ಬೆಂಗಳೂರು: ಫೋನ್ ಕದ್ದಾಲಿಕೆಯನ್ನು ರಾಜ್ಯ ಸರ್ಕಾರವೇ ಮಾಡುತ್ತಿದೆ. ಇದು ಸುಳ್ಳು ಎಂದಾದರೆ ಕೂಡಲೇ ಈ ಪ್ರಕರಣವನ್ನು ಸರ್ಕಾರ ಸಿಬಿಐಗೆ ವಹಿಸಿ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಾಣಿಸಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು.
ಬೆಂಗಳೂರು ಪದವೀಧರ ಕ್ಷೇತ್ರ ಹಾಗೂ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಕುರಿತು ಬಿಜೆಪಿ ಪ್ರಮುಖರೊಂದಿಗೆ ಸಭೆಯಲ್ಲಿ ಪಾಲ್ಗೊಂಡರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಫೋನ್ ಟ್ಯಾಪಿಂಗ್ ಬಗ್ಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಅವರಿಗೆ ಪೊಲೀಸ್ ಅಧಿಕಾರಿಗಳು ಸಂಪರ್ಕದಲ್ಲಿದ್ದು, ಅವರಿಂದ ತಿಳಿದುಕೊಂಡು ಹೇಳಿರಬಹುದು.
ಫೋನ್ ಟ್ಯಾಪ್ ಮಾಡುವುದು ಅಕ್ರಮವಾಗಿದ್ದು, ಹಣ ಕೊಟ್ಟರೆ ಚೀನಾದಿಂದ ಉಪಕರಣ ಸಿಗುತ್ತದೆ. ರಾಜ್ಯಕ್ಕೆ ಇಂತಹ ಉಪಕರಣ ಎಷ್ಟು ಬಂದಿದೆ, ಎಲ್ಲೆಲ್ಲಿದೆ ಎಂದು ಪತ್ತೆ ಮಾಡಬೇಕು. ವಿರೋಧ ಪಕ್ಷಗಳ ನಾಯಕರ ಫೋನ್ ಟ್ಯಾಪ್ ಮಾಡಲಾಗುತ್ತಿದೆ ಎಂದು ನನಗೂ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ಬಗ್ಗೆ ಸರ್ಕಾರ ತನಿಖೆ ಮಾಡಿಸಲಿ ಎಂದು ಆಗ್ರಹಿಸಿದರು.
ಫೋನ್ ಟ್ಯಾಪ್ ಮಾಡುವವರನ್ನು ಜೈಲಿಗೆ ಕಳುಹಿಸಬೇಕು. ಹಿಂದೆಯೂ ಈ ರೀತಿ ಮಾಡಿ ಪೊಲೀಸ್ ಅಧಿಕಾರಿಗಳು ತನಿಖೆಗೆ ಒಳಗಾಗಿದ್ದರು. ಸರ್ಕಾರ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ಸರ್ಕಾರ ಇದನ್ನು ಮಾಡಿಲ್ಲವೆಂದು ಎದೆ ಮುಟ್ಟಿ ಹೇಳುವುದಾದರೆ ತನಿಖೆಗೆ ನೀಡಲಿ. ಇದನ್ನು ತಾರ್ಕಿಕ ಅಂತ್ಯಕ್ಕೆ ಮುಟ್ಟಿಸಲಿ ಎಂದು ಒತ್ತಾಯಿಸಿದರು.
ಬೆಂಗಳೂರು ಪದವೀಧರ ಕ್ಷೇತ್ರ ಹಾಗೂ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಕುರಿತು ಚರ್ಚಿಸಲಾಗಿದೆ. ಮತದಾರರನ್ನು ಹುಡುಕಿ ಅವರ ಮನ ಒಲಿಸುವ ಕೆಲಸ ಮಾಡಬೇಕೆಂದು ಹಾಗೂ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಸಭೆ ನಡೆಸಿ, ಪ್ರತಿ ಬೂತ್ಗಳಲ್ಲಿ ಕೆಲಸ ಮಾಡಲು ಸೂಚಿಸಲಾಗಿದೆ. ಟಿಕೆಟ್ ಕುರಿತು ಕೇಂದ್ರದ ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದರು.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…