ರಾಜ್ಯ

ಸಿದ್ದರಾಮಯ್ಯ ಟೀಕೆಗಳಿಗೆಲ್ಲಾ ಜನರು ಉತ್ತರ ಕೊಡುತ್ತಾರೆ: ಎಚ್‌.ಡಿ ಕುಮಾರಸ್ವಾಮಿ

ಮೈಸೂರು: ತಾವು ಸಿಎಂ ಆಗಿದ್ದಾಗಲೇ ಮಗನನ್ನು ಗೆಲ್ಲಿಸಿಕೊಳ್ಳಲು ಆಗಲಿಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ. ಮಗನ ಸೋಲಿಗೆ ಈ ಮಹಾನುಭಾವರು ಎಷ್ಟು ಕಾರಣ ಎಂಬುದು ಗೊತ್ತಿದೆ. ಅದರ ಆಧಾರದ ಮೇಲೆ ಇವರು ಈಗ ಮಾತನಾಡುತ್ತಿದ್ದಾರೆ. ಆದರೆ ಈ ಎಲ್ಲದಕ್ಕೂ ಜನರು ಉತ್ತರ ಕೊಡುತ್ತಾರೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ನನ್ನನ್ನು ವಲಸಿಗ ಎಂದು ಸಿಎಂ ಹೇಳಿದ್ದಾರೆ. ಆದರೆ, ಕಾಂಗ್ರೆಸ್​​ನಲ್ಲಿ ಅವರು ಕೂಡಾ ವಲಸಿಗರೇ ಆಗಿದ್ದಾರೆ. ಈಗ ಮೂಲ ಕಾಂಗ್ರೆಸ್ಸಿಗರನ್ನು ಕಸದಬುಟ್ಟಿಗೆ ಹಾಕಿ ಅಧಿಕಾರ ಮಾಡುತ್ತಿದ್ದಾರೆ ಎಂದು ಟಾಂಗ್ ಕೊಟ್ಟರು.

ಮಗನನ್ನು ಗೆಲ್ಲಿಸಿಕೊಳ್ಳಲು ಆಗದ ಎಚ್‌ಡಿಕೆ ಮಂಡ್ಯದಲ್ಲಿ ಸೋಲುತ್ತಾರೆ ಎಂಬ ಹೇಳಿಕೆಗೆ, ಸಿಎಂ ಸ್ಥಾನದಲ್ಲಿದ್ದುಕೊಂಡು ಅಧಿಕಾರ ನಡೆಸೋದು ಬಿಟ್ಟು ನನ್ನ ಸೋಲಿನ ಬಗ್ಗೆ ಹೇಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವಾಗ ಜ್ಯೋತಿಷಿಯಾದರು ಎಂದು ವ್ಯಂಗ್ಯವಾಡಿದರು.

ನಾನು ಕನ್ನಡಿಗ ಎಲ್ಲಿ ಬೇಕಾದರೂ ನಾನು ಸ್ಪರ್ಧೆ ಮಾಡಬಹುದು. ಈ ಬಾರಿ ಮಂಡ್ಯದಲ್ಲಿ ಹಳೆಯ ಸ್ನೇಹಿತರ ಜೊತೆ ಸ್ಪರ್ಧೆ ಎದುರಿಸಬೇಕು. ಸ್ನೇಹಿತರ ಎದುರು ಸ್ಪರ್ಧೆಗಿಳಿಯುತ್ತಿರುವುದು ನನ್ನ ಹಣೆಬರಹ ಎಂದು ವಿಷಾದ ವ್ಯಕ್ತಪಡಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

31 mins ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

58 mins ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

2 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

3 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

7 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

8 hours ago