ಬೆಂಗಳೂರು: ಅಯೋಧ್ಯೆಯಲ್ಲಿ ಜನವರಿ 22ರಂದು ಶ್ರೀ ರಾಮನ ಪ್ರತಿಷ್ಠಾಪನೆ ಕಾರ್ಯ ನಡೆಯಲಿರುವ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಮುಜರಾಯಿ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಲಿದ್ದಾರೆ. ಜನವರಿ 22ರಂದು ಸೋಮವಾರ ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣಪ್ರತಿಷ್ಠಾಪನೆ ಕಾರ್ಯ ನಡೆಯುವ ಸಂದರ್ಭದಲ್ಲಿ ರಾಜ್ಯದ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಬೇಕು.
ಇದಕ್ಕೆ ಅನುಸರಿಸಬೇಕಿರುವ ಕ್ರಮಗಳ ಕುರಿತು ಸುತ್ತೋಲೆಯಲ್ಲಿ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ. ಶ್ರೀ ರಾಮನ ದೇವಾಲಯ ಮಾತ್ರವಲ್ಲದೆ, ಎಲ್ಲಾ ದೇವಾಲಯಗಳಲ್ಲಿಯೂ ವಿಶೇಷ ಪೂಜೆ ಸಲ್ಲಿಸಲು ಪ್ರತ್ಯೇಕ ಆದೇಶ ಹೊರಡಿಸುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಎಸ್.ಎಸ್.ಭಟ್ಟ ನಾಳೆ ಉದ್ಯೋಗ ಮೇಳ, ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ ಆಯೋಜನೆ ನಂಜನಗೂಡು: ಮಾಜಿ ಸಂಸದರಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ…
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…