಾರ ಹಾಕಿ, ಜೈ ಶ್ರೀರಾಮ್‌ ಘೋಷಣೆ ಕೂಗುವ ಮೂಲಕ ಬರ ಮಾಡಿಕೊಳ್ಳಲಾಗಿದೆ. ಬಿಜೆಪಿ ಮಾಜಿ ಶಾಸಕ ನಂದೀಶ್‌ ರೆಡ್ಡಿ ಹಾಗೂ ಅನೇಕ ಬಿಜೆಪಿ ಕಾರ್ಯಕರ್ತರು ಕೇಸರಿ ಶಾಲು ಹೊದಿಸಿ ಬರಮಾಡಿಕೊಂಡಿದ್ದಾರೆ.  ಈ ಸಮಯದಲ್ಲಿ ಬಿಗಿ ಪೊಲೀಸ್‌ ಭದ್ರತೆಯನ್ನೂ ಸಹ ಅರುಣ್‌ ಯೋಗಿರಾಜ್‌ ಅವರಿಗೆ ನೀಡಲಾಗಿದೆ. 

ಈ ವೇಳೆ ಮಾತನಾಡಿದ ಅರುಣ್‌ ಯೋಗಿರಾಜ್‌ ರಾಮಮಂದಿರಕ್ಕೆ 200 ಕೆಜಿ ಚಿನ್ನ ಕೊಡಲು ಜನರು ತಯಾರಾಗಿದ್ದಾರೆ, ಆದರೆ ಮೈಸೂರಿನ ರೈತನ ಜಮೀನಿನಲ್ಲಿ ಸಿಕ್ಕ ಶಿಲೆ ಕೋಟಿ ಕೋಟಿ ಭಕ್ತರ ಆರಾಧ್ಯದೈವ ರಾಮನ ಮೂರ್ತಿಗೆ ಆಯ್ಕೆಯಾಗಿದೆ. ಇದು ರಾಜ್ಯದ ಜನರಿಗೆ ಹೆಮ್ಮೆಯ ವಿಷಯ ಎಂದಿದ್ದಾರೆ. ಕಳೆದ ಏಳು ತಿಂಗಳಿನಿಂದ ಪರಿಶ್ರಮಪಟ್ಟು ವಿಗ್ರಹ ಕೆತ್ತಿದ್ದೇನೆ, ಶ್ರೀರಾಮನೇ ಕೆತ್ತನೆ ಮಾಡಿಸಿಕೊಂಡಿದ್ದಾರೆ. ರಾಮನ ವಿಗ್ರಹ ಕೆತ್ತನೆ ಅವಕಾಶ ಸಿಕ್ಕಿದ್ದು ನನ್ನ ಪೂರ್ವ ಜನ್ಮದ ಪುಣ್ಯ, ಸಣ್ಣ ಹಳ್ಳಿಯಿಂದ ಬಂದ ನನಗೆ ಈ ಅವಕಾಶ ಸಿಕ್ಕಿದ್ದು ಖುಷಿಯಿದೆ. ನನ್ನ ಕೆಲಸಕ್ಕೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಒಬ್ಬ ಶಿಲ್ಪಿಗೆ ಇದಕ್ಕಿಂತ ಖುಷಿ ಇನ್ನೇನಿದೆ ಎಂದು ಹೇಳಿಕೆ ನೀಡಿದ್ದಾರೆ.

andolana

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

6 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

6 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

7 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

7 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

8 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

8 hours ago