ರಾಮನಗರ : ಜಾಲಿವುಡ್ ಸ್ಟುಡಿಯೋಗೆ ರಾತ್ರೋರಾತ್ರಿ ಅನುಮತಿ ನೀಡಿ ಗೇಟ್ ಓಪನ್ ಮಾಡಿದ ಜಿಲ್ಲಾಡಳಿತದ ನಡೆ ಖಂಡಿಸಿ ಕನ್ನಡಪರ ಸಂಘಟನೆಗಳು ಜಾಲಿವುಡ್ ಎದುರು ಪ್ರತಿಭಟನೆ ನಡೆಸಿವೆ.
ಸರ್ಕಾರ ನಿಯಮ ಬಾಹಿರವಾಗಿ ಅನುಮತಿ ನೀಡಿದೆ. ಡಿಸಿಎಂ ಡಿಕೆಶಿ ಜಾಲಿವುಡ್ ಜೊತೆ ಡೀಲ್ ಮಾಡಿಕೊಂಡು ಓಪನ್ ಮಾಡಲು ಅವಕಾಶ ಕೊಟ್ಟಿದ್ದಾರೆ ಎಂದು ಕಿಡಿಕಾರಿದ ಹೋರಾಟಗಾರರು, ಗೇಟ್ ಮೇಲೆ ಹತ್ತಿ ಹೈಡ್ರಾಮ ಸೃಷ್ಟಿಸಿದರು. ಕಾಂಪೌಂಡ್ ಹಾರಿ ಒಳನುಗ್ಗಲು ಯತ್ನಿಸಿದರು.
ಈ ವೇಳೆ ಜಾಲಿವುಡ್ ಸೆಕ್ಯುರಿಟಿ ಹಾಗೂ ಹೋರಾಟಗಾರರ ನಡುವೆ ವಾಗ್ವಾದ ನಡೆದಿದ್ದು, ಕೂಡಲೇ ಜಾಲಿವುಡ್ ಸಂಪೂರ್ಣ ಸ್ಥಗಿತ ಮಾಡುವಂತೆ ಒತ್ತಾಯಿಸಿದರು. ಸ್ಥಳಕ್ಕೆ ಬಿಡದಿ ಪೊಲೀಸರು ಆಗಮಿಸಿ ಪ್ರತಿಭಟನಾಕಾರರನ್ನ ವಶಕ್ಕೆ ಪಡೆದರು. ಕನ್ನಡಪರ ಹೋರಾಟಗಾರರನ್ನು ಬಂಧಿಸಿ ಜೀಪ್ನಲ್ಲಿ ಕರೆದೊಯ್ದು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…
ಪಾಟ್ನಾ : ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದ ಬಿಜೆಪಿ-ಎನ್ಡಿಎ ಸರ್ಕಾರವು ನೂತನ ಸಂಪುಟ ವಿಸ್ತರಿಸಿದ್ದು, 31 ಎನ್ಡಿಎ ನಾಯಕರು ಸಚಿವರಾಗಿ…
ಮೈಸೂರು : 50 ಕೋಟಿ ಖರ್ಚು ಮಾಡಿ ಇಂದಿನ ಚುನಾವಣೆ ಎದುರಿಸುವಷ್ಟು ಶಕ್ತಿ ನನ್ನಲ್ಲಿ ಇಲ್ಲ. ಹೀಗಾಗಿ ಮುಂದೆ ಯಾವ…