ರಾಜ್ಯ

ಮುಂದಿನ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್‌ ಪಕ್ಷವನ್ನು ಹೊರಗೆ ಕಳಿಸೋದು ಗ್ಯಾರಂಟಿ: ಆರ್.‌ಅಶೋಕ್‌

ಬೆಂಗಳೂರು: ತನ್ನ ಆಂತರಿಕ ಕಚ್ಚಾಟದಿಂದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಹೊರ ಬರದಿದ್ದರೆ, ಮುಂದಿನ ವಿಧಾನಸಭೆ ಚುನಾಣೆಯಲ್ಲಿ ರಾಜ್ಯದ ಜನತೆ ಇವರನ್ನು ಮನೆಗೆ ಶಾಶ್ವತವಾಗಿ ಕಳುಹಿಸುವುದು ಗ್ಯಾರಂಟಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಎಚ್ಚರಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಕೊಳ್ಳಿ ಇಡಲು ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರೊಬ್ಬರೇ ಸಾಕು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಬ್ಬ ವೀಕ್ ಲೀಡರ್ ಎಂದು ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಗೆ ಪತ್ರ ಬರೆಯುತ್ತಾರೆ. ಪ್ರತಿದಿನ ಒಂದಿಲ್ಲೊಂದು ಕಚ್ಚಾಟ ನಡೆಯುತ್ತಲೇ ಇದೆ. ಈ ಪರಿಸ್ಥಿತಿ ಹೀಗೆ ಮುಂದುವರೆದರೆ ಕಾಂಗ್ರೆಸ್ ಮನೆಗೆ ಹೋಗುವುದು ಗ್ಯಾರಂಟಿ ಎಂದು ಕುಹುಕವಾಡಿದರು.

ಇದನ್ನೂ ಓದಿ :-ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಡಾ. ಶಾಮನೂರು ಶಿವಶಂಕಪ್ಪಗೆ ನುಡಿ ನಮನ

ಉರಿಯುವ ಬೆಂಕಿಗೆ ತುಪ್ಪ ಸುರಿಯಬೇಡಪ್ಪ ಎಂದು ಸದನದಲ್ಲಿ ಸಿಎಂ ನನಗೆ ಹೇಳಿದರು. ಈಗ ಅವರ ಶಿಷ್ಯ ರಾಜಣ್ಣ ಕೊಳ್ಳಿ ಇಡಲು ಹೊರಟ್ಟಿದ್ದಾರೆ. ಅಂದರೆ ಅವರು ಡಿಕೆಶಿ ವಿರುದ್ಧ ಇದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ನೀವೇ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಹೇಳಿದ್ದಾರೆ. ಇದರರ್ಥ ಹೈಕಮಾಂಡ್‍ ಕೂಡ ವೀಕ್ ಆಗಿದೆ ಎಂದು ಟೀಕಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರು ಮೇಲಿಂದ ಮೇಲೆ ಡಿನ್ನರ್ ಪಾಲಿಟಿಕ್ಸ್ ಮಾಡುತ್ತಲೇ ಇದ್ದಾರೆ. ಡಿಕೆ ಶಿವಕುಮಾರ್ ಟೆಂಪಲ್ ರನ್ ಮಾಡುತ್ತಿದ್ದಾರೆ. ಅಧಿವೇಶಕ್ಕೂ ಶಿವಕುಮಾರ್ ಬರುತ್ತಿರಲಿಲ್ಲ. ಅಧಿವೇಶನ ನಡೆಯುತ್ತಿರುವಾಗ ಜನಪ್ರತಿನಿಧಿಯಾಗಿ ಕೆಲಸ ಮಾಡಬೇಕಿತ್ತು. ಅದು ಬಿಟ್ಟು ಜನರ ತೆರಿಗೆ ಹಣದಲ್ಲಿ ದೇವಸ್ಥಾನ ಸುತ್ತಿ ಬಂದಿದ್ದಾರೆ. ಸಾಮಾನ್ಯ ಕಾರ್ಯಕರ್ತನಾಗಿ ಇರುತ್ತೇನೆ ಎನ್ನುತ್ತಿದ್ದಾರೆ. ಅದರ ಬದಲು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲಿ ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

6 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

6 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

6 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

6 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

6 hours ago