ರಾಜ್ಯ

ಚಿತ್ತಾಪುರದಲ್ಲಿ ಆರ್ ಎಸ್‍ಎಸ್ ಪಥಸಂಚಲನ ನಡೆಸಲು ಅನುಮತಿ: ಸಚಿವ ಪ್ರಿಯಾಂಕ್‌ ಖರ್ಗೆ ರಿಯಾಕ್ಷನ್‌

ಬೆಂಗಳೂರು: ಚಿತ್ತಾಪುರದಲ್ಲಿ ಆರ್ ಎಸ್‍ಎಸ್ ನಡೆಸಲು ಉದ್ದೇಶಿಸಿದ್ದ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿರುವ ತಹಶೀಲ್ದಾರ್ ಅವರ ಆದೇಶಕ್ಕೆ ಹೈಕೋರ್ಟ್ ಯಾವುದೇ ಆಕ್ಷೇಪ ವ್ಯಕ್ತಪಡಿಸಿಲ್ಲ. ಮುಂದೆ ಅನುಮತಿ ನೀಡುವ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕೆಂದು ಸಲಹೆ ನೀಡಿದೆ. ಇದರಿಂದಾಗಿ ಯಾವುದೇ ಮುಖ ಭಂಗವಾಗಿಲ್ಲ ಎಂದು ಸಚಿವ ಪ್ರಿಯಾಂಕ ಖರ್ಗೆ ಸ್ಪಷ್ಟಪಡಿಸಿದ್ದಾರೆ.

ಇದನ್ನು ಓದಿ: ಚಿತ್ತಾಪುರದಲ್ಲಿ ಆರ್‌ಎಸ್‍ಎಸ್ ಪಥಸಂಚಲನ ನಡೆಸಲು ಅನುಮತಿ: ಸಚಿವ ಪ್ರಿಯಾಂಕ್ ಖರ್ಗೆಗೆ ಮುಖಭಂಗ

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕೋರ್ಟ್‍ನಲ್ಲಿ ನಡೆದ ವಾದ ವಿವಾದದಲ್ಲಿ ನ್ಯಾಯಾಧೀಶರು ಕಾನೂನು ಸುವ್ಯಸ್ಥೆ ರಕ್ಷಣೆ ರಾಜ್ಯ ಸರ್ಕಾರದ ಜವಾಬ್ದಾರಿ. ಹೀಗಾಗಿ ಸ್ಥಳೀಯ ಪರಿಸ್ಥಿತಿ ಮತ್ತು ವಾಸ್ತವಾಂಶಗಳನ್ನು ಆಧರಿಸಿ, ಪಥ ಸಂಚಲನಕ್ಕೆ ಅನುಮತಿ ನೀಡುವ ಅಥವಾ ನೀಡದಿರುವ ನಿರ್ಧಾರ ತೆಗೆದುಕೊಳ್ಳಬೇಕೆಂದು ಹೇಳಿದ್ದಾರೆ ಎಂದರು.

ವಾದ ಪ್ರತಿವಾದದಲ್ಲಿ ಸಾಕಷ್ಟು ಚರ್ಚೆಗಳಾಗಿವೆ. ನ್ಯಾಯಾಧೀಶರ ಸಲಹೆ ಮೇರೆಗೆ ಆರ್ ಎಸ್‍ಎಸ್ ಮತ್ತೊಮ್ಮೆ ಅರ್ಜಿ ಸಲ್ಲಿಸಿದರೆ, ಪರಿಶೀಲಿಸುವ ಭರವಸೆಯನ್ನು ಸರ್ಕಾರ ನೀಡಿದೆ. ಮುಂದೆ ಪಥ ಸಂಚಲನ ನಡೆಸುವುದಾದರೆ ಆರ್‍ಎಸ್‍ಎಸ್ ಅರ್ಜಿ ಸಲ್ಲಿಸಲಿ. ಅದನ್ನು ಜಿಲ್ಲಾಡಳಿತ, ತಾಲ್ಲೂಕು ಆಡಳಿತ, ಕಾನೂನು ಮತ್ತು ಸುವ್ಯವಸ್ಥೆ ಹಿನ್ನೆಲೆಯಲ್ಲಿ ಪರಿಶೀಲಿಸಲಿದೆ ಎಂದು ಸ್ಪಷ್ಟಪಡಿಸಿದರು.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

6 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

6 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

7 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

7 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

8 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

8 hours ago