ರಾಜ್ಯ

ಚಿತ್ತಾಪುರದಲ್ಲಿ ಆರ್‌ಎಸ್‍ಎಸ್ ಪಥಸಂಚಲನ ನಡೆಸಲು ಅನುಮತಿ: ಸಚಿವ ಪ್ರಿಯಾಂಕ್ ಖರ್ಗೆಗೆ ಮುಖಭಂಗ

ಬೆಂಗಳೂರು: ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನ.2ರಂದು ಆರ್‌ಎಸ್‍ಎಸ್ ಪಥಸಂಚಲನ ನಡೆಸಲು ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಭಾರೀ ಮುಖಭಂಗವಾಗಿದೆ.

ಆರ್‌ಎಸ್‍ಎಸ್ ಗೆ  ಪಥಸಂಚಲನ ನಡೆಸಲು ಅನುಮತಿ ನೀಡದ ಚಿತ್ತಾಪುರ ತಹಸೀಲ್ದಾರ್ ನಾಗಯ್ಯ ಅವರ ಆದೇಶವನ್ನು ಪ್ರಶ್ನಿಸಿ ಆರ್‌ಎಸ್‍ಎಸ್ ಪರವಾಗಿ ಅಶೋಕ್ ಪಾಟೀಲ್ ಎಂಬುವವರು ವಿಶೇಷ ಮೇಲ್ಮನವಿ ಸಲ್ಲಿಸಿದ್ದರು.

ಇದನ್ನು ಓದಿ: ನಾವು ಆರ್‌ಎಸ್‌ಎಸ್‌ನ್ನು ಟಾರ್ಗೆಟ್‌ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

ಎರಡು ಕಡೆಯ ವಾದ-ಪ್ರತಿವಾದ ಆಲಿಸಿದ ನಂತರ ನ.2ಕ್ಕೆ ಪಥಸಂಚಲನ ನಡೆಸಲು ಅನುಮತಿ ನೀಡಿದ ಕಲಬುರಗಿ ಸಂಚಾರಿ ಪೀಠ ಹೊಸದಾಗಿ ಅರ್ಜಿ ಸಲ್ಲಿಸಬೇಕು. ಸರ್ಕಾರ ಇದನ್ನು ಪರಿಗಣಿಸಬೇಕೆಂದು ಸೂಚಿಸಿತು.

ಅರ್ಜಿದಾರರ ಪರವಾಗಿ ಹಿರಿಯ ವಕೀಲ ಅರುಣ್ ಶ್ಯಾಮ್ ಹಾಗೂ ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು.

ಕಲಬುರಗಿ ಸಂಚಾರಿ ಪೀಠದ ನ್ಯಾಯಾಧೀಶ ಎ.ಜಿ.ಎಸ್.ಕಮಲ್ ಅವರು ನ.2ರಂದು ಆರ್‍ಎಸ್‍ಎಸ್ ಪಥಸಂಚಲನಕ್ಕೆ ಅನುಮತಿ ನೀಡಿದರಾದರೂ ಭಾನುವಾರವೇ ಪಥಸಂಚಲನ ನಡೆಸಬೇಕೆಂಬ ಆರ್ ಎಸ್‍ಎಸ್ ಮನವಿಗೆ ಸಮ್ಮತಿಸಲಿಲ್ಲ. ಮುಂದಿನ ಅರ್ಜಿ ವಿಚಾರಣೆಯನ್ನು ಅ.24ಕ್ಕೆ ಮುಂದೂಡಿತು.

ಆಂದೋಲನ ಡೆಸ್ಕ್

Recent Posts

ಕಳೆದ ಚುನಾವಣೆ : ಇಬ್ಬರು ಪರಿಣಿತರ ವಿಶ್ಲೇಷಣೆ

ರಾಜಕಾರಣಿಗಳು ಕೊನೆಗೂ ಕೇಳಿಕೊಳ್ಳಬೇಕಿರುವುದು ನೀವು ಯಾರೋ ಒಬ್ಬರ ಬದುಕು ಚಂದವಾಗಲು ಕಾರಣವಾದಿರಾ ಎಂಬ ಪ್ರಶ್ನೆ ಮಾತ್ರವೇ. ಅದೊಂದೇ ಸತ್ಯ. ಉಳಿದದ್ದೆಲ್ಲ…

22 mins ago

ತಾಯಂದಿರ ದಿನ ವಿಶೇಷ | ನನ್ನ ಕರುಳ ಕುಡಿ ನನ್ನದೇ ಆಯ್ಕೆ

ಸಂಗಾತಿಯ ಹಂಗಿಲ್ಲದೆ ಅಮ್ಮನಾದ ಖ್ಯಾತ ಚಿತ್ರತಾರೆ ಭಾವನಾ ರಾಮಣ್ಣ ಜೊತೆ ಮಾತುಕತೆ      ನಿಮ್ಮ ವೃತ್ತಿಪರ ಒತ್ತಡಗಳ ನಡುವೆ…

1 hour ago

ಮಡಿಕೇರಿ | ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ; ಸಾರ್ವಜನಿಕೆ ಕೆಲಸ ವಿಳಂಬ

ಮಡಿಕೇರಿ : ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿ ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ಕಾಡುತ್ತಿದೆ. ನಗರಸಭೆಯಲ್ಲಿ ಖಾಯಂ ಸಿಬ್ಬಂದಿ ಸಂಖ್ಯೆ ಕಡಿಮೆಯಿದ್ದು,…

1 hour ago

ಎಚ್.ಡಿ.ಕೋಟೆ | ಉತ್ತಮ ಮಳೆ ; ಕೃಷಿ ಚಟುವಟಿಕೆ ಚುರುಕುಗೊಳಿಸಿದ ರೈತರು

ಎಚ್.ಡಿ.ಕೋಟೆ: ಅರೆ ಮಲೆನಾಡು ಎಂದೇ ಹೆಸರಾದ ತಾಲ್ಲೂಕಿನಲ್ಲಿ ತಡವಾಗಿ ಮಳೆ ಪ್ರಾರಂಭವಾದರೂ ಕಳೆದ ಒಂದು ವಾರದಿಂದ ಬೀಳುತ್ತಿರುವ ಉತ್ತಮ ಮಳೆಯಿಂದ…

1 hour ago

ಚಾ.ನಗರ ವಿ.ವಿ | ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪಿಎಚ್‌.ಡಿಗೆ ಅವಕಾಶ

ಚಾಮರಾಜನಗರ : ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಪಿಎಚ್. ಡಿ. ಸಂಶೋಧನೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿ…

2 hours ago

ಪಿಯುಸಿ : ಸರ್ಕಾರಿ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಳದ ನಿರೀಕ್ಷೆ

ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್‌ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ…

4 hours ago