ಮೈಸೂರು: ಸಂಸತ್ತಿನಲ್ಲಿ ಭದ್ರತಾ ಲೋಪ ಪ್ರಕರಣದ ಆರೋಪಿ ಡಿ.ಮನೋರಂಜನ್ ಅವರಿಗೆ ಪಾಸ್ಗೆ ಶಿಫಾರಸು ಮಾಡಿದ್ದ ಸಂಸದ ಪ್ರತಾಪ ಸಿಂಹ ಇದೇ ಮೊದಲ ಬಾರಿಗೆ ಆ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಭದ್ರತಾ ಲೋಪದ ಬಗ್ಗೆ ಯಾವುದೇ ವಿವರಣೆ ಕೊಡುವುದಿಲ್ಲ. ಇದನ್ನು ಬಿಟ್ಟು ಬೇರೇನಿದ್ದರೇ ಕೇಳಿ ಎಂದು ಅವರು ಹೇಳಿದ್ದಾರೆ.
ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ‘ಪ್ರತಾಪ ಸಿಂಹ ದೇಶದ್ರೋಹಿಯೇ ಅಥವಾ ದೇಶಪ್ರೇಮಿಯೇ ಎನ್ನುವುದು ಬೆಟ್ಟದ ಚಾಮುಂಡಿ ತಾಯಿ ಹಾಗೂ ಕೊಡಗಿನ ಕಾವೇರಿ ತಾಯಿಗೆ ಗೊತ್ತು. ನನ್ನ ಲೇಖನಗಳನ್ನು ಓದಿದ ಓದುಗರಿಗೆ ಗೊತ್ತು’ ಎಂದು ಹೇಳಿದರು.
‘ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಜನರು ಮುಂಬರುವ ಚುನಾವಣೆಯಲ್ಲಿ ನಾನು ದೇಶಪ್ರೇಮಿಯೋ ಅಥವಾ ದೇಶದ್ರೋಹಿಯೋ ಎಂದು ತೀರ್ಮಾನ ಮಾಡುತ್ತಾರೆ. ಈ ವಿಚಾರದಲ್ಲಿ ಇಷ್ಟು ಮಾತ್ರವೇ ಹೇಳುತ್ತೇನೆ. ಆ ಬಗ್ಗೆ ಇನ್ನೇನೂ ಕೇಳಬೇಡಿ’ ಎಂದು ಪ್ರತಿಕ್ರಿಯಿಸಿದರು.
ಹಿಜಾಬ್ ನಿಷೇಧದ ಕುರಿತು ಪ್ರತಿಕ್ರಿಯಿಸಿ, ಇದು ಹಿಂದೂ- ಮುಸ್ಲಿಂ ಎಂಬ ವಿಚಾರವಲ್ಲ. ವಸ್ತ್ರ ಸಂಹಿತೆ ಎಂದಿರುತ್ತದೆ. ಅದನ್ನು ಪಾಲಿಸಬೇಕಷ್ಟೆ ಎಂದು ಹೇಳಿದರು.
ಕನ್ನಡಕ್ಕೆ ಶ್ರೇಷ್ಠ ದಾಂಪತ್ಯ ಗೀತೆಗಳನ್ನು ನೀಡಿದ, ಪ್ರೇಮಕವಿಯೆಂದೇ ಹೆಸರಾದ ನಾಡಿನ ಹಿರಿಯ ಕವಿ ಕೆ.ಎಸ್.ನರಸಿಂಹಸ್ವಾಮಿ ಅವರ ಗೌರವಾರ್ಥವಾಗಿ ಹುಟ್ಟೂರಾದ ಕಿಕ್ಕೇರಿಯ…
ಮೈಸೂರಿನಲ್ಲಿ ಸ್ವಲ್ಪ ಮಳೆಯಾದರೂ ರೂಪಾನಗರ ಬಡಾವಣೆಯಲ್ಲಿ ವಿದ್ಯುತ್ ಕಡಿತ ಮಾಡಲಾಗುತ್ತದೆ. ರಾತ್ರಿ ವೇಳೆ ಮಳೆ ಬಂದರಂತೂ ವಿದ್ಯುತ್ ಸಂಪರ್ಕಕಲ್ಪಿಸುವುದು ಬೆಳಿಗ್ಗೆಯೇ.…
ದೆಹಲಿ ಕಣ್ಣೋಟ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ಕಳೆದ ಒಂದೂವರೆ ತಿಂಗಳಿಂದ ನಡೆಸುತ್ತಿರುವ ಯುದ್ಧದಿಂದ ಉಂಟಾಗಿರುವ ಇಂಧನ ಮತ್ತು ಅನಿಲ…
ಕನ್ನಡದ ನಾಲ್ವರು ಖ್ಯಾತ ಕವಿಗಳು ತಮ್ಮ ಮೊದಲ ಕವಿತೆಯ ನೆನಪಲ್ಲಿ ಹೇಗೆ ಕಳೆದು ಹೋಗಿದ್ದಾರೆ ನೋಡಿ. ಬಹುಶಃ, ಮೊದಲ ಕವಿತೆ…
ಬೆಂಗಳೂರು : ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್…
ಇಸ್ಲಾಮಾಬಾದ್ : ಪಶ್ಚಿಮ ಏಷ್ಯಾ ಸಂಘರ್ಷ ತಗ್ಗಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ ಮತ್ತು ಇರಾನ್ ನಡುವಿನ 21…