ಮೈಸೂರು: ಸಂಸತ್ತಿನಲ್ಲಿ ಭದ್ರತಾ ಲೋಪ ಪ್ರಕರಣದ ಆರೋಪಿ ಡಿ.ಮನೋರಂಜನ್ ಅವರಿಗೆ ಪಾಸ್ಗೆ ಶಿಫಾರಸು ಮಾಡಿದ್ದ ಸಂಸದ ಪ್ರತಾಪ ಸಿಂಹ ಇದೇ ಮೊದಲ ಬಾರಿಗೆ ಆ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಭದ್ರತಾ ಲೋಪದ ಬಗ್ಗೆ ಯಾವುದೇ ವಿವರಣೆ ಕೊಡುವುದಿಲ್ಲ. ಇದನ್ನು ಬಿಟ್ಟು ಬೇರೇನಿದ್ದರೇ ಕೇಳಿ ಎಂದು ಅವರು ಹೇಳಿದ್ದಾರೆ.
ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ‘ಪ್ರತಾಪ ಸಿಂಹ ದೇಶದ್ರೋಹಿಯೇ ಅಥವಾ ದೇಶಪ್ರೇಮಿಯೇ ಎನ್ನುವುದು ಬೆಟ್ಟದ ಚಾಮುಂಡಿ ತಾಯಿ ಹಾಗೂ ಕೊಡಗಿನ ಕಾವೇರಿ ತಾಯಿಗೆ ಗೊತ್ತು. ನನ್ನ ಲೇಖನಗಳನ್ನು ಓದಿದ ಓದುಗರಿಗೆ ಗೊತ್ತು’ ಎಂದು ಹೇಳಿದರು.
‘ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಜನರು ಮುಂಬರುವ ಚುನಾವಣೆಯಲ್ಲಿ ನಾನು ದೇಶಪ್ರೇಮಿಯೋ ಅಥವಾ ದೇಶದ್ರೋಹಿಯೋ ಎಂದು ತೀರ್ಮಾನ ಮಾಡುತ್ತಾರೆ. ಈ ವಿಚಾರದಲ್ಲಿ ಇಷ್ಟು ಮಾತ್ರವೇ ಹೇಳುತ್ತೇನೆ. ಆ ಬಗ್ಗೆ ಇನ್ನೇನೂ ಕೇಳಬೇಡಿ’ ಎಂದು ಪ್ರತಿಕ್ರಿಯಿಸಿದರು.
ಹಿಜಾಬ್ ನಿಷೇಧದ ಕುರಿತು ಪ್ರತಿಕ್ರಿಯಿಸಿ, ಇದು ಹಿಂದೂ- ಮುಸ್ಲಿಂ ಎಂಬ ವಿಚಾರವಲ್ಲ. ವಸ್ತ್ರ ಸಂಹಿತೆ ಎಂದಿರುತ್ತದೆ. ಅದನ್ನು ಪಾಲಿಸಬೇಕಷ್ಟೆ ಎಂದು ಹೇಳಿದರು.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…