ಬೆಂಗಳೂರು: ಕರ್ನಾಟಕದಲ್ಲಿ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಸರ್ಕಾರದ ನಿರ್ಧಾರಕ್ಕೆ ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದರು. ಈ ಪೈಕಿ ಫೋನ್ ಪೇ ಕಂಪನಿ ಸಿಇಒ ಸಮೀರ್ ನಿಗಮ್ ಕೂಡ ಆಕ್ಷೇಪಿಸಿ ಟ್ವಿಟ್ ಮಾಡಿ ತೀವ್ರ ಅಸಮಾಧಾನ ಹೊರಹಾಕಿ, ಕನ್ನಡಿಗರ ಬಗ್ಗೆ ಕುಹುಕವಾಡಿದ್ದರು.
ಹೀಗಾಗಿ ಸಮೀರ್ ನಡೆಗೆ ಕನ್ನಡಿಗರು ವ್ಯಾಪಕವಾಗಿ ವಿರೋಧಿಸಿ ಫೋನ್ ಪೇ ಬಾಯ್ಕಟ್ ಬಿಸಿ ಮುಟ್ಟಿಸಿ, ತಕ್ಷಣ ಕ್ಷಮೆಕೋರುವಂತೆ ಒತ್ತಾಯಿಸಿದ್ದರು. ಅದರಂತೆಯೇ ಇದೀಗ ಕಡೆಗೂ ಕನ್ನಡಿಗರ ಮುಂದೆ ಸಮೀರ್ ತಲೆಬಾಗಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಫೋನ್ ಪೇ ಸಿಇಒ ಸಮೀರ್ ನಿಗಮ್, ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ, ಯಾರದ್ದಾದರೂ ಭಾವನೆಗಳಿಗೆ ಧಕ್ಕೆಯಾಗಿದ್ದಾರೆ ಅದಕ್ಕೆ ದಯವಿಟ್ಟು ಕ್ಷಮಿಸಿ, ನಾನು ನಿಜವಾಗಿಯೂ ನಿಮಗೆ ಬೇಷರತ್ ಕ್ಷಮೆಯನ್ನು ನೀಡಲು ಬಯಸುತ್ತೇನೆ, ಕರ್ನಾಟಕ, ಕನ್ನಡಿಗರನ್ನು ಅವಮಾನಿಸುವ ಉದ್ದೇಶವಿರಲಿಲ್ಲ ಎಂದು ಕ್ಷಮೆಯಾಚಿಸಿದ್ದಾರೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…