ರಾಜ್ಯ

ಬೆಂಗಳೂರಿನಲ್ಲಿ ಸಾಕು ಪ್ರಾಣಿಗಳ ಮಾರಣಹೋಮ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ ಘಟನೆ ನಡೆದಿದೆ.

ಬೆಂಗಳೂರಿನ ಬಾಣಸವಾಡಿಯ ಪಂಚಮುಖಿ ದೇವಾಲಯದ ಬಳಿ ಈ ಘಟನೆ ನಡೆದಿದ್ದು, ಸಾಕು ಬೆಕ್ಕು, ನಾಯಿಗಳಿಗೆ ಹಿಂಸೆ ನೀಡಿ ಮರಕ್ಕೆ ಕಟ್ಟಿ ಕೊಂದು ವಿಕೃತಿ ಮೆರೆದಿದ್ದಾರೆ. ವಿಕೃತಿ ಮೆರೆದಿರುವ ಕೀಚಕರ ವಿರುದ್ಧ ಪ್ರಾಣಿಪ್ರಿಯರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನು ಓದಿ: ನಾಯಕತ್ವ ಬಗ್ಗೆ ಯತೀಂದ್ರ ಹೇಳಿಕೆ: ಇದಕ್ಕೆ ಸಿಎಂ ಉತ್ತರಿಸಲಿ ಎಂದ ಡಿ.ಕೆ.ಶಿವಕುಮಾರ್‌

ಕಳೆದ ನಾಲ್ಕು ದಿನಗಳ ಹಿಂದೆ ಹಲವು ಬೆಕ್ಕಿನ ಮರಿಗಳನ್ನು ತುಂಡು ತುಂಡಾಗಿ ಪೀಸ್‌ ಮಾಡಿ ಎಸೆದು ಹೋಗಿದ್ದರು. ಈಗ ಮತ್ತೆ ನಾಯಿ ಹಾಗೂ ಬೆಕ್ಕಿನ ಮರಿಗಳನ್ನು ಇಲ್ಲಿ ತಂದು ಬರ್ಬರವಾಗಿ ಕೊಂದಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಮಾಹಿತಿ ಪ್ರಕಾರ ಈ ಜಾಗದಲ್ಲಿ ಪ್ರಾಣಿಗಳ ಮಾರಣಹೋಮ ಹೆಚ್ಚಾಗಿ ನಡೆಯುತ್ತದೆ. ಸತ್ತ ಪ್ರಾಣಿಗಳ ದುರ್ವಾಸನೆ ಬರುತ್ತದೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು. ಇಂತಹ ಕೃತ್ಯ ಎಸಗುವ ಪಾಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

3 hours ago

ಓದುಗರ ಪತ್ರ: ಮದ್ದು ಅರೆಯಲಿ ಆಳುವವರು!

ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…

3 hours ago

ಓದುಗರ ಪತ್ರ: ಪಾದಚಾರಿ ಮಾರ್ಗಕ್ಕೂ ಅಡ್ಡಗಾಲು

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…

3 hours ago

ಓದುಗರ ಪತ್ರ: ಈ ಶೌಚಾಲಯ ಪ್ರಾರಂಭಕ್ಕೆ ಮುಹೂರ್ತ ಬಂದಿಲ್ಲವೇ?

ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…

3 hours ago

ಓದುಗರ ಪತ್ರ: 365 ದಿನಗಳೂ ಸಾರ್ವಜನಿಕ ಗ್ರಂಥಾಲಯಗಳ ಸೇವೆ ಲಭ್ಯವಿರಲಿ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳು…

3 hours ago

ಯುವಜನರ ಕೈಯಲ್ಲಿ ಮೊಬೈಲ್ ಇದೆ; ದಿಕ್ಕು ಇದೆಯೇ?

ಟಿ.ಕೆ.ಹರೀಶ್ ತಕ್ಷಣದ ಯಶಸ್ಸಿನ ಸಂಸ್ಕೃತಿಯಿಂದ ಅಪಾಯಕಾರಿ ; ಯುವಜನರಿಗೆ ಮನವರಿಕೆ ಅಗತ್ಯ ಇಂದು ಒಂದು ಮಗು ಹುಟ್ಟಿದಾಗ ಅದರ ಸುತ್ತಲೂ…

3 hours ago