ರಾಜ್ಯ

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾ: ಸುಪ್ರೀಂ ತೀರ್ಪು ಸ್ವಾಗತಿಸಿದ ಸಿದ್ದರಾಮಯ್ಯ

ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ರಾಜ್ಯ ಸರ್ಕಾರದ ನಿಲುವಿನ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿರುವ ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಮೈಸೂರು ದಸರಾವನ್ನು ಧಾರ್ಮಿಕ ನೆಲೆಗಟ್ಟಿಗೆ ಸೀಮಿತವಾಗಿಸಲು ಸಾಧ್ಯವಿಲ್ಲ. ಜಾತಿ, ಧರ್ಮಗಳನ್ನು ಮೀರಿ ನಾಡಿನ ಸಮಸ್ತ ಜನರು ಕೂಡಿ ಸಂಭ್ರಮಿಸುವ ಹಬ್ಬವೆಂದು ನಾವು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೆವು, ಆದರೂ ಇದರ ವಿರುದ್ಧ ವ್ಯವಸ್ಥಿತ ಅಪಪ್ರಚಾರ ನಡೆಸಿ, ಸಮಾಜವನ್ನು ಒಡೆಯುವ ಪ್ರಯತ್ನ ಮಾಡಲಾಯಿತು. ಈಗ ಸುಪ್ರೀಂ ತೀರ್ಪಿನಿಂದ ನಮ್ಮ ಸರ್ಕಾರದ ನಿಲುವಿಗೆ ಮನ್ನಣೆ ದೊರೆತಿದೆ ಎಂದು ಭಾವಿಸುತ್ತೇನೆ.

ಜಾತಿ, ಧರ್ಮಗಳ ವೈಷಮ್ಯ ಬಿತ್ತುವ ವಿಚ್ಛಿದ್ರಕಾರಿ ಮನಸುಗಳಿಗೆ ಇನ್ನಾದರೂ ತಾಯಿ ಚಾಮುಂಡೇಶ್ವರಿ ಸದ್ಬುದ್ದಿ ನೀಡಲಿ ಎಂದು ಆಶಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಉತ್ತರ ಪ್ರದೇಶದಲ್ಲಿ ಭಾರತೀಯ ವಾಯುಪಡೆಯ ವಿಮಾನ ಪತನ: ಇಬ್ಬರು ಪೈಲಟ್‌ಗಳು ಬಚಾವ್‌

ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್‌ರಾಜ್‌ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್‌ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್‌ಗಳನ್ನು…

41 mins ago

ನೈಸರ್ಗಿಕ ಕೃಷಿ ಪದ್ಧತಿ ಎಲ್ಲರ ಪಾಲಿಗೆ ಜೀವನೋಪಾಯವಾಗಲಿ: ಡಾ. ಶರಣ ಪ್ರಕಾಶ್‌ ಪಾಟೀಲ್

ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…

51 mins ago

ಚಾಮುಂಡಿಬೆಟ್ಟದ ಪಾರಂಪರಿಕತೆಗೆ ಧಕ್ಕೆಯಾಗದಂತೆ ಅಭಿವೃದ್ಧಿ: ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು: ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟದ ಪಾರಂಪರಿಕತೆಗೆ ಯಾವುದೇ ಧಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ…

1 hour ago

ಅಶ್ಲೀಲ ಮೆಸೇಜ್‌ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ನೋಟಿಸ್‌

ಬೆಂಗಳೂರು: ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್‌, ಕಮೆಂಟ್‌ ಮಾಡಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ಪೊಲೀಸರು…

1 hour ago

ಹಾಸನ| ಕುಡಿದ ಮತ್ತಿನಲ್ಲಿ ಸ್ನೇಹಿತನ ಕೊಲೆ

ಹಾಸನ: ಕುಡಿದ ಮತ್ತಿನಲ್ಲಿ ಗೆಳೆಯರು ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕಬ್ಬೂರು ಗ್ರಾಮದಲ್ಲಿ ನಡೆದಿದೆ. ಗಣೇಶ್‌…

2 hours ago

ಚಾಮುಂಡಿಬೆಟ್ಟ ಉಳಿಸಿ: ಅಭಿವೃದ್ಧಿ ಕಾಮಗಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟವನ್ನು ಉಳಿಸುವಂತೆ ಒತ್ತಾಯಿಸಿ ಸಾರ್ವಜನಿಕರು ಹಾಗೂ ಪರಿಸರವಾದಿಗಳು ಪ್ರತಿಭಟನೆ ನಡೆಸಿದರು. ಚಾಮುಂಡೇಶ್ವರಿ ದೇವಸ್ಥಾನದ…

3 hours ago