ಬೆಂಗಳೂರು: ಫೋನ್ ಕದ್ದಾಲಿಕೆಯನ್ನು ರಾಜ್ಯ ಸರ್ಕಾರವೇ ಮಾಡುತ್ತಿದೆ. ಇದು ಸುಳ್ಳು ಎಂದಾದರೆ ಕೂಡಲೇ ಈ ಪ್ರಕರಣವನ್ನು ಸರ್ಕಾರ ಸಿಬಿಐಗೆ ವಹಿಸಿ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಾಣಿಸಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು.
ಬೆಂಗಳೂರು ಪದವೀಧರ ಕ್ಷೇತ್ರ ಹಾಗೂ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಕುರಿತು ಬಿಜೆಪಿ ಪ್ರಮುಖರೊಂದಿಗೆ ಸಭೆಯಲ್ಲಿ ಪಾಲ್ಗೊಂಡರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಫೋನ್ ಟ್ಯಾಪಿಂಗ್ ಬಗ್ಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಅವರಿಗೆ ಪೊಲೀಸ್ ಅಧಿಕಾರಿಗಳು ಸಂಪರ್ಕದಲ್ಲಿದ್ದು, ಅವರಿಂದ ತಿಳಿದುಕೊಂಡು ಹೇಳಿರಬಹುದು.
ಫೋನ್ ಟ್ಯಾಪ್ ಮಾಡುವುದು ಅಕ್ರಮವಾಗಿದ್ದು, ಹಣ ಕೊಟ್ಟರೆ ಚೀನಾದಿಂದ ಉಪಕರಣ ಸಿಗುತ್ತದೆ. ರಾಜ್ಯಕ್ಕೆ ಇಂತಹ ಉಪಕರಣ ಎಷ್ಟು ಬಂದಿದೆ, ಎಲ್ಲೆಲ್ಲಿದೆ ಎಂದು ಪತ್ತೆ ಮಾಡಬೇಕು. ವಿರೋಧ ಪಕ್ಷಗಳ ನಾಯಕರ ಫೋನ್ ಟ್ಯಾಪ್ ಮಾಡಲಾಗುತ್ತಿದೆ ಎಂದು ನನಗೂ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ಬಗ್ಗೆ ಸರ್ಕಾರ ತನಿಖೆ ಮಾಡಿಸಲಿ ಎಂದು ಆಗ್ರಹಿಸಿದರು.
ಫೋನ್ ಟ್ಯಾಪ್ ಮಾಡುವವರನ್ನು ಜೈಲಿಗೆ ಕಳುಹಿಸಬೇಕು. ಹಿಂದೆಯೂ ಈ ರೀತಿ ಮಾಡಿ ಪೊಲೀಸ್ ಅಧಿಕಾರಿಗಳು ತನಿಖೆಗೆ ಒಳಗಾಗಿದ್ದರು. ಸರ್ಕಾರ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ಸರ್ಕಾರ ಇದನ್ನು ಮಾಡಿಲ್ಲವೆಂದು ಎದೆ ಮುಟ್ಟಿ ಹೇಳುವುದಾದರೆ ತನಿಖೆಗೆ ನೀಡಲಿ. ಇದನ್ನು ತಾರ್ಕಿಕ ಅಂತ್ಯಕ್ಕೆ ಮುಟ್ಟಿಸಲಿ ಎಂದು ಒತ್ತಾಯಿಸಿದರು.
ಬೆಂಗಳೂರು ಪದವೀಧರ ಕ್ಷೇತ್ರ ಹಾಗೂ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಕುರಿತು ಚರ್ಚಿಸಲಾಗಿದೆ. ಮತದಾರರನ್ನು ಹುಡುಕಿ ಅವರ ಮನ ಒಲಿಸುವ ಕೆಲಸ ಮಾಡಬೇಕೆಂದು ಹಾಗೂ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಸಭೆ ನಡೆಸಿ, ಪ್ರತಿ ಬೂತ್ಗಳಲ್ಲಿ ಕೆಲಸ ಮಾಡಲು ಸೂಚಿಸಲಾಗಿದೆ. ಟಿಕೆಟ್ ಕುರಿತು ಕೇಂದ್ರದ ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದರು.
ಕೊಪ್ಪಳ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಆಟೋ ಎಲ್ಪಿಜಿ ಗ್ಯಾಸ್ ಸಮಸ್ಯೆ ಉಂಟಾಗಿದ್ದು, ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದೇ ನಮ್ಮ ಧರ್ಮ…
ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಭಾರತದ ವಿಶ್ವಕಪ್ ವಿಜೇತ ನಾಯಕರುಗಳಾದ ಮಹೇಂದ್ರ ಸಿಂಗ್ ಧೋನಿ ಹಾಗೂ ಕಪಿಲ್…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 22 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ…
ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನಲ್ಲಿ ಹುಲಿಯೊಂದು ನೀರಿನಲ್ಲಿ ಮುಳುಗಿ ವಿಶ್ರಮಿಸುತ್ತಿರುವ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ. ರಾಜ್ಯದಲ್ಲಿ ದಿನದಿಂದ…
ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನ ಕಾಡಂಚಿನ ಪ್ರದೇಶದಲ್ಲಿ ವನ್ಯಜಜೀವಿಗಳನ್ನು ಬೇಟೆಯಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಕೂತಿ ಗ್ರಾಮದ…
ಮಡಿಕೇರಿಗೆ ಬಂದಿದ್ದ ಕೇರಳ ಮೂಲದ ಟ್ರೆಕ್ಕರ್ ಮಡಿಕೇರಿ: ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಚಾರಣಕ್ಕೆ ತೆರಳಿದ್ದಾಗ ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ…