ರಾಜ್ಯ

ಫೋನ್‌ ಕದ್ದಾಲಿಕೆ ಪ್ರಕರಣವನ್ನು ಸರ್ಕಾರ ಸಿಬಿಐಗೆ ವಹಿಸಲಿ: ಆರ್‌.ಅಶೋಕ್‌ ಆಗ್ರಹ

ಬೆಂಗಳೂರು: ಫೋನ್‌ ಕದ್ದಾಲಿಕೆಯನ್ನು ರಾಜ್ಯ ಸರ್ಕಾರವೇ ಮಾಡುತ್ತಿದೆ. ಇದು ಸುಳ್ಳು ಎಂದಾದರೆ ಕೂಡಲೇ ಈ ಪ್ರಕರಣವನ್ನು ಸರ್ಕಾರ ಸಿಬಿಐಗೆ ವಹಿಸಿ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಾಣಿಸಲಿ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಆಗ್ರಹಿಸಿದರು.

ಬೆಂಗಳೂರು ಪದವೀಧರ ಕ್ಷೇತ್ರ ಹಾಗೂ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಕುರಿತು ಬಿಜೆಪಿ ಪ್ರಮುಖರೊಂದಿಗೆ ಸಭೆಯಲ್ಲಿ ಪಾಲ್ಗೊಂಡರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಫೋನ್‌ ಟ್ಯಾಪಿಂಗ್‌ ಬಗ್ಗೆ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಅವರಿಗೆ ಪೊಲೀಸ್‌ ಅಧಿಕಾರಿಗಳು ಸಂಪರ್ಕದಲ್ಲಿದ್ದು, ಅವರಿಂದ ತಿಳಿದುಕೊಂಡು ಹೇಳಿರಬಹುದು.

ಫೋನ್‌ ಟ್ಯಾಪ್‌ ಮಾಡುವುದು ಅಕ್ರಮವಾಗಿದ್ದು, ಹಣ ಕೊಟ್ಟರೆ ಚೀನಾದಿಂದ ಉಪಕರಣ ಸಿಗುತ್ತದೆ. ರಾಜ್ಯಕ್ಕೆ ಇಂತಹ ಉಪಕರಣ ಎಷ್ಟು ಬಂದಿದೆ, ಎಲ್ಲೆಲ್ಲಿದೆ ಎಂದು ಪತ್ತೆ ಮಾಡಬೇಕು. ವಿರೋಧ ಪಕ್ಷಗಳ ನಾಯಕರ ಫೋನ್‌ ಟ್ಯಾಪ್‌ ಮಾಡಲಾಗುತ್ತಿದೆ ಎಂದು ನನಗೂ ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ಬಗ್ಗೆ ಸರ್ಕಾರ ತನಿಖೆ ಮಾಡಿಸಲಿ ಎಂದು ಆಗ್ರಹಿಸಿದರು.

ಫೋನ್‌ ಟ್ಯಾಪ್‌ ಮಾಡುವವರನ್ನು ಜೈಲಿಗೆ ಕಳುಹಿಸಬೇಕು. ಹಿಂದೆಯೂ ಈ ರೀತಿ ಮಾಡಿ ಪೊಲೀಸ್‌ ಅಧಿಕಾರಿಗಳು ತನಿಖೆಗೆ ಒಳಗಾಗಿದ್ದರು. ಸರ್ಕಾರ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ಸರ್ಕಾರ ಇದನ್ನು ಮಾಡಿಲ್ಲವೆಂದು ಎದೆ ಮುಟ್ಟಿ ಹೇಳುವುದಾದರೆ ತನಿಖೆಗೆ ನೀಡಲಿ. ಇದನ್ನು ತಾರ್ಕಿಕ ಅಂತ್ಯಕ್ಕೆ ಮುಟ್ಟಿಸಲಿ ಎಂದು ಒತ್ತಾಯಿಸಿದರು.

ಬೆಂಗಳೂರು ಪದವೀಧರ ಕ್ಷೇತ್ರ ಹಾಗೂ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಕುರಿತು ಚರ್ಚಿಸಲಾಗಿದೆ. ಮತದಾರರನ್ನು ಹುಡುಕಿ ಅವರ ಮನ ಒಲಿಸುವ ಕೆಲಸ ಮಾಡಬೇಕೆಂದು ಹಾಗೂ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಸಭೆ ನಡೆಸಿ, ಪ್ರತಿ ಬೂತ್‌ಗಳಲ್ಲಿ ಕೆಲಸ ಮಾಡಲು ಸೂಚಿಸಲಾಗಿದೆ. ಟಿಕೆಟ್‌ ಕುರಿತು ಕೇಂದ್ರದ ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

33 mins ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

47 mins ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

52 mins ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

2 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

11 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

11 hours ago