ಬೆಂಗಳೂರು : ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ್ದು, ಇದನ್ನು ಪ್ರಶ್ನಿಸಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಪಿಐಎಲ್ ಅನ್ನು ಹೈಕೋರ್ಟ್ ವಜಾ ಮಾಡಿದೆ. ಈ ಮೂಲಕ ಪ್ರತಾಪ್ ಸಿಂಹ ಹಾಗೂ ಇತರರಿಗೆ ಹಿನ್ನಡೆಯಾದಂತಾಗಿದೆ. ಇನ್ನು ಕೋರ್ಟ್ ತೀರ್ಪಿನ ಬಗ್ಗೆ ಸೋಮವಾರ ಪ್ರತಿಕ್ರಿಯಿಸಿರುವ ಪ್ರತಾಪ್ ಸಿಂಹ, ಹಿಂದೂ ವಿಚಾರದಲ್ಲಿ ನ್ಯಾಯ ಸಿಗಬಹದೂ ಎಂದು ನಾನು ಕೋರ್ಟ್ ಗೆ ಹೋಗಿದ್ದೆ. ಆದ್ರೆ, ಸೆಕ್ಯುಲರ್ ಹೆಸರಿನಲ್ಲಿ ಸಣ್ಣ ಪರದೆಯೊಳಗೆ ನನ್ನ ಅರ್ಜಿ ವಜಾ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಉಚ್ಚ ನ್ಯಾಯಾಲಯದ ಬಗ್ಗೆ ಏನನ್ನು ಹೇಳಲ್ಲ. 2023ರ ಜನಸಾಹಿತ್ಯದ ಸಮ್ಮೇಳನದಲ್ಲಿ ಭುವನೇಶ್ವರಿ, ಅರಿಶಿನ ಕುಂಕುಮದ ಬಗ್ಗೆ ತಗಾದೆ ಎತ್ತಿರುವುದನ್ನು ತೋರಿಸಿದ್ವಿ. ಆದರೂ ಸೆಕ್ಯಲರಿಸಮ್ ಹೆಸರಿನಲ್ಲಿ ನಮ್ಮ ವಾದಕ್ಕೆ ಮನ್ನಣೆ ಕೊಟ್ಟಿಲ್ಲ. ಅಭಿಪ್ರಾಯ ಬೇಧ ವ್ಯಕ್ತಪಡಿಸುವ ಹೆಸರಿನಲ್ಲಿ ಅರ್ಜಿ ವಜಾ ಮಾಡಿದ್ದಾರೆ ಎಂದು ಹೇಳಿದರು.
ದಲಿತ ವ್ಯಕ್ತಿಗೆ ಸೇರಿದ ಭೂಮಿಯನ್ನು ಸಿಎಂ ಪತ್ನಿಯ ಸಹೋದರ ಸ್ವಾಧೀನ ಮಾಡಿದ್ರು. ಮೂಡದಲ್ಲಿ ಅರ್ಜಿ ಹಾಕಿ ಬದಲಿ ನಿವೇಷನವನ್ನು ಬೆಲೆ ಬಾಳುವ ಪ್ರದೇಶದಲ್ಲಿ ಪಡೆದಿದ್ದರು. ಪಾಲಿಕೆಗೆ ಸುಳ್ಳು ಹೇಳಿ 14 ಸೈಟು ಹೊಡೆದಿದ್ದು ದಾಖಲೆ ಸಮೇತ ಇತ್ತು. ಆದರೂ 14 ಸೈಟುಗಳ ದರೋಡೆ ಪ್ರಕರಣವನ್ನು ಹೈಕೋರ್ಟ್ ವಜಾ ಮಾಡಿತ್ತು. ಧರ್ಮಸ್ಥಳ ಹೆಗ್ಗಡೆ ಅವರ ವಿರುದ್ಧ ಅಪಪ್ರಚಾರ ಮಾಡಿದ ಸಮೀರ್ ಗೆ ಕೋರ್ಟ್ ನಿರೀಕ್ಷಣಾ ಜಾಮೀನು ಕೊಡುತ್ತೆ. ಮಹೇಶ್ ತಿಮ್ಮರೋಡಿ ವಿರುದ್ಧ ಪ್ರಕರಣ ದಾಖಲಾಗಲ್ಲ. ರಾಷ್ಟ್ರೀಯ ಲಾಂಚನವನ್ನು ಕುಟ್ಟಿ ತೆಗೆಯುವುದನ್ನು ಅಭಿವ್ಯಕ್ತಿ ಸ್ವಾತಂತ್ರ್ಯ ಎನ್ನುತ್ತೀರಾ? ಎಂದು ಪ್ರಶ್ನಿಸಿದರು.
ಬಾನು ಮುಷ್ತಾಕ್ ಅವರನ್ನು ಮುಸ್ಲಿಂ ಎನ್ನುವ ಕಾರಣಕ್ಕೆ ವಿರೋಧಿಸಲಿಲ್ಲ. ಭುವನೇಶ್ವರಿಗೆ ಬಗ್ಗೆ ಅಪಸ್ವರ ಇದ್ದ ಕಾರಣಕ್ಕೆ ವಿರೋಧಿಸಿದ್ದು. ಅದೇ ಕಾರಣಕ್ಕೆ ನಾನು ಕೋರ್ಟ್ ಗೆ ಹೋಗಿದ್ದು . ಸೆಕ್ಯಲರಿಂ ಚೌಕಟ್ಟಿನಲ್ಲಿ ತಂದು ಕೋರ್ಟ್ ಅರ್ಜಿ ವಜಾ ಮಾಡಿದೆ. ಸಂವಿಧಾನದ ಪುಸ್ತಕದಲ್ಲೂ ಪುರಾಣ ಕಥೆಗಳು ಇವೆ. ಅದನ್ನು ಮುಂದೆ ಪ್ರಶ್ನೆ ಮಾಡಿದಾಗ ಏನ್ ಹೇಳುತ್ತೀರಿ. ನ್ಯಾಯಾಂಗದ ವಿಶ್ವಾಸರ್ಹತೆ ಪ್ರಶ್ನೆ ಮಾಡುತ್ತಿಲ್ಲ. ನಾನು ಕೂಡ ಅಭಿವ್ಯಕ್ತಿ ಸ್ವಾತಂತ್ರ್ಯದ ಅಡಿಯಲ್ಲಿಯೇ ಮಾತನಾಡುತ್ತಿದ್ದೇನೆ ಎಂದರು.
===
ಲಖನೌ: ಉತ್ತರ ಪ್ರದೇಶದ ಅಲಿಗಂಜ್ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…
ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…