ರಾಜ್ಯ

ಬೆಂಗಳೂರಿನಲ್ಲಿ ಸಾಕು ಪ್ರಾಣಿಗಳ ಮಾರಣಹೋಮ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ ಘಟನೆ ನಡೆದಿದೆ.

ಬೆಂಗಳೂರಿನ ಬಾಣಸವಾಡಿಯ ಪಂಚಮುಖಿ ದೇವಾಲಯದ ಬಳಿ ಈ ಘಟನೆ ನಡೆದಿದ್ದು, ಸಾಕು ಬೆಕ್ಕು, ನಾಯಿಗಳಿಗೆ ಹಿಂಸೆ ನೀಡಿ ಮರಕ್ಕೆ ಕಟ್ಟಿ ಕೊಂದು ವಿಕೃತಿ ಮೆರೆದಿದ್ದಾರೆ. ವಿಕೃತಿ ಮೆರೆದಿರುವ ಕೀಚಕರ ವಿರುದ್ಧ ಪ್ರಾಣಿಪ್ರಿಯರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನು ಓದಿ: ನಾಯಕತ್ವ ಬಗ್ಗೆ ಯತೀಂದ್ರ ಹೇಳಿಕೆ: ಇದಕ್ಕೆ ಸಿಎಂ ಉತ್ತರಿಸಲಿ ಎಂದ ಡಿ.ಕೆ.ಶಿವಕುಮಾರ್‌

ಕಳೆದ ನಾಲ್ಕು ದಿನಗಳ ಹಿಂದೆ ಹಲವು ಬೆಕ್ಕಿನ ಮರಿಗಳನ್ನು ತುಂಡು ತುಂಡಾಗಿ ಪೀಸ್‌ ಮಾಡಿ ಎಸೆದು ಹೋಗಿದ್ದರು. ಈಗ ಮತ್ತೆ ನಾಯಿ ಹಾಗೂ ಬೆಕ್ಕಿನ ಮರಿಗಳನ್ನು ಇಲ್ಲಿ ತಂದು ಬರ್ಬರವಾಗಿ ಕೊಂದಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಮಾಹಿತಿ ಪ್ರಕಾರ ಈ ಜಾಗದಲ್ಲಿ ಪ್ರಾಣಿಗಳ ಮಾರಣಹೋಮ ಹೆಚ್ಚಾಗಿ ನಡೆಯುತ್ತದೆ. ಸತ್ತ ಪ್ರಾಣಿಗಳ ದುರ್ವಾಸನೆ ಬರುತ್ತದೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು. ಇಂತಹ ಕೃತ್ಯ ಎಸಗುವ ಪಾಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

4 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

4 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

5 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

6 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

6 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

6 hours ago