ಬೆಂಗಳೂರು: ಚಿತ್ತಾಪುರದಲ್ಲಿ ಆರ್ ಎಸ್ಎಸ್ ನಡೆಸಲು ಉದ್ದೇಶಿಸಿದ್ದ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿರುವ ತಹಶೀಲ್ದಾರ್ ಅವರ ಆದೇಶಕ್ಕೆ ಹೈಕೋರ್ಟ್ ಯಾವುದೇ ಆಕ್ಷೇಪ ವ್ಯಕ್ತಪಡಿಸಿಲ್ಲ. ಮುಂದೆ ಅನುಮತಿ ನೀಡುವ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕೆಂದು ಸಲಹೆ ನೀಡಿದೆ. ಇದರಿಂದಾಗಿ ಯಾವುದೇ ಮುಖ ಭಂಗವಾಗಿಲ್ಲ ಎಂದು ಸಚಿವ ಪ್ರಿಯಾಂಕ ಖರ್ಗೆ ಸ್ಪಷ್ಟಪಡಿಸಿದ್ದಾರೆ.
ಇದನ್ನು ಓದಿ: ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನ ನಡೆಸಲು ಅನುಮತಿ: ಸಚಿವ ಪ್ರಿಯಾಂಕ್ ಖರ್ಗೆಗೆ ಮುಖಭಂಗ
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕೋರ್ಟ್ನಲ್ಲಿ ನಡೆದ ವಾದ ವಿವಾದದಲ್ಲಿ ನ್ಯಾಯಾಧೀಶರು ಕಾನೂನು ಸುವ್ಯಸ್ಥೆ ರಕ್ಷಣೆ ರಾಜ್ಯ ಸರ್ಕಾರದ ಜವಾಬ್ದಾರಿ. ಹೀಗಾಗಿ ಸ್ಥಳೀಯ ಪರಿಸ್ಥಿತಿ ಮತ್ತು ವಾಸ್ತವಾಂಶಗಳನ್ನು ಆಧರಿಸಿ, ಪಥ ಸಂಚಲನಕ್ಕೆ ಅನುಮತಿ ನೀಡುವ ಅಥವಾ ನೀಡದಿರುವ ನಿರ್ಧಾರ ತೆಗೆದುಕೊಳ್ಳಬೇಕೆಂದು ಹೇಳಿದ್ದಾರೆ ಎಂದರು.
ವಾದ ಪ್ರತಿವಾದದಲ್ಲಿ ಸಾಕಷ್ಟು ಚರ್ಚೆಗಳಾಗಿವೆ. ನ್ಯಾಯಾಧೀಶರ ಸಲಹೆ ಮೇರೆಗೆ ಆರ್ ಎಸ್ಎಸ್ ಮತ್ತೊಮ್ಮೆ ಅರ್ಜಿ ಸಲ್ಲಿಸಿದರೆ, ಪರಿಶೀಲಿಸುವ ಭರವಸೆಯನ್ನು ಸರ್ಕಾರ ನೀಡಿದೆ. ಮುಂದೆ ಪಥ ಸಂಚಲನ ನಡೆಸುವುದಾದರೆ ಆರ್ಎಸ್ಎಸ್ ಅರ್ಜಿ ಸಲ್ಲಿಸಲಿ. ಅದನ್ನು ಜಿಲ್ಲಾಡಳಿತ, ತಾಲ್ಲೂಕು ಆಡಳಿತ, ಕಾನೂನು ಮತ್ತು ಸುವ್ಯವಸ್ಥೆ ಹಿನ್ನೆಲೆಯಲ್ಲಿ ಪರಿಶೀಲಿಸಲಿದೆ ಎಂದು ಸ್ಪಷ್ಟಪಡಿಸಿದರು.
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…