ಬೆಂಗಳೂರು: ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನ.2ರಂದು ಆರ್ಎಸ್ಎಸ್ ಪಥಸಂಚಲನ ನಡೆಸಲು ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಭಾರೀ ಮುಖಭಂಗವಾಗಿದೆ.
ಆರ್ಎಸ್ಎಸ್ ಗೆ ಪಥಸಂಚಲನ ನಡೆಸಲು ಅನುಮತಿ ನೀಡದ ಚಿತ್ತಾಪುರ ತಹಸೀಲ್ದಾರ್ ನಾಗಯ್ಯ ಅವರ ಆದೇಶವನ್ನು ಪ್ರಶ್ನಿಸಿ ಆರ್ಎಸ್ಎಸ್ ಪರವಾಗಿ ಅಶೋಕ್ ಪಾಟೀಲ್ ಎಂಬುವವರು ವಿಶೇಷ ಮೇಲ್ಮನವಿ ಸಲ್ಲಿಸಿದ್ದರು.
ಇದನ್ನು ಓದಿ: ನಾವು ಆರ್ಎಸ್ಎಸ್ನ್ನು ಟಾರ್ಗೆಟ್ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ
ಎರಡು ಕಡೆಯ ವಾದ-ಪ್ರತಿವಾದ ಆಲಿಸಿದ ನಂತರ ನ.2ಕ್ಕೆ ಪಥಸಂಚಲನ ನಡೆಸಲು ಅನುಮತಿ ನೀಡಿದ ಕಲಬುರಗಿ ಸಂಚಾರಿ ಪೀಠ ಹೊಸದಾಗಿ ಅರ್ಜಿ ಸಲ್ಲಿಸಬೇಕು. ಸರ್ಕಾರ ಇದನ್ನು ಪರಿಗಣಿಸಬೇಕೆಂದು ಸೂಚಿಸಿತು.
ಅರ್ಜಿದಾರರ ಪರವಾಗಿ ಹಿರಿಯ ವಕೀಲ ಅರುಣ್ ಶ್ಯಾಮ್ ಹಾಗೂ ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು.
ಕಲಬುರಗಿ ಸಂಚಾರಿ ಪೀಠದ ನ್ಯಾಯಾಧೀಶ ಎ.ಜಿ.ಎಸ್.ಕಮಲ್ ಅವರು ನ.2ರಂದು ಆರ್ಎಸ್ಎಸ್ ಪಥಸಂಚಲನಕ್ಕೆ ಅನುಮತಿ ನೀಡಿದರಾದರೂ ಭಾನುವಾರವೇ ಪಥಸಂಚಲನ ನಡೆಸಬೇಕೆಂಬ ಆರ್ ಎಸ್ಎಸ್ ಮನವಿಗೆ ಸಮ್ಮತಿಸಲಿಲ್ಲ. ಮುಂದಿನ ಅರ್ಜಿ ವಿಚಾರಣೆಯನ್ನು ಅ.24ಕ್ಕೆ ಮುಂದೂಡಿತು.
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…