ಮೈಸೂರು: ತಾವು ಸಿಎಂ ಆಗಿದ್ದಾಗಲೇ ಮಗನನ್ನು ಗೆಲ್ಲಿಸಿಕೊಳ್ಳಲು ಆಗಲಿಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ. ಮಗನ ಸೋಲಿಗೆ ಈ ಮಹಾನುಭಾವರು ಎಷ್ಟು ಕಾರಣ ಎಂಬುದು ಗೊತ್ತಿದೆ. ಅದರ ಆಧಾರದ ಮೇಲೆ ಇವರು ಈಗ ಮಾತನಾಡುತ್ತಿದ್ದಾರೆ. ಆದರೆ ಈ ಎಲ್ಲದಕ್ಕೂ ಜನರು ಉತ್ತರ ಕೊಡುತ್ತಾರೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ನನ್ನನ್ನು ವಲಸಿಗ ಎಂದು ಸಿಎಂ ಹೇಳಿದ್ದಾರೆ. ಆದರೆ, ಕಾಂಗ್ರೆಸ್ನಲ್ಲಿ ಅವರು ಕೂಡಾ ವಲಸಿಗರೇ ಆಗಿದ್ದಾರೆ. ಈಗ ಮೂಲ ಕಾಂಗ್ರೆಸ್ಸಿಗರನ್ನು ಕಸದಬುಟ್ಟಿಗೆ ಹಾಕಿ ಅಧಿಕಾರ ಮಾಡುತ್ತಿದ್ದಾರೆ ಎಂದು ಟಾಂಗ್ ಕೊಟ್ಟರು.
ಮಗನನ್ನು ಗೆಲ್ಲಿಸಿಕೊಳ್ಳಲು ಆಗದ ಎಚ್ಡಿಕೆ ಮಂಡ್ಯದಲ್ಲಿ ಸೋಲುತ್ತಾರೆ ಎಂಬ ಹೇಳಿಕೆಗೆ, ಸಿಎಂ ಸ್ಥಾನದಲ್ಲಿದ್ದುಕೊಂಡು ಅಧಿಕಾರ ನಡೆಸೋದು ಬಿಟ್ಟು ನನ್ನ ಸೋಲಿನ ಬಗ್ಗೆ ಹೇಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವಾಗ ಜ್ಯೋತಿಷಿಯಾದರು ಎಂದು ವ್ಯಂಗ್ಯವಾಡಿದರು.
ನಾನು ಕನ್ನಡಿಗ ಎಲ್ಲಿ ಬೇಕಾದರೂ ನಾನು ಸ್ಪರ್ಧೆ ಮಾಡಬಹುದು. ಈ ಬಾರಿ ಮಂಡ್ಯದಲ್ಲಿ ಹಳೆಯ ಸ್ನೇಹಿತರ ಜೊತೆ ಸ್ಪರ್ಧೆ ಎದುರಿಸಬೇಕು. ಸ್ನೇಹಿತರ ಎದುರು ಸ್ಪರ್ಧೆಗಿಳಿಯುತ್ತಿರುವುದು ನನ್ನ ಹಣೆಬರಹ ಎಂದು ವಿಷಾದ ವ್ಯಕ್ತಪಡಿಸಿದರು.
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…