ಬೆಂಗಳೂರು: ಮುಡಾ ಹಗರಣ ವಿರೋಧಿಸಿ ಬಿಜೆಪಿ- ಜೆಡಿಎಸ್ ನಾಯಕರು ಬೆಂಗಳೂರಿನಿಂದ ಮೈಸೂರಿಗೆ ನಡೆಸುತ್ತಿರುವ ಪಾದಯಾತ್ರೆಗೆ ಅನುಮತಿ ನೀಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದರು.
ಈ ಕುರಿತ ಮಾಹಿತಿ ನೀಡಿದ ಗೃಹ ಸಚಿವರು, ಶಾಂತಿಯುತವಾಗಿ ಪಾದಯಾತ್ರೆ ಮಾಡುತ್ತೇವೆ ಎಂದಿದ್ದಾರೆ. ಹೀಗಾಗಿ ಅನುಮತಿ ನೀಡಲು ನಿರ್ಧರಿಸಿದ್ದೇವೆ ಎಂದಿದ್ದಾರೆ.
ಈ ಮೊದಲು ಅನುಮತಿ ನೀಡುವುದಿಲ್ಲ ಎಂಬ ನಿಲವು ತೆಗೆದುಕೊಳ್ಳಲಾಗಿತ್ತು. ಗಲಾಟೆಯಾಗಬಹುದೆಂಬ ಆತಂಕ ಇತ್ತು. ಆದರೆ ಎರಡೂ ಪಕ್ಷಗಳ ನಾಯಕರೂ ಕಾನೂನು ಪಾಲನೆ ಮಾಡುತ್ತೇವೆ. ಗಲಾಟೆ ನಡೆಯುವುದಿಲ್ಲ. ಶಾಂತಿಯುತ ಹೋರಾಟ ನಡೆಸುತ್ತೇನೆ ಎಂದಿದ್ದಾರೆ. ಪ್ರತಿಭಟನೆ ಅವರ ಹಕ್ಕು. ಅದಕ್ಕಾಗಿ ಅನುಮತಿ ನೀಡಲಾಗುವುದು ಎಂದರು.
ಇಂದು ಬೆಳಿಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾತನಾಡಿ, ಪಾದಯಾತ್ರೆಗೆ ಅನುಮತಿ ನೀಡುವುದಿಲ್ಲ ಎಂದೇ ಹೇಳಿದ್ದರು.
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…